ಚರ್ಮಗಂಟು ರೋಗ ಭೀತಿ: ರಾಮನಗರ ಕೆಂಗಲ್ ದನಗಳ ಜಾತ್ರೆ ರದ್ದು
ರಾಮನಗರ, ಜನವರಿ 12: ನಾಡಿನ ವರ್ಷದ ಮೊದಲ ರಾಸುಗಳ ಜಾತ್ರೆ ಎಂದು ಪ್ರಖ್ಯಾತಿ ಪಡೆದಿರುವ ಕೆಂಗಲ್ ದನಗಳ ಜಾತ್ರೆ ಇತ್ತೀಚೆಗೆ ಹಸುಗಳಲ್ಲಿ ಉಲ್ಬಣಗೊಂಡ ಚರ್ಮಗಂಟು ರೋಗದ ಭೀತಿ ಹಿನ್ನೆಲೆಯಲ್ಲಿ ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲೆಯಾದ್ಯಂತ ರಾಸುಗಳ ಚರ್ಮಗಂಟು ರೋಗ ಬಾಧೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 19ರ ವರೆಗೆ ಜಾನುವಾರುಗಳ ಜಾತ್ರೆ, ದನಗಳ ಸಂತೆ ಹಾಗೂ ನೆರೆ ರಾಜ್ಯಗಳಿಂದ ಒಳಗೆ ಅಥವಾ ಹೊರಗೆ ಜಾನುವಾರುಗಳ ಸಾಗಾಣಿಕೆಯನ್ನು ಸಹ ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದ ಜಾನುವಾರು ಜಾತ್ರೆಯನ್ನು ರದ್ದುಮಾಡಿರುವುದಾಗಿ ದೇವಾಲಯದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಜಾತ್ರೆ ನಡೆದರೆ ಜಾನುವಾರುಗಳ ಚಲನವಲಗಳಿಂದ ಚರ್ಮಗಂಟು ರೋಗ ಹೆಚ್ಚಾಗಿ ಹರಡುವ ಸಂಭವವಿರುವುದರಿಂದ ಮುನ್ನೆಚ್ಚರಿಕ ಕ್ರಮವಾಗಿ ಜಾನುವಾರು ಜಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರು ಹಾಗೂ ಅಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ.

ಹಸು ಮಾರಾಟಕ್ಕೆ ಮುಂದಾಗಿದ್ದ ರೈತರಿಗೆ ಭಾರೀ ನಿರಾಸೆ
ಐತಿಹಾಸಿಕ ಹಾಗೂ ಸುಗ್ಗಿಯ ಮೊದಲ ದನಗಳ ಜಾತ್ರೆ ಎಂದೇ ಖ್ಯಾತಿ ಪಡೆದಿದ್ದ ಕೆಂಗಲ್ ದನಗಳ ಜಾತ್ರೆಯ ಕಳೆದ ಮೂರು ವರ್ಷ ಕೊರೊನಾ ಭೀತಿಯಿಂದ ನಡೆದಿರಲಿಲ್ಲ. ಆದರೆ ಈ ಬಾರಿ ಕೊರೊನಾ ಭೀತಿ ಇಲ್ಲದೇ ಇದ್ದರೂ, ರಾಸುಗಳ ಚರ್ಮಗಂಟು ರೋಗದ ಆತಂಕದಿಂದ ಜಾತ್ರೆ ರದ್ದಾಗಿದೆ. ಈ ಜಾತ್ರೆಯಲ್ಲಿ ತಮ್ಮ ರಾಸುಗಳನ್ನು ಮಾರಟ ಮಾಡಲು ಮತ್ತು ಖರೀದಿ ಮಾಡಲು ಉತ್ಸುಕರಾಗಿದ್ದ ರೈತರಿಗೆ ನಿರಾಶೆ ಮೂಡಿಸಿದೆ.

ದನಗಳ ಖರೀದಿಗೆ ಮುಗಿಬೀಳುವ ಹೊರ ರಾಜ್ಯದ ರೈತರು
ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ರಾಮನಗರ ಮತ್ತು ಚನ್ನಪಟ್ಟಣ ಮಧ್ಯದಲ್ಲಿರುವ ಕೆಂಗಲ್ ದೇವಾಲಯದ ಬಳಿ ನಡೆಯುವ ದನಗಳ ಜಾತ್ರೆ ಅಯ್ಯನ ಗುಡಿ ಜಾತ್ರೆ ಎಂದು ಕರೆಯಲಾಗುತ್ತದೆ. ಕೆಂಗಲ್ ದನಗಳ ಜಾತ್ರೆಯಲ್ಲಿ ತಮ್ಮ ರಾಸುಗಳನ್ನು ಮಾರಾಟ ಹಾಗೂ ಖರೀದಿ ಮಾಡಲು ರಾಜ್ಯ ಅಷ್ಟೇ ಅಲ್ಲದೆ ಹೊರ ರಾಜ್ಯಗಳಿಂದಲೂ ಜನರು ಕೆಂಗಲ್ ಜಾತ್ರೆ ಭೇಟಿ ನೀಡುತ್ತಾರೆ.
ರಾಜ್ಯದ ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳ ರೈತರಲ್ಲದೆ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದಿಂದಲೂ ಈ ಜಾತ್ರೆಗೆ ಬಂದು ಇಲ್ಲಿನ ರಾಸುಗಳನ್ನು ಖರೀದಿ ಮಾಡುತ್ತಾರೆ.

ನಿರಾಸೆಗೊಂಡ ರಾಮನಗರ ರೈತರು
ಹಳೆ ಮೈಸೂರು ಭಾಗದ ಹಳ್ಳಿಕಾರ್ ಜಾತಿಯ ಎತ್ತು ಮತ್ತು ಹಸುಗಳು ವ್ಯವಸಾಯ ಮಾಡಲು ಯೋಗ್ಯವೆಂದು ಗುರುತಿಸಿಕೊಂಡಿವೆ. ಅದ್ದರಿಂದ ಸುತ್ತಮುತ್ತಲ ಜಿಲ್ಲೆಗಳ ರೈತರಲ್ಲದೇ ಹೊರ ರಾಜ್ಯದ ರೈತರು ಕೆಂಗಲ್ ಜಾತ್ರೆಗೆಯನ್ನು ಆಶ್ರಯಿಸಿದ್ದರು. ಹೊರ ರಾಜ್ಯದಿಂದ ಬರುತ್ತಿದ್ದ ರೈತರು ತಾವು ಖರೀದಿ ಮಾಡಿದ ರಾಸುಗಳನ್ನು ಗೂಡ್ಸ್ ರೈಲುಗಳ ಮೂಲಕ ಸಾಗಾಟ ಮಾಡುತ್ತಿದ್ದರು ಆದರೆ ದನಗಳ ಜಾತ್ರೆ ರದ್ದಾಗಿರುವುದರಿಂದ ಈ ಬಾರಿ ರಾಸುಗಳ ಗೊರಸಿನ ಸಪ್ಪಳ ಕೇಳದಂತಾಗಿದೆ.

ಬೂಕನಬೆಟ್ಟದ ದನಗಳ ಜಾತ್ರೆ ನಿಷೇಧಕ್ಕೆ ರೈತರ ಆಕ್ರೋಶ
ಇನ್ನು ಇತರ ಜಿಲ್ಲೆಗಳಲ್ಲೂ ಚರ್ಮಗಂಟು ರೋಗ ವ್ಯಾಪಿಸಿದೆ. ಇಡೀ ರಾಜ್ಯದಲ್ಲೇ ಹೆಸರು ವಾಸಿಯಾಗಿರುವ ಐತಿಹಾಸಿಕ ಬೂಕನಬೆಟ್ಟ ದನಗಳ ಜಾತ್ರೆ ಕೂಡ ಚರ್ಮಗಂಟುದ ಹಿನ್ನೆಲೆಯಲ್ಲಿ ರದ್ದುಗೊಳಿಸಿ ಹಾಸನ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚರ್ಮಗಂಟು ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜನವರಿ 9 ರಿಂದ ಜನವರಿ 22ರವರೆಗೆ ಜಿಲ್ಲೆಯಾದ್ಯಂತ ದನಗಳ ಜಾತ್ರೆ ಹಾಗೂ ಸಂತೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದನಗಳ ಜಾತ್ರೆ ರದ್ದುಗೊಳಿಸಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications