ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುತ್ತಿಗೆದಾರ ವೃತ್ತಿಯಿಂದ ಎರಡೆರಡು ಬಾರಿ ಸಿಎಂ ಗಾದಿ ತನಕ ಎಚ್ ಡಿಕೆ ಜರ್ನಿ

By ರಾಮನಗರ ಪ್ರತಿನಿಧಿ
|
Google Oneindia Kannada News

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಕೂಟದ ಸರಕಾರ ಹದಿನಾಲ್ಕು ತಿಂಗಳಲ್ಲಿ ಪತನವಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಸಾಬೀತು ಮಾಡಲು ಮಂಗಳವಾರ ವಿಫಲರಾಗಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಅವರ ಜೀವನದ ಪ್ರಮುಖ ಘಟನೆಗಳು ಹೀಗಿವೆ.

1959 (ಡಿಸೆಂಬರ್ 16): ಹಾಸನ ಜಿಲ್ಲೆ ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನನ

1980 : ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ

ವಿಶ್ವಾಸಮತದಲ್ಲಿ ಸೋಲು; ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಪತನವಿಶ್ವಾಸಮತದಲ್ಲಿ ಸೋಲು; ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಪತನ

1982 : ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರನಾಗಿ ವೃತ್ತಿ ಜೀವನ ಆರಂಭ

1986 (ಮಾರ್ಚ್ 13) : ಅನಿತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ

1987- 88 : ಸಿನಿಮಾ ರಂಗದಲ್ಲಿ ವಿತರಕ, ಪ್ರದರ್ಶಕರಾಗಿ ಪ್ರವೇಶ

1996 : ಕನಕಪುರ ಲೋಕಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಪ್ರಪ್ರಥಮವಾಗಿ ಸ್ಪರ್ಧಿಸಿ ಗೆಲುವು

Karnataka political crisis: Life journey of HD Kumaraswamy from contractor to CM

1998 : ಕನಕಪುರ ಲೋಕಸಭೆ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಸ್ಪರ್ಧಿಸಿ, ಪರಾಭವಗೊಂಡರು

1999 : ವಿಧಾನಸಭೆ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲು

2004 : ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆ

2005 : ಜಾತ್ಯತೀತ ಜನತಾ ದಳ ಕಾರ್ಯಾಧ್ಯಕ್ಷರಾಗಿ ನೇಮಕ

2006: ಜೆಡಿಎಸ್ - ಬಿಜೆಪಿ ಸಮ್ಮಿಶ್ರ ಸರಕಾರ ರಚನೆಗೊಂಡು ಹದಿನೆಂಟನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

Live Updates ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕುಮಾರಸ್ವಾಮಿLive Updates ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕುಮಾರಸ್ವಾಮಿ

2007 (ಅಕ್ಟೋಬರ್ 9) : ರಾಜ್ಯದಲ್ಲಿ 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು.

Karnataka political crisis: Life journey of HD Kumaraswamy from contractor to CM

2007 : ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುನರಾಯ್ಕೆ

2009 : ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆ

2009 : ಕೇಂದ್ರ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಪಾರ್ಲಿಮೆಂಟ್ ಹೌಸ್ ಕಾಂಪ್ಲೆಕ್ಸ್ ನ ಮ್ಯಾನೇಜ್ ಮೆಂಟ್ ಕಮಿಟಿ ಸದಸ್ಯ

2013 : ಸಂಸತ್ ಸ್ಥಾನಕ್ಕೆ ರಾಜಿನಾಮೆ, ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಮೂರನೇ ಬಾರಿ ಆಯ್ಕೆ

2013 : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ

2014 : ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ

ರಾಮನಗರದಿಂದ ಬಂದ ಮುಖ್ಯಮಂತ್ರಿಗಳು; ಒಲಿಯದ ಪೂರ್ಣಾವಧಿ ಆಡಳಿತರಾಮನಗರದಿಂದ ಬಂದ ಮುಖ್ಯಮಂತ್ರಿಗಳು; ಒಲಿಯದ ಪೂರ್ಣಾವಧಿ ಆಡಳಿತ

2014 : ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ, ಸೋಲು

2018 : ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆ

2018 (ಮೇ 19): ವಿಧಾನಸೌಧದಲ್ಲಿ ಚನ್ನಪಟ್ಟಣ ಕ್ಷೇತ್ರ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ

2018 ಮೇ 23: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

2019 ಜುಲೈ 23: ಬಹುಮತ ಕಳೆದುಕೊಂಡ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರ, ರಾಜೀನಾಮೆ ಸಲ್ಲಿಕೆ ಸಾಧ್ಯತೆ

English summary
Karnataka political crisis: Life journey of HD Kumaraswamy from contractor to two time Karnataka chief minister. Here is the life events of HD Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X