"ಹಿರೇಮಠ್, ರವಿಕೃಷ್ಣ ರೆಡ್ಡಿ ಯಾರು ಸಾಕಿದ ನಾಯಿ': ಎ.ಮಂಜುನಾಥ್
ರಾಮನಗರ, ಜನವರಿ 22: ನಮ್ಮ ಕಾರ್ಯಕರ್ತರನ್ನು ಸಾಕು ನಾಯಿಗಳು ಎನ್ನುವ ಸಾಮಾಜಿಕ ಹೋರಾಟಗಾರ ಎನಿಸಿಕೊಂಡಿರುವ ಎಸ್.ಆರ್.ಹಿರೇಮಠ್ ಮತ್ತು ರವಿಕೃಷ್ಣಾ ರೆಡ್ಡಿ ಇವರುಗಳು ಯಾರು ಸಾಕಿರುವ ನಾಯಿ ಎಂದು ಮಾಗಡಿ ಶಾಸಕ ಎ.ಮಂಜುನಾಥ್ ಪ್ರಶ್ನಿಸಿದರು.
ರಾಮನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಗಡಿ ಶಾಸಕ ಎ.ಮಂಜುನಾಥ್, ಸ್ಥಳ ವೀಕ್ಷಣೆ ನೆಪದಲ್ಲಿ ಗ್ರಾಮದಲ್ಲಿ ಗುಂಪು ಘರ್ಷಣೆಗೆ ಕಾರಣರಾದ ಎಸ್.ಆರ್.ಹಿರೇಮಠ ಹಾಗೂ ಜೊತೆಗೆ ಬಂದಿದ್ದವರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದರು.
ಕೇತಗಾನಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಠಿಸುವ ದುರುದ್ದೇಶದಿಂದ ಗ್ರಾಮಕ್ಕೆ ಭೇಟಿ ಕೊಟ್ಟಿರುವ ಎಸ್.ಆರ್.ಹೀರೆಮಠ ಅವರು ಮೊದಲೇ ಪೊಲೀಸರಿಗೆ ಏಕೆ ತಿಳಿಸಲಿಲ್ಲ. ಯಾರ ಆಮಿಷ ಮತ್ತು ಚಿತಾವಣೆಯಿಂದ ಇಲ್ಲಿಗೆ ಬಂದಿದ್ದೀರಿ ಎಂದು ಕೇಳಿದರು.

ಕಂದಾಯ ಇಲಾಖೆಯಲ್ಲಿ ಮಾಹಿತಿ ಪಡೆದು, ಕಾನೂನಿನ ಮೂಲಕ ಹೋರಾಟ ಮಾಡಿ ಸರ್ಕಾರದ ಆಸ್ತಿ ಒತ್ತುವರಿಯಾಗಿದ್ದರೆ ಬಿಡಿಸಬಹುದಿತ್ತು. ಆದರೆ ನೀವು ಗ್ರಾಮಕ್ಕೆ ಖುದ್ದು ಬಂದು ಶಾಂತಿ ಕದಡುವ ಮೂಲಕ ಪ್ರಚೋದನೆ ಮಾಡಿ ಗ್ರಾಮದಲ್ಲಿ ಗುಂಪು ಘರ್ಷಣೆಗೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಅವರ 46 ಎಕರೆ 27 ಗುಂಟೆ ಜಮೀನಿದೆ ಸರಿಯಾಗಿ ಅಳತೆ ಮಾಡಿದರೆ ಇನ್ನೂ ಎರಡು ಎಕರೆ ಶಾರ್ಟೇಜ್ ಇದೆ. ಆದರೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ, ನಿಮಗೆ ಕಾನೂನು, ಕೋರ್ಟ್, ಇಲಾಖೆ ಇದೆ ಅಲ್ಲಿ ಹೋರಾಡಿ ಅದನ್ನ ಬಿಟ್ಟು ನಮ್ಮವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಡಿ.ಸಿ.ತಮ್ಮಣ್ಣ ವಿರುದ್ಧ ಮಾದೇಗೌಡರ ಹೋರಾಟದ ಬಳಿಕ ನಾಲ್ಕುವರೆ ಎಕರೆ ಸರ್ಕಾರಿ ಭೂಮಿಯನ್ನು ಬಿಟ್ಟಾಗಿದೆ. ಅದು ಈಗಾಗಲೇ ಸ್ಮಶಾನ ಜಾಗ ಆಗಿದೆ ಎಂದರು. ಕಂದಾಯ ಇಲಾಖೆ ಸರ್ಕಾರಿ ಜಾಗ ವಾಪಸ್ ತೆಗೆದುಕೊಳ್ಳುವುದಕ್ಕೆ ಯಾರ ಅಭ್ಯಂತರವೂ ಇಲ್ಲ, ನಾವು ಅದಕ್ಕೆ ಸಪೋರ್ಟ್ ಕೊಡ್ತೀವಿ. ಅದನ್ನ ಬಿಟ್ಟು ಸ್ವತಃ ಕೇತಗಾನಹಳ್ಳಿಗೆ ಭೇಟಿ ನೀಡಿ ಸ್ಥಳೀಯರಿಂದ ಬಲವಂತ ಹೇಳಿಕೆ ನೀಡುವಂತೆ ಪ್ರಚೋದನೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.
ಈಗಾಗಲೇ ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ, "ತಮ್ಮ ಜಮೀನಿನ ಸಂಪೂರ್ಣ ಮಾಹಿತಿ ನೀಡಲು ನಾನು ಸಿದ್ದ ಬಂದು ಪಡೆದುಕೊಳ್ಳಲಿ, ಯಾವ ದಾಖಲೆ ಬೇಕು ಕೇಳಿದರೆ ಕೊಡೋಕೆ ನಾನು ಸಿದ್ಧನಾಗಿದ್ದೇನೆ' ಎಂದಿದ್ದಾರೆ. ಆದರೆ ಯಾರದೋ ಕುಮ್ಮಕ್ಕಿನಿಂದ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿರೋದು ಚೆನ್ನಾಗಿರಲ್ಲ ಎಂದು ಎ.ಮಂಜುನಾಥ್ ಹರಿಹಾಯ್ದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications