ರಾಮನಗರ : ಮಾಗಡಿ ಕ್ಷೇತ್ರದ ಚುನಾವಣಾ ಕಣದ ಚಿತ್ರಣ
ರಾಮನಗರ, ಏಪ್ರಿಲ್ 17 : ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ತವರೂರು ರಾಮನಗರ ಜಿಲ್ಲೆಯ ಮಾಗಡಿ. ಮಾಗಡಿಯಲ್ಲಿ 2018ರ ಚುನಾವಣೆ ಕಣ ರಂಗೇರಿದೆ. ಕ್ಷೇತ್ರದ ಚುನಾವಣಾ ಕಣ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ.
ಒಂದು ಕಾಲದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ಪರಮಾಪ್ತ ಗಳೆಯರಾಗಿದ್ದ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜೆಡಿಎಸ್ನಿಂದ ಬಂಡಾಯವೆದ್ದು ಕಾಂಗ್ರೆಸ್ ಸೇರಿದ್ದಾರೆ. ಮಾಗಡಿ ಕ್ಷೇತ್ರದಲ್ಲಿ ಒಮ್ಮೆ ಬಿಜೆಪಿ ಹಾಗೂ ಮೂರು ಭಾರಿ ಜೆಡಿಎಸ್ ನಿಂದ ಗೆದ್ದಿದ್ದ ಬಾಲಕೃಷ್ಣ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ.
ಕಳೆದ ಚುನಾವಣೆಯಲ್ಲಿ ಬಾಲಕೃಷ್ಣ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡಿದೆ. ಮಾಗಡಿ ಕ್ಷೇತ್ರದಲ್ಲಿ ಅವರೇ ಜೆಡಿಎಸ್ ಅಭ್ಯರ್ಥಿ. ಒಂದು ಕಾಲದ ಆಪ್ತಮಿತ್ರ ಹಾಗೂ ಇಂದಿನ ರಾಜಕೀಯ ಶತ್ರು ಬಾಲಕೃಷ್ಣ ಸೋಲಿಸಲು ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಾಗಡಿಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಕಣಕ್ಕೆ ಇಳಿದಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೂಡ ಅಲ್ಪ ಸಾಂಪ್ರದಾಯಿಕ ಮತ ಹೊಂದಿದೆ. ಬಿಜೆಪಿಯಿಂದ ಹನುಂತರಾಜು ಅವರು ಅಭ್ಯರ್ಥಿ.

ಮಾಗಡಿ ಕ್ಷೇತ್ರದಲ್ಲಿ ಗೆದ್ದವರು, ಸೋತವರು
2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್.ಸಿ ಬಾಲಕೃಷ್ಣ ಅವರು 74,821 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಎ.ಮಂಜು ಅವರು 60,462 ಮತಗಳನ್ನು ಪಡೆದಿದ್ದರು. ಬಾಲಕೃಷ್ಣ ಅವರು 14, 359 ಮತಗಳ ಅಂತರದಿಂದ ಗೆದ್ದಿದ್ದರು.
ಈ ಬಾರಿ ಎಚ್.ಸಿ.ಬಾಲಕೃಷ್ಣ ಅವರು ಕಾಂಗ್ರೆಸ್ ಅಭ್ಯರ್ಥಿ. ಎ.ಮಂಜು ಅವರು ಜೆಡಿಎಸ್ ಅಭ್ಯರ್ಥಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಪೈಪೋಟಿ ಇದೆ. ಯಾರಿಗೆ ಗೆಲುವು? ಕಾದು ನೋಡಬೇಕು.

ಅಂಕಿ ಸಂಖ್ಯೆಗಳಲ್ಲಿ ಲೆಕ್ಕಾಚಾರ
ಮಾಗಡಿ ಕ್ಷೇತ್ರದ ಒಟ್ಟು ಮತದಾರರು 2013ರಲ್ಲಿ 2,20957. ಪುರುಷರು 1,11998 ಮತ್ತು ಮಹಿಳೆಯರು 1,08959.
ಒಕ್ಕಲಿಗರು : 1,18400, ದಲಿತರು : 44000, ಮುಸ್ಲಿಮರು : 24860, ಲಿಂಗಾಯತರು :16400, ಕುರುಬರು : 3400, ದೇವಾಂಗ : 6200, ಕ್ರೈಸ್ತ : 1200, ಇತರೆ : 6491.
2018ರ ಚುನಾವಣೆಯಲ್ಲಿ ಪುರುಷರು 112598, ಮಹಿಳೆಯರು 110520, ತೃತೀಯ ಲಿಂಗ 21, ಒಟ್ಟು ಮತದಾರರು 223139.

ಕ್ಷೇತ್ರದ ಅಭ್ಯರ್ಥಿಗಳ ಪ್ಲಸ್ ಪಾಯಿಂಟ್
ಈ ಬಾರಿಯ ಚುನಾವಣೆಗೆ ಜೆಡಿಎಸ್ನಿಂದ ಎ.ಮಂಜುನಾಥ್, ಕಾಂಗ್ರೆಸ್ನಿಂದ ಎಚ್.ಸಿ.ಬಾಲಕೃಷ್ಣ, ಬಿಜೆಪಿಯಿಂದ ಹನುಮಂತರಾಜು ಅಭ್ಯರ್ಥಿಗಳು.
ಎಚ್.ಸಿ.ಬಾಲಕೃಷ್ಣ ಅವರಿಗೆ ನಾಲ್ಕು ಬಾರಿ ಗೆದ್ದ ಅಂಶ ಸಹಾಯಕವಾಗುವ ನಿರೀಕ್ಷೆ ಇದೆ. ಕ್ಷೇತ್ರದಲ್ಲಿ ಮಾಡಿರುವ ಕೆಲಸ, ಕಾಂಗ್ರೆಸ್ ಸೇರಿದ ಮೇಲೆ ಅಹಿಂದ ಮತಗಳು ಕೈಹಿಡುಯುತ್ತವೆ ಎನ್ನುವ ನಂಬಿಕೆ ಇದೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಜೆಡಿಎಸ್ ಪಕ್ಷಕ್ಕೆ ದ್ರೋಹ ಎಸಗಿದ ಆರೋಪ, ಬಹಿರಂಗವಾಗಿ ಪೋಲಿಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದು, ಸಾರ್ವಜನಿಕವಾಗಿ ಬಾಯಿ ಹರಿಬಿಟ್ಟು ಅಸಂಬದ್ಧ ಪದಬಳಕೆ ಮಾಡಿದ್ದು ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ.

ಜೆಡಿಎಸ್ ಪ್ಲಸ್ ಪಾಯಿಂಟ್
ಜೆಡಿಎಸ್ನ ಎ.ಮಂಜು ಅವರು ಕ್ಷೇತ್ರದಲ್ಲಿ ತಳಮಟ್ಟದಿಂದ ಕಾರ್ಯಕರ್ತರನ್ನು ಸಂಘಟನೆ ಮಾಡಿರುವುದು, ಹೇಮಾವತಿಯಿಂದ ಮಾಗಡಿಗೆ ನೀರು ತರಲು ಶ್ರಮಿಸಿರುವುದು ಸಹಾಯಕವಾಗುವ ನಿರೀಕ್ಷೆ ಇದೆ.
ಅರ್ಥಿಕ ಸಂಪನ್ಮೂಲದ ಕೊರತೆ, ಕ್ಷೇತ್ರಕ್ಕೆ ವಲಸೆ ಅಭ್ಯರ್ಥಿ ಎನ್ನುವ ಆರೋಪ ಚುನಾವಣೆಯಲ್ಲಿ ಹಿನ್ನಡೆ ಉಂಟು ಮಾಡುವ ನಿರೀಕ್ಷೆ ಇದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications