ಕಾಂಗ್ರೆಸ್ ಪ್ರಣಾಳಿಕೆಯಿಂದ ಪ್ರತಿ ಮನೆಯಲ್ಲಿ ಅತ್ತೆ-ಸೊಸೆ ಜಗಳ; ಸಿಎಂ ಇಬ್ರಾಹಿಂ ವ್ಯಂಗ್ಯ
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಒಂದು ವಾರ ಮಾತ್ರ ಬಾಕಿ ಇರುವಾಗ ರಾಜಕೀಯ ಪಕ್ಷಗಳು ಪ್ರಚಾರದ ಭರಾಟೆಯಲ್ಲಿ ತೊಡಗಿವೆ. ಇದೇ ವೇಳೆ ಮತದಾರರ ಮನ ಗೆಲ್ಲಲು ಎಲ್ಲ ಮೂರು ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರತಿ ಮನೆಯ ಯಜಮಾನಿಗೆ 2000 ರೂ. ಹಣ ನೀಡುವುದಾಗಿ ಭರವಸೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೆಡಿ(ಎಸ್) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರತಿ ಮನೆಯಲ್ಲಿ ಅತ್ತೆ-ಸೊಸೆ ಜಗಳವಾಡುವ ಕೆಲಸ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಶೇರು ಸರ್ಕಲ್ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿದರು. "2013ರಿಂದ 2018ರವರೆಗೆ ಅಧಿಕಾರದಲ್ಲಿದ್ದಾಗ ಬಜರಂಗದಳ ನೆನಪಾಗಲಿಲ್ಲವಾ?, ಸರ್ವಜನಾಂಗದ ಶಾಂತಿಯ ತೋಟ ಆಗಬೇಕೆಂದರೆ ಜೆಡಿಎಸ್ನಿಂದ ಮಾತ್ರ ಸಾಧ್ಯ," ಎಂದರು.
"ಜೆಡಿಎಸ್ ಪ್ರಣಾಳಿಕೆ ಅಂಶಗಳನ್ನು ಕಾಂಗ್ರೆಸ್ ಕಾಪಿ ಮಾಡಿದ್ದು, ಅವರು ನಮ್ಮನ್ನೇ ಅನುಕರಣೆ ಮಾಡಬೇಕು. ಅದನ್ನು ಬಿಟ್ರೆ ಅವರಿಗೆ ಹೇಳೋಕೆ ಏನಿದೆ?, ರೈತರಿಗೆ ಎಕರೆಗೆ 10 ಸಾವಿರ ರೂ. ಕೊಡುವುದಾಗಿ ನಾವು ಹೇಳಿದ್ದೇವೆ. ಒಂದು ಮನೆಗೆ 2 ಸಾವಿರ ರೂ. ಕೊಡ್ತೀವಿ ಅಂತ ಹೇಳಿ ಅತ್ತೆ-ಸೊಸೆಗೆ ಜಗಳ ತಂದಿಡ್ತಿದ್ದಾರೆ. ಅತ್ತೆಗೆ ಕೊಡ್ತಾರೋ, ಸೊಸೆಗೆ ಕೊಡ್ತಾರೋ ಗೊತ್ತಿಲ್ಲವೆಂದರು. ಈಗ ನಾವು 65 ವರ್ಷ ವಯಸ್ಸಾದ ಮೇಲೆ 5 ಸಾವಿರ ಕೊಡ್ತೀವಿ," ಎಂದು ಹೇಳಿದರು.

ಜೆಡಿಎಸ್ಗೆ ಮತ ಹಾಕಿದರೆ, ಅದು ಕಾಂಗ್ರೆಸ್ಗೆ ಮತ ಹಾಕಿದ ಹಾಗೆ ಎಂಬ ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಇಬ್ರಾಹಿಂ, "ಬಿಜೆಪಿ-ಕಾಂಗ್ರೆಸ್ ಇಬ್ಬರೂ ದಾಯಾದಿಗಳು. ರಾಜ್ಯದ ಮತದಾರರಿಗೆ ಎಲ್ಲವೂ ಗೊತ್ತಾಗುತ್ತದೆ. ನಾವು ಬಿಜೆಪಿ-ಕಾಂಗ್ರೆಸ್ಸೂ ಅಲ್ಲ. ನಾವು ಕನ್ನಡ ನಾಡಿನ ಮಕ್ಕಳು. ಕನ್ನಡಿಗರ ಸ್ವಾಭಿಮಾನ ಉಳಿಯಬೇಕು," ಎಂದು ಗುಡುಗಿದರು.
"ಚನ್ನಪಟ್ಟಣಕ್ಕೆ ನೀರು ಕೊಟ್ಟಿದ್ದು ಯಾರು?, ಬೆಂಗಳೂರಿಗೆ ಕಾವೇರಿ ನೀರು ಕೊಟ್ಟಿದ್ದು ಯಾರು?, 92 ವರ್ಷ ವಯಸ್ಸಾದರೂ ದೇವೇಗೌಡರು ರಾಜ್ಯದ ಜನತೆಗೆ ಇಂದಿಗೂ ಹೋರಾಡುತ್ತಿದ್ದಾರೆ. ಚನ್ನಪಟ್ಟಣ ಕುಮಾರಸ್ವಾಮಿ ಕ್ಷೇತ್ರ. ಚನ್ನಪಟ್ಟಣ ಮತ್ತೊಮ್ಮೆ ಕರ್ನಾಟಕದ ಕಿರೀಟ ಆಗಬೇಕು. ದೇಶದ ಭೂಪಟದಲ್ಲಿ ಚನ್ನಪಟ್ಟಣ ರಾರಾಜಿಸಬೇಕು," ಎಂದು ಸಿಎಂ ಇಬ್ರಾಹಿಂ ಹೇಳಿದರು.

"ಸಿ.ಪಿ. ಯೋಗೇಶ್ವರ್ ನೀನು ಯಾವ ಪಾರ್ಟಿಯಲ್ಲಾದರೂ ಇರು, ಆದರೆ ದೇವೇಗೌಡರಿಗೆ ಗೌರವ ಕೊಡುವುದನ್ನು ಕಲಿ. ಮೋದಿ ರೀತಿ ನಾವು ರೋಡ್ ಶೋ ಮಾಡಲು ಸಾಧ್ಯವಿಲ್ಲ. ಹಳ್ಳಿ ಹಳ್ಳಿಯಲ್ಲೂ ನಾನು ಕುಮಾರಸ್ವಾಮಿ ಸುತ್ತಾಡಿದ್ದೇವೆ. ಮುಸಲ್ಮಾನರು ಕಾಂಗ್ರೆಸ್ಗೆ ಮತ ಹಾಕಬೇಡಿ," ಎಂದು ಸಿಎಂ ಇಬ್ರಾಹಿಂ ಮನವಿ ಮಾಡಿದರು.
ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿಯನ್ನು ಬೆಂಬಲಿಸಿದರೆ ಅವರು ಮುಸ್ಲಿಂ ಪರ ನಿಲ್ಲುತ್ತಾರೆ. ಮುಸ್ಲಿಮರಿಗೆ ಶೇ.4 ಮೀಸಲಾತಿ ಕೊಟ್ಟಿದ್ದು, ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ ಬಗ್ಗೆ ಹರಿಸಿದ್ದು ಎಚ್.ಡಿ. ದೇವೇಗೌಡರು. ಮೀಸಲಾತಿ, ಹಿಜಾಬ್, ಹಲಾಲ್ ನಿಷೇಧ ಹೇರುವುದನ್ನು ವಿರೋಧಿಸಿದ್ದು ಎಚ್.ಡಿ. ಕುಮಾರಸ್ವಾಮಿ ಎಂದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications