ಕುಮಾರಸ್ವಾಮಿ ಮಗ್ಗಲು ಚೂರಿ ಇದ್ದಂತೆ: ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಆರೋಪ
ರಾಮನಗರ, ಡಿಸೆಂಬರ್ 24: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಲೋ ಪಾಯಿಸನ್ ಇದ್ದ ಹಾಗೆ, ಅವರ ಜೊತೆಯಲ್ಲಿದ್ದವರಿಗೆ ಮಗ್ಗಲು ಚೂರಿ. ಅವರು ಚುಚ್ಚುವುದೇ ಗೊತ್ತಾಗಲ್ಲ ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಗಂಭೀರವಾಗಿ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದ ಬಿಡದಿ ಬಳಿಯ ಖಾಸಗಿ ರೆಸಾರ್ಟ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಹಲವು ನಾಯಕರನ್ನು ನಂಬಿಸಿ, ವಂಚಿಸಿದ್ದಾರೆ. ಅವರ ವಂಚನೆಗೆ ಬಲಿಯಾದವರಲ್ಲಿ ನಾನು ಒಬ್ಬ ಎಂದು ತಮ್ಮ ಹಳೆ ಸ್ನೇಹಿತನ ವಿರುದ್ದ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಹರಿಹಾಯ್ದರು.
ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ನೆಲೆಯೇ ಇಲ್ಲ. ನನ್ನ ತಮ್ಮನಿಗೆ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಟಿಕೆಟ್ ಕೊಟ್ಟು, ಮುಖಂಡರಿಗೆ ಮತ ಹಾಕಿಸಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದರು. ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಕನಕಪುರದ ನಿಷ್ಠಾವಂತ ಜೆಡಿಎಸ್ ಮುಖಂಡ ಡಿ.ಎಂ. ವಿಶ್ವನಾಥ್ಗೆ ಮತ ಹಾಕಬೇಡಿ ಎಂದು ಸಂದೇಶ ನೀಡಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಹಲವು ಶಾಸಕರು ಜೆಡಿಎಸ್ ಪಕ್ಷ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಸಕರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಶಾಸಕರಾದ ಪುಟ್ಟರಾಜು, ಶಿವಲಿಂಗೇಗೌಡ ಸೇರಿದಂತೆ ಹಲವು ಜೆಡಿಎಸ್ ಶಾಸಕರು ಪಕ್ಷ ಬಿಡುತ್ತಾರೆ ಎಂದು ಎಚ್.ಸಿ. ಬಾಲಕೃಷ್ಣ ಭವಿಷ್ಯ ನುಡಿದರು.
ತನ್ನ ಪಕ್ಷದ ಮುಖಂಡರ ಏಳಿಗೆಯನ್ನೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿಸುವುದಿಲ್ಲ. ಪಕ್ಕದಲ್ಲಿ ಇರುವವರಿಗೆ ಮೊದಲು ಕುಮಾರಸ್ವಾಮಿ ಚುಚ್ಚುತ್ತಾರೆ. ನಾನೂ ಕೂಡ ಅವರಿಂದ ಚುಚ್ಚಿಸಿಕೊಂಡಿದ್ದೇನೆ ಎಂದು ತಮ್ಮ ಹಳೆಯ ದಿನಗಳನ್ನು ಎಚ್.ಸಿ. ಬಾಲಕೃಷ್ಣ ನೆನಪಿಸಿಕೊಂಡರು.

ನನ್ನಂತೆಯೇ ಎಚ್.ಡಿ. ಕುಮಾರಸ್ವಾಮಿ ಹಲವು ನಾಯಕರಿಗೆ ಪಕ್ಕದಲ್ಲಿಟ್ಟುಕೊಂಡೇ ಬೆನ್ನಿಗೆ ಚೂರಿ ಹಾಕಿದ್ದಾರೆ. ಇದಕ್ಕೆ ಪರಿಷತ್ ಚುನಾವಣೆಯಲ್ಲಿ ಮತದಾರರು ತಕ್ಕ ಬುದ್ದಿ ಕಲಿಸಿದ್ದಾರೆ. ಇನ್ನು ಅವರೊಂದಿಗಿರುವ ಮಂದಿಯೂ ಪಕ್ಷ ಬಿಟ್ಟು ಹೊರ ಬರಲಿದ್ದು, ಅವರು ಮತ್ಯಾವ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಎಚ್.ಸಿ. ಬಾಲಕೃಷ್ಣ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಮಾತಿನಲ್ಲೇ ಕುಟುಕಿದರು.
Recommended Video
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications