ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತ್ತೆ ಮಗಳನ್ನು ಅಪಹರಿಸಿ ತಾಳಿ ಕಟ್ಟಿದವ ಅರೆಸ್ಟ್!

|
Google Oneindia Kannada News

ಹಾಸನ, ಫೆಬ್ರವರಿ 05 : ಬಸ್ಸಿಗಾಗಿ ಕಾಯುತ್ತಿದ್ದ ಅತ್ತೆ ಮಗಳನ್ನು ಅಪಹರಿಸಿ ತಾಳಿ ಕಟ್ಟಿದವನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಯುವತಿ ತಂದೆ ಅಸ್ವಸ್ಥರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಅಪಹರಣ ನಡೆದಿತ್ತು. ರಾಮನಗರದಲ್ಲಿ ಯುವತಿಯನ್ನು ರಕ್ಷಿಸಲಾಗಿದ್ದು, ಆಕೆಗೆ ಬಲವಂತವಾಗಿ ತಾಳಿ ಕಟ್ಟಿದ್ದ ಯುವಕ ಮನುವನ್ನು ಬಂಧಿಸಲಾಗಿದೆ.

ಬಸ್ ಕಾಯುತ್ತಿದ್ದ ಯುವತಿ ಕಿಡ್ನ್ಯಾಪ್; ಕಾರಿನಲ್ಲೇ ಕಲ್ಯಾಣಬಸ್ ಕಾಯುತ್ತಿದ್ದ ಯುವತಿ ಕಿಡ್ನ್ಯಾಪ್; ಕಾರಿನಲ್ಲೇ ಕಲ್ಯಾಣ

ನವ ಜೋಡಿಗಳನ್ನು ಹಾಸನದ ಎಸ್ಪಿ ಕಚೇರಿಗೆ ಕರೆದುಕೊಂಡು ಬರಲಾಗುತ್ತಿದ್ದು, ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಯುವತಿಯನ್ನು ಅಪಹರಿಸಿ, ಬಲವಂತವಾಗಿ ವಿವಾಹ ಮಾಡಿಕೊಳ್ಳಲಾಗಿದೆ ಎಂದು ಯುವತಿಯ ಪೋಷಕರು ದುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಯಿ ಕೊಂದು ಟೆಕ್ಕಿ ಪರಾರಿ; ಏರ್‌ಪೋರ್ಟ್‌ನಲ್ಲಿ ಬೈಕ್ ಪತ್ತೆ ತಾಯಿ ಕೊಂದು ಟೆಕ್ಕಿ ಪರಾರಿ; ಏರ್‌ಪೋರ್ಟ್‌ನಲ್ಲಿ ಬೈಕ್ ಪತ್ತೆ

Kidnap And Marriage Man Arrested In Ramanagara

ಪುತ್ರಿಯ ಬಲವಂತದ ವಿವಾಹದ ಸುದ್ದಿ ಕೇಳಿ ಆಕೆಯ ತಂದೆ ಅಸ್ವಸ್ಥಗೊಂಡಿದ್ದು, ಹಾಸನದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಅವರ ಹೇಳಿಕೆಯನ್ನು ಪಡೆಯಲಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪ್ರೀತಿ ನಿರಾಕರಿಸಿದ ಯುವತಿಯ ಸಾವಿಗೆ ಟ್ವಿಸ್ಟ್ಚಿಕ್ಕಮಗಳೂರಿನಲ್ಲಿ ಪ್ರೀತಿ ನಿರಾಕರಿಸಿದ ಯುವತಿಯ ಸಾವಿಗೆ ಟ್ವಿಸ್ಟ್

ಮನು ಅತ್ತೆ ಮಗಳನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಮದುವೆಯಾಗಲು ನಿರಾಕರಿಸಿದ್ದಳು. ಆದ್ದರಿಂದ, ಬಸ್‌ಗಾಗಿ ಕಾಯುತ್ತಿದ್ದ ಅವಳನ್ನು ಸ್ನೇಹಿತರ ಸಹಾಯದಿಂದ ಅಪಹರಣ ಮಾಡಿ ಕಾರಿನಲ್ಲಿ ಬಲವಂತವಾಗಿ ತಾಳಿ ಕಟ್ಟಿದ್ದ. ಇದನ್ನು ವಿಡಿಯೋ ಸಹ ಮಾಡಿದ್ದ.

ಅತ್ತೆ ಮಗಳನ್ನು ಮದುವೆಯಾಗಲು ಬಯಸಿದ್ದ ಮನು ಅರಸೀಕೆರೆ ತಾಲೂಕಿನ ಕುಡುಕುಂದಿ ಗ್ರಾಮದ ನಿವಾಸಿ. ಮದುವೆಯಾಗಲು ಆಕೆ ಒಪ್ಪಿಗೆ ನೀಡದ ಕಾರಣ ಟೈಲರಿಂಗ್ ಕ್ಲಾಸ್‌ಗೆ ಹೋಗಲು ಬಸ್ ಕಾಯುತ್ತಿದ್ದಾಗ ಅಪಹರಣ ಮಾಡಿ ಬಲವಂತದಿಂದ ಮದುವೆಯಾಗಿದ್ದ.

ಮನುವಿನಿಂದ ಬಿಡಿಸಿಕೊಳ್ಳಲು ಯುವತಿ ಪ್ರಯತ್ನ ನಡೆಸಿದ್ದಳು, ಮುಖ ಮುಚ್ಚಿಕೊಂಡಿದ್ದಳು, ಮನುವಿನ ಕೈ ಕಚ್ಚಿದ್ದಳು. ಆದರೆ, ಸ್ನೇಹಿತರ ಸಹಾಯದಿಂದ ಬಲವಂತವಾಗಿ ಮನು ತಾಳಿ ಕಟ್ಟಿದ್ದ.

English summary
Police arrested Manu who kidnapped and forcefully married girl who waiting for the bus in Hassan, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X