ಲಾಕ್ ಡೌನ್: ಜನರ ನೆರವಿಗೆ ಹಾರೋಹಳ್ಳಿ ಕೈಗಾರಿಕಾ ಸಂಘ
ರಾಮನಗರ, ಏಪ್ರಿಲ್ 03: ಕೋವಿಡ್-19 ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ 21 ದಿನಕ್ಕೆ ಬೇಕಾದ ದಿನಸಿ ಪದಾರ್ಥಗಳನ್ನು ಪೂರೈಕೆ ಮಾಡಲು ಹಾರೋಹಳ್ಳಿ ಕೈಗಾರಿಕಾ ವಲಯದ ಕೈಗಾರಿಕಾ ಸಂಘ ಮುಂದಾಗಿದೆ.
ಕೋವಿಡ್-19 ಹರಡದಂತೆ 21 ದಿನಗಳ ಕಾಲ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಹಾಗೂ ಹೊರ ಜಿಲ್ಲೆಯಿಂದ ಜಿಲ್ಲೆಗೆ ವಲಸೆ ಬಂದಿರುವ ಕಾರ್ಮಿಕರು ಜೀವನ ನಡೆಸುಲು ಕಷ್ಟಪಡುತ್ತಿರುವ ಕುಟುಂಬಗಳನ್ನು ಗುರುತಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ತಾಲ್ಲೂಕು ಕಾರ್ಯನಿರ್ವಹಣಾ ಅಧಿಕಾರಿಗಳ ನೇತೃತ್ವದಲ್ಲಿ ವಿತರಿಸಿದರು.

ಪ್ರಮುಖವಾಗಿ ರಾಮನಗರ ತಾಲ್ಲೂಕಿನ ಮಂಚನಾಯಕನಹಳ್ಳಿ, ಬಿಳುಗುಂಬ, ವಿಭೂತಿಕೆರೆ ಗ್ರಾಮ ಪಂಚಾಯಿತಿ ಹಾಗೂ ಬಿಡದಿ ಪುರಸಭೆಯ ಕೆಲವು ಭಾಗದಲ್ಲಿ ಸುಮಾರು 270 ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಖುದ್ದು ಆಹಾರ ಸಾಮಗ್ರಿಗಳನ್ನು ಅವರ ಮನೆ ಬಾಗಿಲಿಗೆ ತೆರಳಿ ಖುದ್ದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕ್ರಂ ವಿತರಿಸಿದರು.

ಪ್ರತಿ ಒಂದು ಕುಟುಂಬಕ್ಕೆ ನೀಡುವ ಆಹಾರದ ಪಾಕೆಟ್ ನಲ್ಲಿ ಅಕ್ಕಿ, ರಾಗಿ ಹಿಟ್ಟು, ಗೋಧಿ ಹಿಟ್ಟು, ಸಕ್ಕರೆ, ಬೇಳೆ, ಟೂತ್ ಬ್ರಷ್, ಟೂತ್ ಪೇಸ್ಟ್, ಸೋಪ್, ಸೇರಿದಂತೆ ಸುಮಾರು 1,070 ರೂ. ಮೌಲ್ಯದ 270 ಆಹಾರ ಪದಾರ್ಥದ ಪ್ಯಾಕೆಟ್ ಗಳನ್ನು ವಿತರಿಸಿದರರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications