ಮಾಗಡಿ: ಕರ್ತವ್ಯದ ವೇಳೆಯೇ ಟೈಟು..ಟೈಟು.. ಫುಲ್ ಟೈಟು: ಮೂವರು ಪೊಲೀಸ್ ಅಧಿಕಾರಿಗಳ ಅಮಾನತು
ರಾಮನಗರ, ಜೂನ್, 23: ಕರ್ತವ್ಯನಿರತ ಮೂವರು ಪೊಲೀಸ್ ಅಧಿಕಾರಿಗಳು ಮದ್ಯಪಾನ ಸೇವನೆ ಮಾಡಿ ತೂರಾಡಿದ ಘಟನೆ ಮಾಗಡಿಯಲ್ಲಿ ನಡೆದಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಕೂಡ ಆಗಿತ್ತು. ಇದೀಗ ಈ ಸಂಬಂಧ ಇಬ್ಬರು ಎಎಸ್ಐ, ಓರ್ವ ಹೆಡ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.
ಹೆಡ್ ಕಾನ್ಸ್ಟೇಬಲ್ ನಾರಾಯಣ ಮತ್ತು ದೀರ್ಘಾವಧಿ ರಜೆಯಲ್ಲಿದ್ದರುವ ಎಎಸ್ಐಗಳಾದ ಮಂಜುನಾಥ್ ಮತ್ತು ನಾರಾಯಣಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ. ನಿನ್ನೆ ಕರ್ತವ್ಯಕ್ಕೆ ಹಾಜರಾಗುವ ವೇಳೆ ಕುಡಿದು ಸಾರ್ವಜನಿಕರೊಂದಿದೆ ಅನುಚಿತ ವರ್ತನೆ ತೋರಿದ್ದಾರೆ. ಇಂತಹ ಪ್ರಕರಣಗಳಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಿ ಮೂವರನ್ನು ಅಮಾನತು ಮಾಡಲಾಗಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.

ಘಟನೆ ಹಿನ್ನೆಲೆ
ಪಲೀಸ್ ಅಧಿಕಾರಿಗಳಿಬ್ಬರು ಮಾಗಡಿ ಠಾಣೆಯಿಂದ ಖೈದಿಯನ್ನು ರಾಮನಗರ ಜಿಲ್ಲಾ ಕಾರಗೃಹಕ್ಕೆ ಬಿಟ್ಟು ಬರಲು ಹೋಗಿದ್ದರು. ಬಳಿಕ ಮತ್ತೆ ಮಾಗಡಿಗೆ ವಾಪಸ್ ಹೋಗುವಾಗ ಇವರಿಬ್ಬರು ವೇಳೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಹೀಗೆ ಕರ್ತವ್ಯದ ಸಮಯದಲ್ಲೇ ಕಂಠಪೂರ್ತಿ ಕುಡಿದು ಟೈಟಾಗಿದ್ದಲ್ಲದೆ ಸಾರ್ವಜನಿಕರೊಂದಿಗೆ ಕಿರಿಕ್ ಸಹ ಮಾಡಿಕೊಂಡಿದ್ದು, ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮಾಗಡಿ ಎಎಸ್ಐ ಮಂಜುನಾಥ್, ಕುದೂರು ಕ್ರೈಂ ಪಿಸಿ ನಾರಾಯಣ ಸೇರಿ ಮತ್ತಿಬ್ಬರು ಪೊಲೀಸರು ಕುಡಿದು ಠಾಣೆಯ ಕಾರಿನಲ್ಲೇ ಮೋಜುಮಸ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಮೈ ಮೇಲೆ ಪ್ರಜ್ಞೆ ಇಲ್ಲದೇ, ಯೂನಿಫಾರ್ಮ್ ಕಳಚಿಟ್ಟು ಪಕ್ಕದಲ್ಲಿ ಹೋಗುತ್ತಿದ್ದ ಕಾರು ಚಾಲಕನೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದಲೂ ನಿಂಧಿಸಿರುವ ವೀಡಿಯೋ ಇದೀಗ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications