ಚುನಾವಣಾ ಆಯೋಗ ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡಬೇಕು-ಶಾಸಕ ಹೆಚ್.ಸಿ.ಬಾಲಕೃಷ್ಣ
ರಾಮನಗರ, ಮೇ 29: ಚುನಾವಣೆಯಲ್ಲಿ ನಮ್ಮ ಹೆಸರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ.ಕುಮಾರಸ್ವಾಮಿ ಮತದಾರರಿಗೆ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಿರಬೇಕು ನಾನು ಯಾವುದೇ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಿಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದರು.
ಚುನಾವಣೆಯಲ್ಲಿ ಮತದಾರರಿಗೆ ಗಿಫ್ಟ್ ಕಾರ್ಡ್ ಹಂಚಿದ್ದೇವೆ ಅದು ನಮ್ಮ ಚುನಾವಣಾ ತಂತ್ರಗಾರಿಕೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದರೆ, ಅವರದೇ ಪಕ್ಷದ ಶಾಸಕ ಹೆಚ್.ಸಿ.ಬಾಲಕೃಷ್ಣ ಗಿಫ್ಟ್ ಕಾರ್ಡ್ ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾರೆ.

ರಾಮನಗರ ಮತ್ತು ಮಾಗಡಿಯಲ್ಲಿ ಚುನಾವಣೆಯ ಬೆಳಿಗ್ಗೆ ಕಾಂಗ್ರೆಸ್ ಮುಖಂಡರು ಮತದಾರರಿಗೆ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಿದ ಕಾರಣ ಜೆಡಿಎಸ್ ಅಭ್ಯರ್ಥಿಗಳಿಗೆ ಸೋಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಅವರು, ನಾನು ಯಾವುದೇ ಗಿಫ್ಟ್ ಕಾರ್ಡ್ ಹಂಚಿಲ್ಲ, ಗಿಫ್ಟ್ ಕಾರ್ಡ್ಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ತಿರುಗೇಟು ನೀಡಿದರು.
ನಮ್ಮ ಹೆಸರು ಕೆಡಿಸಲು ನಮ್ಮ ವಿರೋಧಿಗಳೇ ಇದನ್ನು ಮಾಡಿರಬಹುದು. ಅಥವಾ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರೇ ಇದನ್ನ ಮಾಡಿಸಿರಬಹುದು. ಅದು ಪ್ರಚಾರದ ಕಾರ್ಡ್ ಅಷ್ಟೇ. ಗಿಫ್ಟ್ ಕಾರ್ಡ್ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಹಂಚಿದ್ದಾರೋ ಅವರನ್ನು ಕೇಳಿ ಎಂದು ಮಾಗಡಿ ಕ್ಷೇತ್ರದ ಶಾಸಕ ಹೆಚ್.ಸಿ. ಬಾಲಕೃಷ್ಣ ತಮ್ಮ ಮೇಲಿನ ಆರೋಪ ಸುಳ್ಳು ಎಂದರು.
ಮಾತು ಮುಂದುವರೆಸಿದ ಅವರು, ಮತದಾರರು ಮತದಾನ ಕೇಂದ್ರ ಒಳಗೆ ಪಾಂಪ್ಲೇಟ್ ತೆಗೆದುಕೊಂಡು ಹೋಗಲು ಆಗುವುದಿಲ್ಲ ಹಾಗಾಗಿ ಅವರಿಗೆ ತಿಳಿಯಲಿ ಎಂದು ನಮ್ಮ ಫೋಟೋ ಹಾಗೂ ಪಕ್ಷದ ಗುರುತು ಇರುವ ಕಾರ್ಡ್ಗಳನ್ನು ವಿತರಣೆ ಮಾಡಿದ್ದೇವೆ. ಅದು ಯಾವುದೇ ಗಿಫ್ಟ್ ಕಾರ್ಡ್ ಅಲ್ಲ ಎಂದರು.

ಕುಮಾರಸ್ವಾಮಿ ಅವರನ್ನು 6 ವರ್ಷ ಅಮಾನತು ಮಾಡಬೇಕು
ಇನ್ನು ಕಾಂಗ್ರಸ್ ಗಿಫ್ಟ್ ಕಾರ್ಡ್ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ಶಾಸಕ ಹೆಚ್.ಸಿ.ಬಾಲಕೃಷ್ಣ, ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಮತದಾರರಿಗೆ ಹಣ ಹಂಚಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಚುನಾವಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು 6 ವರ್ಷ ಚುನಾವಣೆಗೆ ಸ್ಪರ್ಧೆ ಮಾಡದಂತೆ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಆದರೆ ಬೇರೆಯವ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ನಾವು ಯಾರಿಗೂ ದೂರು ನೀಡುವುದಿಲ್ಲ. ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಚುನಾವಣೆ ವ್ಯವಸ್ಥೆ ಹದಗೆಟ್ಟು ಹೋಗಿದೆ. ನಾನು ಚುನಾವಣೆಯಲ್ಲಿ ಹಣ ಹಂಚಿ ಚುನಾವಣೆ ನಡೆಸಿದ್ದೇನೆ ಎಂದು ಅವರೇ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಕಾನೂನಿನ ದೃಷ್ಟಿಯಲ್ಲಿ ಅದು ಅಪರಾಧವಲ್ಲವೇ ಎಂದು ಹೆಚ್.ಸಿ.ಬಾಲಕೃಷ್ಣ ಪ್ರಶ್ನಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications