KSRTC ಚಾಲಕನಿಗೆ ಕೊರೊನಾ: ಡಿಪೋ, ಕುಟುಂಬಕ್ಕೆ ಹೆಚ್ಚಿದ ಆತಂಕ
ರಾಮನಗರ, ಮೇ 26: ಮಾಗಡಿ ಕೆಎಸ್ ಆರ್ ಟಿಸಿ ಡಿಪೋ ಚಾಲಕನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಡಿಪೋ ಹಾಗೂ ಕುಟುಂಬ ಸದಸ್ಯರಲ್ಲಿ ಆತಂಕ ಹೆಚ್ಚಿದೆ.
ಚಾಲಕನ ಜೊತೆ ಸಂಪರ್ಕದಲ್ಲಿದ್ದ ಡಿಪೋ ಸದಸ್ಯರಿಗೆ, ಕುಟುಂಬದ ಸದಸ್ಯರಿಗೆ ಕೊರೊನಾ ತಗುಲಿರಬಹುದಾ ಎಂಬ ಅನುಮಾನ ಕಾಡ್ತಿದೆ. ಹಾಗಾಗಿ, ಕೆಎಸ್ ಆರ್ ಟಿಸಿ ನಿಗಮದಿಂದ ಟೆಸ್ಟ್ ಮಾಡುವಂತೆ ಒತ್ತಾಯ ಮಾಡಲಾಗಿದೆ.
ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಡ್ರೈವರ್ ಜತೆ ಪ್ರಯಾಣಿಸಿದವರನ್ನು, ಡಿಪೋ ಸದಸ್ಯರನ್ನು ಹಾಗೂ ಕುಟುಂಬದವರನ್ನು ಟೆಸ್ಟ್ ಮಾಡಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ರೆಡ್ ಮತ್ತು ಕಂಟೋನ್ಮೆಂಟ್ ಝೋನ್ ಇಂದ ಬಂದು ಕೆಲಸ ಮಾಡುತ್ತಿರುವವರಿಗೂ ಹಾಗೂ ಅವರ ಸಂಪರ್ಕದಲ್ಲಿ ಇರೋರಿಗೆ ಟೆಸ್ಟ್ ಮಾಡಿಸುತ್ತೇವೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಟೆಸ್ಟ್ ಮಾಡಿಸಲು ಇಲಾಖೆ ಎಲ್ಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದೆ. ಕೆಎಸ್ ಆರ್ ಟಿಸಿ ಸಿಬ್ಬಂದಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ.
ಕರ್ತವ್ಯಕ್ಕೆ ಹಾಜರಾಗುವುದಕ್ಕೂ ಮೊದಲೇ ಚಾಲಕನಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಆದರೆ, ವರದಿ ಬರುವ ಮುಂಚೆಯೇ ಆತನಿಗೆ ಡ್ಯೂಟಿ ನೀಡಲಾಗಿದೆ. ಈ ಎಡವಟ್ಟಿನಿಂದ ಈಗ ಕಂಟಕ ಎದುರಾಗಿದೆ. ತುಮಕೂರು, ಮಾಗಡಿ ಮಾರ್ಗವಾಗಿ ಬೆಂಗಳೂರಿಗೆ ಮೂರು ದಿನ ಕರ್ತವ್ಯ ನಿರ್ವಹಿಸಿದ್ದರು. ಡಿಪೋ ಸಿಬ್ಬಂದಿ ಜೊತೆ ಊಟ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ, ಚಾಲಕ ಸುತ್ತಾಡಿದ್ದ ಎಲ್ಲವೂ ಸ್ಥಳ ಹಾಗೂ ಆತನ ಸಂಪರ್ಕದಲ್ಲಿದ್ದ ಎಲ್ಲರ ಮೇಲೂ ನಿಗಾ ಇಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications