ಲಾಕ್ ಡೌನ್ ಯಶಸ್ವಿ: ರಾಮನಗರದ ರೇಷ್ಮೆ ಮಾರುಕಟ್ಟೆ ಸ್ಥಗಿತ
ರಾಮನಗರ, ಮೇ 24: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರೇಷ್ಮೆ ನಗರಿ ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ.
Recommended Video
ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಎಂ.ಎಸ್ ಆರ್ಚನಾ ಅದೇಶ ಹೊರಡಿಸಿದ್ದರು.
ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆಯಾದ ರಾಮನಗರ ರೇಷ್ಮೆ ಮಾರುಕಟ್ಟೆ ಅಡಳಿತ ಮಂಡಳಿ, ರೈತರು ಮತ್ತು ರೀಲರ್ಸ್ ಮಾಹಿತಿ ನೀಡಿ ವಹಿವಾಟು ಸ್ಥಗಿತಗೊಳಿಸಿ ಸಂಡೇ ಲಾಕ್ ಡೌನ್ ಗೆ ಬೆಂಬಲ ಘೋಷಿಸಿತು.

ಇನ್ನು ಎಪಿಎಂಸಿ ಮಾರುಕಟ್ಟೆ ಕೂಡ ವಹಿವಾಟು ಸ್ಥಗಿತಗೊಳಿಸಿತ್ತು. ಹೋಟೆಲ್, ಅಂಗಡಿ-ಮುಂಗಟ್ಟು, ಬೀದಿ ಬದಿ ವ್ಯಾಪಾರ ಕ್ಲೋಸ್ ಮಾಡಲಾಗಿತ್ತು. ಜಿಲ್ಲೆಯಾದ್ಯಂತ ಮದ್ಯದಂಗಡಿ ಬಂದ್ ಮಾಡಲಾಗಿದ್ದು, ಕೇವಲ ಪೇಪರ್, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಭಾನುವಾರದ ಸಂಪೂರ್ಣ ಬಂದ್ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್, ಖಾಸಗಿ ವಾಹನ ಓಡಾಟ ಸಂಪೂರ್ಣ ಬಂದ್ ಆಗಿತ್ತು, ವೈದ್ಯಕೀಯ ಹಾಗೂ ತರಕಾರಿ ವಸ್ತುಗಳನ್ನು ಕೊಳ್ಳಲು ಜನರು ಮುಗಿಬಿದ್ದರು.
ಕೊರೊನಾ ವೈರಸ್ ಭೀತಿಯ ನಡುವೆಯೂ ಮಾಂಸ ಮಾರಾಟದ ವ್ಯಾಪಾರ ಜೋರಾಗಿತ್ತು. ನಗರದ ಹಲವೆಡೆ ಮಾಂಸದ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಿದರು.
ಸ್ವತಃ ಅಂಗಡಿ ಮಾಲೀಕರು ಗ್ರಾಹಕರ ಬಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದರು, ಇನ್ನೂ ಹಲವು ಅಂಗಡಿಗಳು ಚಿಕನ್ ಖಾಲಿಯಾಗಿದೆ ಎಂದು ಬೋರ್ಡ್ ಹಾಕಿ ಬಾಗಿಲು ಬಂದ್ ಮಾಡಿದ್ದವು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications