ಬೆಂಗಳೂರು ದಕ್ಷಿಣದ ಈ ಜಿಲ್ಲೆಯ ನಕಲಿ ಬಿಪಿಎಲ್ ಕಾರ್ಡ್ದಾರರಿಗೆ ಶಾಕ್
BPL Ration Card: ರಾಜ್ಯದಲ್ಲಿ ಅನರ್ಹರ ಬಳಿಯಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯವನ್ನು ಸರ್ಕಾರ ಮುಂದಿವರೆಸಿದೆ. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆಯಾದ ರಾಮನಗರದಲ್ಲಿ ಒಂದಲ್ಲ.. ಎರಡಲ್ಲ.. ಸಾವಿರ ಲೆಕ್ಕದಲ್ಲಿ ಬಿಪಿಎಲ್ ಕಾರ್ಡ್ಗಳು ಶಂಕಾಸ್ಪದವಾಗಿದ್ದು, ಇಂತಹವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ.
ಆಹಾರ ಇಲಾಖೆಯು ರಾಜ್ಯಾದ್ಯಂತ ನಕಲಿ ಬಿಪಿಎಲ್ ಕಾರ್ಡುದಾರರ ವಿರುದ್ಧ ಸಮಯ ಸಾರುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನರ್ಹರು ಪಡೆದಂತಹ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದುಪಡಿಸುತ್ತಿದ್ದು, ಅಂತಹವರನ್ನು ಎಪಿಎಲ್ಗೆ ವರ್ಗಾಹಿಸುವ ಕೆಲಸವನ್ನು ಮಾಡುತ್ತಿದೆ. ಅರ್ಹರಿಗೆ ಸಮಯಕ್ಕೆ ಸರಿಯಾಗಿ ಪಡಿತರ ವಿತರಣೆ ಮಾಡುವುದು ಇದರ ಉದ್ದೇಶವಾಗಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಯಾರೆಲ್ಲಾ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆಯೋ ಅಂತಹವರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವಂತೆ ತಿಳಿಸಿದ್ದಾರೆ. ಈ ಸೂಚನೆ ಮೇರೆಗೆ ಅನರ್ಹ ಬಿಪಿಎಲ್ ಕಾರ್ಡ್ದಾರರ ವಿರುದ್ಧ ಆಹಾರ ಇಲಾಖೆ ಅನರ್ಹರಿಗೆ ಸೂಕ್ತ ಕ್ರಮದೊಂದಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡುತ್ತಿದೆ. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಂಕಾಸ್ಪದ 15,053 ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ.
ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ಗಳನ್ನು ನೀಡಲಾಗುತ್ತದೆ. ಆದರೆ, ಅರ್ಹರಲ್ಲದವರು ಕೂಡ ಈ ಕಾರ್ಡ್ ಹೊಂದಿದ್ದು, ಇದರಿಂದ ಬಡವರಿಗೆ ಸಿಗಬೇಕಾದ ಪಡಿತರ ಸರಿಯಾಗಿ, ಸರಿಯಾದ ಸಮಯಕ್ಕೆ ಸಿಗದಂತಾಗಿದೆ. ಆದ್ದರಿಂದ ರಾಜ್ಯದ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ.
ಅನರ್ಹರ ಬಳಿ ಇರುವ ಬಿಪಿಎಲ್ ಕಾರ್ಡ್ಗಳನ್ನು ತಕ್ಷಣ ರದ್ದುಪಡಿಸಿ. ಕೆಲವು ಶ್ರೀಮಂತರು ಸೇರಿದಂತೆ ಸರ್ಕಾರಿ ನೌಕರರೇ ಅನ್ನಭಾಗ್ಯ ಯೋಜನೆ ಫಲಾನುಭವಿಗಳು ಆಗಿದ್ದಾರೆ. ಇಂತಹವರ ಪಡಿತರ ಚೀಟಿ ರದ್ದು ಮಾಡಲಿ ನಿಮಗೆ ಇನ್ನೆಷ್ಟು ಸಮಯ ಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದರು.
ಈ ಖಡಕ್ ಸೂಚನೆಯಿಂದ ಮತ್ತಷ್ಟು ಚುರುಕಾಗಿರುವ ಆಹಾರ ಇಲಾಖೆ ಅಧಿಕಾರಿಗಳು 2025ರ ಆಗಸ್ಟ್ ಅಂತ್ಯಕ್ಕೆ ಹಲವು ಮೂಲಗಳಿಂದ ಮಾಹಿತಿ ಕಲೆಹಾಕಿದೆ. ಈ ವೇಳೆ ಅನುಮಾನಾಸ್ಪದ ಬಿಪಿಎಲ್ ಪಡಿತರದಾರರನ್ನು ಗುರುತಿಸಿ ಅವುಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಇವು ಅನರ್ಹ ಎಂದು ಸಾಬೀತಾದರೆ, ಅಂತಹವರ ಬಳಿಯ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ.
ಹಿಂದಿನಿಂದಲೂ ಸಹ ಅನರ್ಹರು ಕೂಡ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆಗ ಸರ್ಕಾರ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳ ರದ್ದುಪಡಿಸಲು ಮುಂದಾಗಿತ್ತು. ಆದರೆ, ಈ ವೇಳೆ ಬಡವರ ಬಿಪಿಎಲ್ ಕಾರ್ಡ್ಗಳನ್ನು ಸಹ ರದ್ದು ಮಾಡಿದ್ದಾರೆ ಎಂದು ಆರೋಪಿಸಿ ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದರು. ಬಳಿಕ ಸರ್ಕಾರ ಯಾರೆಲ್ಲ ಅರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳು ರದ್ದು ಮಾಡಲಾಗಿದೆಯೋ ಅವರಿಗೆ ಮತ್ತೆ ಹಿಂತಿರುಗಿಸಿ ಅವರಿಗೆ ಸಿಗಬೇಕಾದ ಪಡಿತರ ನೀಡಲಾಗುತ್ತದೆ ಎಂದು ಹೇಳಿತ್ತು. ಆದರೆ, ಇದೀಗ ಸರಿಯಾಗಿ ಪರಿಶೀಲನೆ ನಡೆಸಿದ ಬಳಿಕವೇ ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಈ ಮಹತ್ವದ ನಿರ್ಧಾರದಿಂದ ಬಡವರಿಗೆ ತುಂಬಾ ಪ್ರಯೋಜನಾ ಆಗಲಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications