HD Kumaraswamy: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಸರ್ಕಾರದಿಂದ ಬಿಗ್ ಶಾಕ್
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸರ್ಕಾರವು ಶಾಕ್ ಕೊಟ್ಟಿದೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕುಮಾರಸ್ವಾಮಿ ಅವರ ತೋಟದ ಮನೆ ಇದೆ. ಆದರೆ ಈ ಭಾಗದಲ್ಲಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿತ್ತು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ರಾಜ್ಯ ಸರ್ಕಾರಕ್ಕೆ ತರಾಟೆ ಕೂಡ ಆಗಿತ್ತು. ಇದರ ಬೆನ್ನಲ್ಲೇ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ತೆರವಿಗೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ.
ಹೌದು ಇಂದು ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಸಮೇತ ಕೇತಗಾನಹಳ್ಳಿ ಬಳಿ ಆಗಿದೆ ಎನ್ನಲಾದ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಮಾರಸ್ವಾಮಿ ಕುಟುಂಬಸ್ಥರ ವಿರುದ್ಧ ಈ ಒತ್ತುವರಿ ಆರೋಪ ಕೇಳಿಬಂದಿತ್ತು. ಬಳಿಕ ಭೂಒತ್ತುವರಿ ಆರೋಪ ಸಂಬಂಧದ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ತಂಡವನ್ನು ಕೂಡ ರಚಿಸಿದ್ದರು.

ರಾಮನಗರದ ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17 ಸೇರಿದಂತೆ ಒಟ್ಟು 14 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿದ್ದು,ಈಗ ಸರ್ಕಾರಕ್ಕೆ ಸರ್ವೆಯ ವರದಿ ಸಲ್ಲಿಸಿದೆ. ಮುಂದುವರಿದಂತೆ ಈ ಭಾಗದಲ್ಲಿ ಒತ್ತುವರಿ ತೆರವು ಮಾಡಲು ಕಂದಾಯ ಇಲಾಖೆ ಫೀಲ್ಡಿಗಿಳಿದಿದೆ. ಈಗಾಗಲೇ ಕುಮಾರಸ್ವಾಮಿ ಅವರ ತೋಟದ ಮನೆ ಬಳಿ ಜೆಸಿಬಿಗಳು ಎಂಟ್ರಿ ಕೊಟ್ಟಿದ್ದು, ಒತ್ತುವರಿ ತೆರವು ಮಾಡುವುದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ ನಡೆಯುತ್ತಿದೆ.
ಕುಮಾರಸ್ವಾಮಿ ಪತ್ರ: ಈ ಬೆಳವಣಿಗೆ ನಡುವೆಯೇ ಮತ್ತೊಂದೆಡೆ ಸಚಿವ ಕುಮಾರಸ್ವಾಮಿ ಅವರು ಭೂ ದಾಖಲೆಗಳ ಇಲಾಖೆಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಪತ್ರದಲ್ಲಿ, ಒಂದು ವೇಳೆ ಕಾನೂನುಬಾಹಿರವಾಗಿ ಹೆಚ್ಚುವರಿ ಜಮೀನಿದ್ದರೆ, ಅದನ್ನು ನಿಮ್ಮ ವಶಕ್ಕೆ ಪಡೆದುಕೊಳ್ಳಿ. ಜೊತೆಗೆ ನನಗೆ ನ್ಯಾಯವಾಗಿ ಸೇರಬೇಕಿರುವ ಉಳಿದ ಜಮೀನನ್ನು ಗುರುತಿಸಿ ಹುಡುಕಿಕೊಡಿ ಎಂದು ಪತ್ರ ಬರೆದಿದ್ದಾರೆ.
ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಅವರು ಪತ್ರ ಬರೆದಿದ್ದು, ಬಿಡದಿಯ ಕೇತಗಾನಹಳ್ಳಿ ಸರ್ವೆ ನಂಬರ್ 7ರಲ್ಲಿ 5 ಎಕರೆ 20 ಗುಂಟೆ ಜಮೀನನ್ನು ನಾನು ಖರೀದಿಸಿದ್ದೇನೆ. ಈ ಪೈಕಿ 1.25 ಎಕರೆ ಜಮೀನಿನಲ್ಲಿ ಮಾತ್ರ ನಾವು ಇದ್ದೇವೆ. ಹಾಗಾದರೆ, ಉಳಿದ ಜಮೀನನ್ನು ನೀವೇ ಗುರುತಿಸಿ, ನಮಗೆ ಹುಡುಕಿಕೊಡುವಂತೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಕೇತಗಾನಹಳ್ಳಿ ಗ್ರಾಮದಲ್ಲಿ ಭೂ ಒತ್ತುವರಿ ಆಗಿದ್ದರೆ, ಸರ್ವೇ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿರುವುದು ಸರಿ. ಈ ಆದೇಶದಂತೆ ಸರ್ವೇ ಕಾರ್ಯ ನಡೆದಿದೆ. ಸರ್ವೇ ನಂಬರ್ 7-8ರಲ್ಲಿ ಮಾತ್ರ ನಾನು ಪಹಣಿ ದಾಖಲೆ ಹೊಂದಿದ್ದೇನೆ. ಉಳಿದ ಜಮೀನನ್ನು ತಾವುಗಳು ಹುಡುಕಿಕೊಡಬೇಕೆಂದು ವಿನಂತಿಸಿಕೊಂಡಿದ್ದಾರೆ. ಅಲ್ಲದೆ ಈ ಜಮೀನನ್ನು ಮೀರಿ ಹೆಚ್ಚುವರಿ ಜಮೀನು ಕಾನೂನುಬಾಹಿರವಾಗಿ ನನ್ನ ಅಧೀನದಲ್ಲಿದ್ದರೆ ಅದನ್ನು ನೀವು ಕಾನೂನಾತ್ಮಕವಾಗಿ ವಶಕ್ಕೆ ಪಡೆಯಬಹುದು ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications