ಶವಸಂಸ್ಕಾರಕ್ಕೆ ಅಡ್ಡಿಮಾಡಿದರೆ ಕಾನೂನು ಕ್ರಮ: ರಾಮನಗರ ಜಿಲ್ಲಾಧಿಕಾರಿ
ರಾಮನಗರ, ಜುಲೈ 21: ಕೋವಿಡ್-19 ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಅಡ್ಡಿಮಾಡದೆ ಮಾನವೀಯತೆಯಿಂದ ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಲು ಸಹಕರಿಸುವಂತೆ ರಾಮನಗರ ಜಿಲ್ಲೆಯ ಜನರಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಮನವಿ ಮಾಡಿದ್ದಾರೆ.
Recommended Video
ಕೊರೊನಾ ವೈರಸ್ ರೋಗದಿಂದ ಮೃತಪಟ್ಟ ಯಾವುದೇ ಸಮುದಾಯದವರ ಶವಸಂಸ್ಕಾರ ಮಾಡುವುದನ್ನು ತಡೆಯಬಾರದು. ಅಂತಿಮ ವಿಧಿವಿಧಾನಗಳನ್ನು ಕುಟುಂಬಸ್ಥರ ಸಮ್ಮುಖದಲ್ಲೆ ಮತ್ತು ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ನೇಮಿಸಲಾಗಿರುವ ಅಧಿಕಾರಿಗಳ ಸಹಯೋಗದೊಂದಿಗೆ ನೆರವೇರಿಸಬೇಕು. ಮೃತ ವ್ಯಕ್ತಿಯ ಶವ ಸಂಸ್ಕಾರಕ್ಕೆ ಜಿಲ್ಲೆಯ ಜನತೆ ನೆರವಾಗುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.
ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ನಡೆಸಲು ಸರ್ಕಾರ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ಸೋಂಕಿತ ಶವವನ್ನು ಸಂಪೂರ್ಣವಾಗಿ ಪ್ಯಾಕ್ ಮಾಡಿ ವೈರಸ್ ನಿವಾರಕ ದ್ರಾವಣದಲ್ಲಿ ಅದ್ದಿ ಸ್ಯಾನಿಟೈಸ್ ಮಾಡಿರುತ್ತಾರೆ. ಪ್ಯಾಕ್ ಮಾಡಿರುವ ಮೃತ ದೇಹವನ್ನು ಮತ್ತೆ ತೆರೆಯಲು ಸಾಧ್ಯವೇ ಇರುವುದಿಲ್ಲ. ಹೀಗಾಗಿ ಮೃತ ದೇಹದಿಂದ ಸೋಂಕು ಹರಡುವ ಸಾಧ್ಯತೆ ಇರುವುದಿಲ್ಲ ಎಂದರು.

ಮೃತ ದೇಹದ ಅಂತಿಮ ಶವಸಂಸ್ಕಾರವನ್ನು ವೈದ್ಯಕೀಯ ಶಿಷ್ಟಾಚಾರದಂತೆ ನೆರವೇರಿಸಬೇಕಾಗಿರುತ್ತದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕುಟುಂಬಸ್ಥರು ಶವಸಂಸ್ಕಾರದಲ್ಲಿ ಭಾಗವಹಿಸಬಹುದು. ಇದಕ್ಕಾಗಿ ಆರೋಗ್ಯ ಇಲಾಖೆ ನಿಗದಿಪಡಿಸಿರುವ ಮಾನದಂಡಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೋಂಕಿತ ಮೃತರ ಅಂತ್ಯ ಸಂಸ್ಕಾರ ನಡೆಸಿದರೆ ಇಲ್ಲವೆ ಶವವನ್ನು ಹೂಳಿದರೆ ಅದರಿಂದ ಸೋಂಕು ಹರಡುತ್ತದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರೋಗ್ಯ ಇಲಾಖೆಯು ಸೋಂಕಿತ ಶವವನ್ನು ಎಲ್ಲಾ ರೀತಿಯಿಂದಲೂ ಸೋಂಕು ಹರಡದಂತೆ ಸಂರಕ್ಷಿಸಿರುತ್ತಾರೆ.
ಹೀಗಾಗಿ ಜನರು ಭಯಪಡುವ ಅಗತ್ಯವಿಲ್ಲ. ಶವವನ್ನು ಸುಟ್ಟರೆ ಇಲ್ಲವೆ ಹೂತರೆ ಅದರಿಂದ ಸೋಂಕು ಹರಡುವುದಿಲ್ಲ, ಜನತೆಯು ಇದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯ ಜನರು ಶವಸಂಸ್ಕಾರಕ್ಕೆ ಅಡ್ಡಿಪಡಿಸದೆ ಸಹಕಾರ ನೀಡುವ ಮೂಲಕ ಅವರ ನೋವಿನ ಕ್ಷಣದಲ್ಲಿ ಭಾಗಿಯಾಗಬೇಕು. ಸಭ್ಯ ಶವಸಂಸ್ಕಾರಕ್ಕೆ ಅಡ್ಡಿ ಮಾಡುವ ಇಲ್ಲವೆ ಪ್ರತಿರೋಧ ತೋರುವವರ ಮೇಲೆ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳಡಿ ದಂಡನಾತ್ಮಕವಾಗಿರುತ್ತದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಎಚ್ಚರಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications