ಎಚ್ಡಿಕೆ, ಸಿಪಿವೈ ಗುದ್ದಾಟ: ಚನ್ನಪಟ್ಟಣಕ್ಕೆ 24 ಗಂಟೆಗಳಲ್ಲಿ 3ನೇ ತಹಶೀಲ್ದಾರ ನೇಮಕ
ರಾಮನಗರ, ಏಪ್ರಿಲ್ 30: ಶುಕ್ರವಾರವಷ್ಟೇ ಚನ್ನಪಟ್ಟಣ ತಾಲ್ಲೂಕಿಗೆ ನೂತನ ತಹಶೀಲ್ದಾರರಾಗಿ ಬಿ.ಕೆ. ಸುದರ್ಶನ್ ಅವರನ್ನು ನೇಮಕ ಮಾಡಿದ್ದ ರಾಜ್ಯ ಸರ್ಕಾರ, ಇಂದು ದಿಢೀರನೆ ಬಿ.ಕೆ. ಸುದರ್ಶನ್ ಎತ್ತಂಗಡಿ ಮಾಡಿ ಆ ಸ್ಥಾನಕ್ಕೆ ಜೆ.ಪಿ. ಹರ್ಷವರ್ಧನ್ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ತಹಶೀಲ್ದಾರ ಬಿ.ಕೆ. ಸುದರ್ಶನ್ ಅವರನ್ನು ಯೋಜನಾ ವ್ಯವಸ್ಥಾಪಕರು, ಕುಟುಂಬ ಇ-ಆಡಳಿತ ಕೇಂದ್ರ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ತಾಲ್ಲೂಕಿಗೆ ಮೂರನೇ ತಹಶೀಲ್ದಾರರನ್ನು ತಾಲ್ಲೂಕಿನ ಜನತೆ ನೋಡಿದಂತಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಒತ್ತಡಕ್ಕೆ ಮಣಿದು ನಾಗೇಶ್ ಅವರನ್ನು ಎತ್ತಂಗಡಿ ಮಾಡಿದ್ದ ಸರ್ಕಾರ, ಮತ್ತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರೋಧಕ್ಕೆ ಹೆದರಿ ಹರ್ಷವರ್ಧನ್ ಅವರನ್ನು ನೇಮಕ ಮಾಡಿದೆ ಎನ್ನಲಾಗಿದೆ.

ಎಚ್ಡಿಕೆ ತಮ್ಮ ಅಪ್ತ ನಾಗೇಶ್ ಪರ ಬ್ಯಾಂಟಿಗ್ ಮಾಡಿದರೆ. ಇತ್ತ ಸಿಪಿವೈ ತಮ್ಮ ಅಪ್ತ ಬಿ.ಕೆ. ಸುದರ್ಶನ್ ಪರ ಬ್ಯಾಟಿಂಗ್ ಮಾಡಿದ್ದರು. ಇಬ್ಬರು ನಾಯಕರ ಒತ್ತಡಕ್ಕೆ ಮ್ಯೂಜಿಕಲ್ ಚೇರ್ ಅಂತಾಗಿರುವ ಚನ್ನಪಟ್ಟಣ ತಹಶೀಲ್ದಾರ ಸ್ಥಾನಕ್ಕೆ ಮೂರನೇ ವ್ಯಕ್ತಿಯನ್ನು ನಿಯೋಜಿಸಿ ಸರ್ಕಾರ ಜಾಣನಡೆ ಪ್ರದರ್ಶಿಸಿದೆ.
ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದ ಬಿ.ಕೆ. ಸುದರ್ಶನ್
ಕಳೆದ ಕೆಲವು ತಿಂಗಳಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ನಡುವೆ ಏರ್ಪಟ್ಟಿದ್ದ ಚನ್ನಪಟ್ಟಣ ತಾಲ್ಲೂಕು ತಹಶೀಲ್ದಾರ ವರ್ಗಾವಣೆ ಕುಸ್ತಿಯಲ್ಲಿ ಕೊನೆಗೂ ಸಿ.ಪಿ. ಯೋಗೇಶ್ವರ್ ಮೇಲುಗೈ ಸಾಧಿಸಿದ್ದರು.

ಚನ್ನಪಟ್ಟಣ ತಾಲ್ಲೂಕಿನ ನೂತನ ತಹಶೀಲ್ದಾರ ಆಗಿ ಬಿ.ಕೆ. ಸುದರ್ಶನ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದರು. ತಹಶೀಲ್ದಾರ ನಾಗೇಶ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಬಿ.ಕೆ. ಸುದರ್ಶನ್ ಅವರನ್ನು ನೇಮಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್. ಸುಶೀಲಾ ಆದೇಶ ಹೊರಡಿಸಿದ್ದರು. ನಿರ್ಗಮಿತ ತಹಶೀಲ್ದಾರ ನಾಗೇಶ್ ಅವರಿಗೆ ಸರ್ಕಾರ ಯಾವುದೇ ಸ್ಥಳ ನಿಯುಕ್ತಿ ಮಾಡಿರಲಿಲ್ಲ.
ಜಿಲ್ಲಾಧಿಕಾರಿಗಳಿಂದ ಅಧಿಕಾರ ಸ್ವೀಕರಿಸಿದ ಬಿ.ಕೆ. ಸುದರ್ಶನ್
ಕಳೆದ 20 ದಿನಗಳ ಹಿಂದೆ ವರ್ಗಾವಣೆ ಆದೇಶ ಪತ್ರದೊಂದಿಗೆ ತಾಲ್ಲೂಕು ತಹಶೀಲ್ದಾರ್ ಅಧಿಕಾರ ವಹಿಸಿಕೊಳ್ಳಲು ಬಂದ ಬಿ.ಕೆ. ಸುದರ್ಶನ್ರವರಿಗೆ ಕೆಲ ಗಂಟೆಯಲ್ಲೇ ಸರ್ಕಾರ ತಮ್ಮ ನೇಮಕವನ್ನು ಹಿಂಪಡೆದಿದ್ದು ಮುಜುಗರ ತಂದಿತ್ತು. ಹಾಗಾಗಿ ಈ ಬಾರಿ ವರ್ಗಾವಣೆ ಸುದ್ದಿ ಹರಡುವ ಮೊದಲೇ ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸರ್ಕಾರದ ವರ್ಗಾವಣೆಯ ಆದೇಶ ಪ್ರತಿ ಕೈ ಸೇರಿದ ತಕ್ಷಣ ಯಾರಿಗೂ ಸುಳಿವು ಬಿಟ್ಟುಕೊಡದೆ ಜಿಲ್ಲೆಗೆ ಆಗಮಿಸಿದ ಬಿ.ಕೆ. ಸುದರ್ಶನ್, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ಅವರಿಂದ ಅಧಿಕಾರ ಸ್ವೀಕಾರ ಮಾಡಿ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿದ ಅವರು, ಶುಕ್ರವಾರವೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ವಾಡಿಕೆಯಂತೆ ಹಿಂದಿನ ತಹಶೀಲ್ದಾರ ನಾಗೇಶ್ ಅವರಿಂದ ಬಿ.ಕೆ. ಸುದರ್ಶನ್ ಅಧಿಕಾರ ಸ್ವೀಕಾರ ಮಾಡಿಲ್ಲ. ಈ ಸಮಯದಲ್ಲಿ ಹಾಲಿ ತಹಶೀಲ್ದಾರ ನಾಗೇಶ್ ಕಾರ್ಯನಿಮಿತ್ತ ಹೊರ ಹೋಗಿದ್ದರು ಎನ್ನಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications