ಗಾಳಿಪಟ ಉತ್ಸವ ಜಾನಪದ ಕಲೆ, ಉಳಿಸಿ ಬೆಳಸಬೇಕಿದೆ: ಅಶ್ವಥ್ ನಾರಾಯಣ
ರಾಮನಗರ, ಜುಲೈ 29: ಜಾನಪದ ಕಲೆಯಾಗಿರುವ ಗಾಳಿಪಟ ಹಾರಿಸುವ ಉತ್ಸವವನ್ನು ಜಿಲ್ಲೆಯಲ್ಲಿ ಅರ್ಥ ಪೂರ್ಣವಾಗಿ ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯವಾಗಿದ್ದೂ, ಮಕ್ಕಳಿಗೆ ಗಾಳಿಪಟದ ಮೂಲಕ ಸಮಾಜಿಕ ಸಂದೇಶ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದರು.
ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಾನಪದ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಾಪುರುಷರಾದ ಹೆಚ್.ಎಲ್ ನಾಗೇಗೌಡರು ಜಾನಪದ ಲೋಕವನ್ನು ಸ್ಥಾಪಿಸಿ ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಿಲ್ಲೆ ಎಲ್ಲಾ ಕ್ಷೇತ್ರದಲ್ಲಿ ಮಾದರಿಯಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪ್ರಕೃತಿಯೊಂದಿಗೆ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸೋಣ ಎಂದು ಸಚಿವರು ಕರೆ ನೀಡಿದರು.
ಗಾಳಿಪಟದ ಬಗ್ಗೆ ಹರಿವು ಇಲ್ಲದ ಮಕ್ಕಳಲ್ಲಿ ಗಾಳಿಪಟದ ಬಗ್ಗೆ ಹರಿವು ಮೂಡಿಸುವುದರೊಂದಿಗೆ ಗ್ರಾಮೀಣ ಸೊಗಡು ಉಳಿಸಿ ಬೆಳೆಸುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಜನಪದ ಪರಿಷತ್ತು ಮಾಡುತ್ತಿದೆ. ಗಾಳಿಪಟ ಮಾನವನ ಹಾರುವಿಕೆಗೆ ಪರಿಕಲ್ಪನೆಯ ಮೂಲ ಎಂದರೆ ತಪ್ಪಲ್ಲ. ಗಾಳಿಪಟ ಕಟ್ಟುವಿಕೆ ಒಂದು ಕಲೆಯೂ ಆಗಿರುವುದರಿಂದ ನಶಿಸಿ ಹೋಗುತ್ತಿರುವ ಈ ಕಲೆಯನ್ನು ಉಳಿಸಿ ಬೆಳೆಸುವುದು ಅವಶ್ಯವಾಗಿದೆ ಎಂದರು.

ಗಾಳಿಪಟ ಹಾರಿಸುವ ಅಮೂಲ್ಯ ಸಂಸ್ಕೃತಿಯನ್ನು ಭವಿಷ್ಯಕ್ಕೆ ಉಳಿಸಿಕೊಡುವ ನಿಟ್ಟಿನಲ್ಲಿ ಗಾಳಿಪಟ ಉತ್ಸವ ದಾರಿದೀಪವಾಗಿದೆ. ನಮ್ಮ ಜೀವನ ಗಾಳಿಪಟವಿದ್ದಂತೆ ನಾವು ಕಷ್ಟಪಟ್ಟಷ್ಟು ಮೇಲಾರಬಹುದು. ಜೀವನದಲ್ಲಿ ಗಾಳಿಪಟದಂತೆ ಎತ್ತರಕ್ಕೆ ಬೆಳೆಯಬೇಕು ಎಂದರು. ರಾಮನಗರ ಜಿಲ್ಲೆ ಗಾಳಿಪಟದಂತೆ ಬೆಳೆಯಲಿ ಅದಕ್ಕೆ ಸಹಕಾರ ಕೊಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಸಿ.ಎಮ್.ಲಿಂಗಪ್ಪ, ಅ.ದೇವೇಗೌಡ, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಇಕ್ರಂ, ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಹಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications