"ಹಿರೇಮಠ್, ರವಿಕೃಷ್ಣ ರೆಡ್ಡಿ ಯಾರು ಸಾಕಿದ ನಾಯಿ': ಎ.ಮಂಜುನಾಥ್
ರಾಮನಗರ, ಜನವರಿ 22: ನಮ್ಮ ಕಾರ್ಯಕರ್ತರನ್ನು ಸಾಕು ನಾಯಿಗಳು ಎನ್ನುವ ಸಾಮಾಜಿಕ ಹೋರಾಟಗಾರ ಎನಿಸಿಕೊಂಡಿರುವ ಎಸ್.ಆರ್.ಹಿರೇಮಠ್ ಮತ್ತು ರವಿಕೃಷ್ಣಾ ರೆಡ್ಡಿ ಇವರುಗಳು ಯಾರು ಸಾಕಿರುವ ನಾಯಿ ಎಂದು ಮಾಗಡಿ ಶಾಸಕ ಎ.ಮಂಜುನಾಥ್ ಪ್ರಶ್ನಿಸಿದರು.
ರಾಮನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಗಡಿ ಶಾಸಕ ಎ.ಮಂಜುನಾಥ್, ಸ್ಥಳ ವೀಕ್ಷಣೆ ನೆಪದಲ್ಲಿ ಗ್ರಾಮದಲ್ಲಿ ಗುಂಪು ಘರ್ಷಣೆಗೆ ಕಾರಣರಾದ ಎಸ್.ಆರ್.ಹಿರೇಮಠ ಹಾಗೂ ಜೊತೆಗೆ ಬಂದಿದ್ದವರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದರು.
ಕೇತಗಾನಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಠಿಸುವ ದುರುದ್ದೇಶದಿಂದ ಗ್ರಾಮಕ್ಕೆ ಭೇಟಿ ಕೊಟ್ಟಿರುವ ಎಸ್.ಆರ್.ಹೀರೆಮಠ ಅವರು ಮೊದಲೇ ಪೊಲೀಸರಿಗೆ ಏಕೆ ತಿಳಿಸಲಿಲ್ಲ. ಯಾರ ಆಮಿಷ ಮತ್ತು ಚಿತಾವಣೆಯಿಂದ ಇಲ್ಲಿಗೆ ಬಂದಿದ್ದೀರಿ ಎಂದು ಕೇಳಿದರು.

ಕಂದಾಯ ಇಲಾಖೆಯಲ್ಲಿ ಮಾಹಿತಿ ಪಡೆದು, ಕಾನೂನಿನ ಮೂಲಕ ಹೋರಾಟ ಮಾಡಿ ಸರ್ಕಾರದ ಆಸ್ತಿ ಒತ್ತುವರಿಯಾಗಿದ್ದರೆ ಬಿಡಿಸಬಹುದಿತ್ತು. ಆದರೆ ನೀವು ಗ್ರಾಮಕ್ಕೆ ಖುದ್ದು ಬಂದು ಶಾಂತಿ ಕದಡುವ ಮೂಲಕ ಪ್ರಚೋದನೆ ಮಾಡಿ ಗ್ರಾಮದಲ್ಲಿ ಗುಂಪು ಘರ್ಷಣೆಗೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಅವರ 46 ಎಕರೆ 27 ಗುಂಟೆ ಜಮೀನಿದೆ ಸರಿಯಾಗಿ ಅಳತೆ ಮಾಡಿದರೆ ಇನ್ನೂ ಎರಡು ಎಕರೆ ಶಾರ್ಟೇಜ್ ಇದೆ. ಆದರೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ, ನಿಮಗೆ ಕಾನೂನು, ಕೋರ್ಟ್, ಇಲಾಖೆ ಇದೆ ಅಲ್ಲಿ ಹೋರಾಡಿ ಅದನ್ನ ಬಿಟ್ಟು ನಮ್ಮವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಡಿ.ಸಿ.ತಮ್ಮಣ್ಣ ವಿರುದ್ಧ ಮಾದೇಗೌಡರ ಹೋರಾಟದ ಬಳಿಕ ನಾಲ್ಕುವರೆ ಎಕರೆ ಸರ್ಕಾರಿ ಭೂಮಿಯನ್ನು ಬಿಟ್ಟಾಗಿದೆ. ಅದು ಈಗಾಗಲೇ ಸ್ಮಶಾನ ಜಾಗ ಆಗಿದೆ ಎಂದರು. ಕಂದಾಯ ಇಲಾಖೆ ಸರ್ಕಾರಿ ಜಾಗ ವಾಪಸ್ ತೆಗೆದುಕೊಳ್ಳುವುದಕ್ಕೆ ಯಾರ ಅಭ್ಯಂತರವೂ ಇಲ್ಲ, ನಾವು ಅದಕ್ಕೆ ಸಪೋರ್ಟ್ ಕೊಡ್ತೀವಿ. ಅದನ್ನ ಬಿಟ್ಟು ಸ್ವತಃ ಕೇತಗಾನಹಳ್ಳಿಗೆ ಭೇಟಿ ನೀಡಿ ಸ್ಥಳೀಯರಿಂದ ಬಲವಂತ ಹೇಳಿಕೆ ನೀಡುವಂತೆ ಪ್ರಚೋದನೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.
ಈಗಾಗಲೇ ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ, "ತಮ್ಮ ಜಮೀನಿನ ಸಂಪೂರ್ಣ ಮಾಹಿತಿ ನೀಡಲು ನಾನು ಸಿದ್ದ ಬಂದು ಪಡೆದುಕೊಳ್ಳಲಿ, ಯಾವ ದಾಖಲೆ ಬೇಕು ಕೇಳಿದರೆ ಕೊಡೋಕೆ ನಾನು ಸಿದ್ಧನಾಗಿದ್ದೇನೆ' ಎಂದಿದ್ದಾರೆ. ಆದರೆ ಯಾರದೋ ಕುಮ್ಮಕ್ಕಿನಿಂದ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿರೋದು ಚೆನ್ನಾಗಿರಲ್ಲ ಎಂದು ಎ.ಮಂಜುನಾಥ್ ಹರಿಹಾಯ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications