ನನ್ನ ಎದುರಾಳಿ ಜೆಡಿಎಸ್ ಪಕ್ಷ, ಅದನ್ನು ಸೋಲಿಸುವುದೇ ಗುರಿ: ಬಾಲಕೃಷ್ಣ
ಬಿಡದಿ (ರಾಮನಗರ ಜಿಲ್ಲೆ), ಏಪ್ರಿಲ್ 17: ನನಗೆ ಜೆಡಿಎಸ್ ಪಕ್ಷವೇ ಎದುರಾಳಿ. ಇಲ್ಲಿ ಆ ಪಕ್ಷವನ್ನು ಸೋಲಿಸುವುದೇ ನನ್ನ ಗುರಿ ಎಂದು ಬಿಡದಿ ಹೋಬಳಿಯ ಕಾರ್ಯಕರ್ತರ ಸಭೆಯಲ್ಲಿ ಮಾಗಡಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಹೇಳಿದರು.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಜೆಡಿಎಸ್ ನಿಂದ ಹೊರಬಂದು, ಎಚ್.ಡಿ.ಕುಮಾರಸ್ವಾಮಿಗೆ ಸಡ್ಡು ಹೊಡೆದು, ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಬಾಲಕೃಷ್ಣ. ಜತೆಗೆ ಮಾಗಡಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ಒಂದು ದಿನ ಕಳೆಯುವ ಮುನ್ನವೇ ಎಚ್.ಸಿ.ಬಾಲಕೃಷ್ಣ ಮತ ಬೇಟೆಗೆ ಮುಂದಾಗಿದ್ದಾರೆ. ಬಿಡದಿ ಹೋಬಳಿಯ ಗ್ರಾಮ ಪಂಚಾಯಿತಿಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಬಾಲಕೃಷ್ಣ, ಇದೇ 20ನೇ ತಾರೀಕು ಶುಕ್ರವಾರದಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಡಿಕೆಶಿ ಸಹೋದರರೇ ಅಭ್ಯರ್ಥಿ, ನಾನು ಸೇವಕ
ರಾಮನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಖಾತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ಅಪ್ತ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೂಡ ತಾಲೂಕಿನ ಪ್ರತಿ ಹಳ್ಳಿಗಳಿಗೆ ತೆರಳಿ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸಾಧನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ, ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಮಂತ್ರಿಗಳು ಹಾಗೂ ಶಾಸಕರು. ನಾನು ಇಲ್ಲಿ ಸೇವಕ ಮಾತ್ರ. ಕುಮಾರಸ್ವಾಮಿ ಅವರು ಎರಡಲ್ಲ, ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿ. ನನಗೆ ಕಾಂಗ್ರೆಸ್ ಪಕ್ಷ ಜವಬ್ದಾರಿ ನೀಡಿದೆ. ಅದರಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications