ಮೀನುಗಾರಿಕೆ ಪದವಿಯಲ್ಲಿ 3 ಚಿನ್ನದ ಪದಕ ಬಾಚಿಕೊಂಡ ಚನ್ನಪಟ್ಟಣದ ಕುಶಲಾ
ರಾಮನಗರ, ಮೇ 2: ಬೊಂಬೆನಾಡು ಖ್ಯಾತಿಯ ರಾಮನಗರ ಜಿಲ್ಲೆ ಚನ್ನಪಟ್ಟಣದ ಕುವರಿ ಕೆ.ಬಿ. ಕುಶಲ ಮೀನುಗಾರಿಕೆ ವಿಜ್ಞಾನದ ಸ್ನಾತಕೋತ್ತರ ಪದವಿಯಲ್ಲಿ ಮೂರು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾಳೆ.
ತಾಲೂಕಿನ ಕಳ್ಳಿಹೊಸೂರು ಗ್ರಾಮದ ಸುಮಾ ಹಾಗೂ ಬೋರಗೌಡ (ಬಜ್ಜಪ್ಪ)ನವರ ಪುತ್ರಿ ಈ ಸಾಧನೆ ಮಾಡಿರುವ ವಿದ್ಯಾರ್ಥಿನಿ. ಬಿ.ಕೆ. ಕುಶಲಾ ಬೀದರ್ನ ಕರ್ನಾಟಕ ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆವಿಎಎಫ್ಎಸ್ಯು)ನಲ್ಲಿ ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾಳೆ.
ಕೆ.ಬಿ. ಕುಶಲ ಅಂತಿಮ ವರ್ಷದ ಪದವಿಯಲ್ಲಿ ಮೀನುಗಾರಿಕೆ, ಸೂಕ್ಷ್ಮಜೀವ ಹಾಗೂ ವಿಜ್ಞಾನ ವಿಷಯದಲ್ಲಿ ಮೂರು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ. ಏ.28ರಂದು ನಡೆದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಂದ ಚಿನ್ನದ ಪದಕ ಸ್ವೀಕರಿಸಿದರು.

ಚಿನ್ನದ ಪದಕ ವಿಜೇತೆ ಕೆ.ಬಿ. ಕುಶಲ ಹುಟ್ಟೂರು ತಾಲೂಕಿನ ಕಳ್ಳಿಹೊಸೂರು ಗ್ರಾಮ. ಇದು ಅತ್ಯಂತ ಚಿಕ್ಕ ಗ್ರಾಮವಾಗಿದ್ದು, ಗ್ರಾಮಕ್ಕೆ ಸರಿಯಾದ ಸಾರಿಗೆ ವ್ಯವಸ್ಥೆಯೂ ಸಹ ಇಲ್ಲ. ಇಂತಹ ಗ್ರಾಮದ ರೈತಾಪಿ ಕುಟುಂಬದ ಹಿನ್ನೆಲೆಯ ಕುಶಲ ತನ್ನ ನಿರಂತರ ಓದು ಹಾಗೂ ಸಾಧಿಸಲೇಬೇಕು ಎಂಬ ಹಠದಿಂದ ಈ ಸಾಧನೆ ಮಾಡಿದ್ದಾಳೆ.
ರಾಮನಗರ ಜಿಲ್ಲೆಯ ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿನಿ ಕೆ.ಬಿ. ಕುಶಲ ದೂರದ ಬೀದರ್ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದು, ಶ್ರದ್ಧೆಯಿಂದ ಓದಿ ಮೂರು ಚಿನ್ನದ ಪದಕ ಪಡೆಯುವ ಮೂಲಕ ತನ್ನ ಪಾಲಕರು, ಹುಟ್ಟಿದ ಗ್ರಾಮ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾಳೆ. ಈಕೆಯ ಸಾಧನೆಗೆ ಆಕೆಯ ಕುಟುಂಬದವರು ಹಾಗೂ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

ಚಿನ್ನದ ಪದಕ ಪಡೆದ ಕೆ.ಬಿ. ಕುಶಲ ಪ್ರತಿಕ್ರಿಯೆ
ಮೂರು ಚಿನ್ನ ಪಡೆದ ಕೆ.ಬಿ. ಕುಶಲ, "ತನ್ನ ತಂದೆ ತಾಯಿಯ ಸಹಕಾರದಿಂದ ಇದೆಲ್ಲವೂ ಸಾಕಾರವಾಗಿದೆ. ಇದಲ್ಲದೇ ವಿವಿಯಲ್ಲಿ ನುರಿತ ಪ್ರಾಧ್ಯಾಪಕರು ಸದಾ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಈ ವಿಷಯದ ಬಗ್ಗೆ ನನಗೆ ಚಿಕ್ಕಂದಿನಿಂದಲೂ ಅಪಾರವಾದ ಆಸಕ್ತಿ ಇತ್ತು. ಇದು ಸಹ ನನ್ನ ಓದಿಗೆ ಪೂರಕವಾಯಿತು".
"ಮುಂದೆ ಇದೇ ಕ್ಷೇತ್ರದಲ್ಲಿ ಇನ್ನಷ್ಟು ಅಭ್ಯಾಸ ಹಾಗೂ ವೃತ್ತಿ ಮಾಡುವ ಆಲೋಚನೆ ಇದೆ. ಸ್ನಾತಕೋತ್ತರ ಪದವಿಯಲ್ಲಿ ಮೂರು ಪದಕ ಬಂದಿರುವುದು ಅಪಾರವಾದ ಸಂತೋಷ ತಂದಿದೆ ಹಾಗೂ ನನ್ನಲ್ಲಿ ಇನ್ನಷ್ಟು ಜವಾಬ್ದಾರಿಗಳನ್ನು ಹೆಚ್ಚಿಸಿದೆ ಹಾಗೂ ಇದೇ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವ ಬಯಕೆ ಹೆಚ್ಚಾಗಿದೆ," ಎನ್ನುತ್ತಾರೆ ಚಿನ್ನದ ಪದಕ ವಿಜೇತೆ ಕೆ.ಬಿ. ಕುಶಲ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications