ರಾಮನಗರ: ಮಹಾರಾಷ್ಟ್ರ ಮೂಲದ ನಕಲಿ ಐಎಎಸ್ ಅಧಿಕಾರಿಯ ಬಂಧನ

ರಾಮನಗರ, ಸೆಪ್ಟೆಂಬರ್ 9: ತಾನು ಐಎಎಸ್ ಅಧಿಕಾರಿ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ನಕಲಿ ಐಎಎಸ್ ಅಧಿಕಾರಿಯನ್ನು ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲುಹುಣಸೆಯ ಅಪಾರ್ಟ್‌ಮೆಂರ್ಟ್‌ನಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬ ತಾನು ಐಎಎಸ್ ಅಧಿಕಾರಿ, ಕೇಂದ್ರ ಸರ್ಕಾರದ ಗೃಹ ಸಚಿವಾಲಯ(Ministry of Home Affairs)ದಲ್ಲಿ ವಿಶೇಷ ಅಧಿಕಾರಿ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದನೆಂದು ನಕಲಿ ಅಧಿಕಾರಿಯ ಬಂಡವಾಳ ಬಯಲಾಗಿದೆ.

ಮಹಾರಾಷ್ಟ್ರ ಮೂಲದ ಶಶಿರ್(24) ಬಂಧಿತ ನಕಲಿ ಐಎಎಸ್ ಅಧಿಕಾರಿಯಾಗಿದ್ದು, ಆರೋಪಿ ಶಶಿರ್ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ತಿರುಗಾಡುತ್ತಾ ಜನರಿಗೆ ತಾನು ಐಎಎಸ್ ಅಧಿಕಾರಿ ಎಂದು ನಂಬಿಸಿ ಸಿವಿಲ್ ವ್ಯಾಜ್ಯಗಳಲ್ಲಿ ಭಾಗಿಯಾಗಿ ಜನರಿಗೆ ಮೋಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

Ramanagara: Maharashtra-based Fake IAS Officer Arrested

ನಕಲಿ ಅಧಿಕಾರಿಯ ಬಂಡವಾಳ ಬಯಲು ಮಾಡಿ ಬಂಧಿಸಿರುವ ಕಗ್ಗಲೀಪುರ ಪೋಲಿಸರು, ಆರೋಪಿ ಶಶಿರ್ ಬಳಸುತ್ತಿದ್ದ ಮೊಬೈಲ್‌ಗಳು, ಐಡಿ ಕಾರ್ಡ್

ಹಾಗೂ ಇನ್ನೋವಾ ಕ್ರಿಸ್ಟಾ ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ.

ಜಮೀನು ವಿವಾದಗಳೇ ಆರೋಪಿಯ ಟಾರ್ಗೆಟ್

ರಾಜಧಾನಿ ಬೆಂಗಳೂರಿನ ಸೆರಗಿನಲ್ಲಿರುವ ಕಗ್ಗಲೀಪುರ ರಾಮನಗರ ಜಿಲ್ಲೆಯ ಪೋಲಿಸ್ ವ್ಯಾಪ್ತಿಗೆ ಬಂದರೂ, ಬೆಂಗಳೂರು ಮಹಾನಗರದ ಅಂಗವಾಗಿದೆ. ಇಲ್ಲಿನ ಭೂಮಿಗೆ ಬಂಗಾರದ ಬೆಲೆ ಹಾಗಾಗಿ ತುಂಡು ಭೂಮಿಗೆ ವಿವಾದ ಅಂಟಿಕೊಂಡಿರುತ್ತವೆ. ಅದೇ ವಿವಾದಗಳೇ ಆರೋಪಿಯಾಗಿರುವ ನಕಲಿ ಐಎಎಸ್ ಅಧಿಕಾರಿ ಶಶಿರ್ ಹಣ ಮಾಡಲು ರಹದಾರಿಯಾಗಿದೆ.

Ramanagara: Maharashtra-based Fake IAS Officer Arrested

ಮಹಾರಾಷ್ಟ್ರ ಮೂಲದ ಶಶಿರ್ ಕಳೆದ ಮೂರು ವರ್ಷಗಳಿಂದ ಕಗ್ಗಲೀಪುರದಲ್ಲಿ ವಾಸ ಮಾಡುತ್ತಿದ್ದು, ಆರೋಪಿ ಕೇವಲ ಡಿಪ್ಲೋಮಾ ವ್ಯಾಸಂಗ ಮಾಡಿರುವ ಚಾಲಾಕಿಯಾಗಿದ್ದಾನೆ. ಆದರೆ ಜನರಿಗೆ ತಾನು ತಾನು ಐಎಎಸ್ ಅಧಿಕಾರಿ ಎಂದು ನಂಬಿಸಿ ಜಮೀನು ವಿವಾದಗಳನ್ನು ಬಗೆಹರಿಸಿಕೊಡುತ್ತೇನೆ ಎಂದು ಜನರನ್ನು ತನ್ನ ಮೋಸದ ಬಲೆಯಲ್ಲಿ ಕೆಡವಿಕೊಳ್ಳುತ್ತಿದ್ದ.

ರವಿಶಂಕರ್ ಗುರೂಜಿಗೂ ನಂಬಿಸಿದ್ದ ಶಶಿರ್

ಬಂಧಿತ ಆರೋಪಿ ಕೇವಲ ಜನರನ್ನಷ್ಟೇ ಅಲ್ಲದೇ ಖ್ಯಾತ ಸ್ವಾಮೀಜಿ ರವಿಶಂಕರ್ ಗುರೂಜಿಯವರನ್ನು ತಾನು ಐಎಎಸ್ ಅಧಿಕಾರಿ ಎಂದು ನಂಬಿಸಿದ್ದ. ಅಲ್ಲದೇ ರವಿಶಂಕರ್ ಗುರೂಜಿ ಆಶ್ರಮಕ್ಕೂ ಭೇಟಿ ಕೊಟ್ಟು ಐಎಎಸ್ ಅಧಿಕಾರಿಯೆಂದು ಪರಿಚಯ ಮಾಡಿಕೊಂಡಿದ್ದ. ಶಶಿರ್ ರವಿಶಂಕರ್ ಗುರೂಜಿ ಆಶ್ರಮದ ಜಮೀನು ವಿವಾದ ವಿಚಾರದಲ್ಲಿ ಗುರೂಜಿ ಪರ ಬ್ಯಾಟಿಂಗ್ ಮಾಡಿದ್ದ.

ಜಮೀನು ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಲ್ಲೂ ತಾನು ಐಎಎಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಶಶಿರ್ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿಯ ಅಸಲಿಯತ್ತು ಬಯಲಾಗಿದೆ.

Ramanagara: Maharashtra-based Fake IAS Officer Arrested

ರೈತನನ್ನು ಅಡ್ಡಗಟ್ಟಿ ಸುಲಿಗೆ

ಕೊರೊನಾ ಲಾಕ್‌ಡೌನ್ ನಂತರ ದರೋಡೆ, ಸುಲಿಗೆ ಪ್ರಕರಣಗಳು ನಿರಂತರವಾಗಿ ಘಟಿಸುತ್ತಿದ್ದು, ಇದೀಗ ತುಮಕೂರಿನಲ್ಲಿ ರೈತರೊಬ್ಬರನ್ನು ಅಡ್ಡಗಟ್ಟಿದ ಪುಂಡರ ಗುಂಪು ಮಾರಕಾಸ್ತ್ರಗಳನ್ನು ತೋರಿಸಿ 15 ಸಾವಿರ ರೂಪಾಯಿ ನಗದು ಹಾಗೂ ಎರಡು ಮೊಬೈಲ್​ ಫೋನ್​ಗಳನ್ನು ದೋಚಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಿಟ್ಟಗೊಂಡನಹಳ್ಳಿ ಗೇಟ್​ ಬಳಿ ಈ ದುಷ್ಕೃತ್ಯ ನಡೆದಿದ್ದು, ರೈತ ರಾಮಚಂದ್ರ‌ ಎಂಬುವವರು ಹಣ ಮತ್ತು ಮೊಬೈಲ್​ ಕಳೆದುಕೊಂಡಿದ್ದಾರೆ. ತುಮಕೂರು ಮಾರುಕಟ್ಟೆಯಲ್ಲಿ ತರಕಾರಿ ಮಾರಿ ಅದರಿಂದ ಬಂದ 15 ಸಾವಿರ ರೂಪಾಯಿ ಹಣದೊಂದಿಗೆ ರೈತ ರಾಮಚಂದ್ರ‌ ಮನೆಗೆ ಹೋಗುತ್ತಿದ್ದರು. ತರಕಾರಿ ಮಾರಲೆಂದು ಕಾರು ತೆಗೆದುಕೊಂಡು ಹೋಗಿದ್ದ ಅವರನ್ನು ವಾಪಸು ಬರುವಾಗ ಅಡ್ಡಗಟ್ಟಿದ ಕಳ್ಳರು, ಕಾರು​ ನಿಲ್ಲಿಸಿದಾಗ ಜಾಕ್​ ನೀಡುವಂತೆ ಕೇಳಿದ್ದಾರೆ.

Recommended Video

      Afghanistan ಹೊಸ ಸರ್ಕಾರ ಭಾರತಕ್ಕೆ ಸಂಕಟ ತರಲಿದೆ!! | Oneindia Kannada

      ಅವರ ಮಾತನ್ನು ನಂಬಿದ ರಾಮಚಂದ್ರ ಸಹಾಯಕ್ಕೆಂದು ಕಾರು ನಿಲ್ಲಿಸಿದ್ದಾರೆ. ಆದರೆ, ತಕ್ಷಣವೇ ಮಾರಕಾಸ್ತ್ರ ತೋರಿಸಿ, ಬೆದರಿಸಿದ ಕಳ್ಳರು ಅವರ ಬಳಿಯಿದ್ದ 15 ಸಾವಿರ ರೂಪಾಯಿ ಹಣ ಹಾಗೂ ಎರಡು ಮೊಬೈಲ್​ ಫೋನ್​ಗಳನ್ನು ದೋಚಿ ಪರಾರಿಯಾಗಿದ್ದಾರೆ. ಜಾಕ್​ ನೀಡಲೆಂದು ಕಾರು ನಿಲ್ಲಿಸಿ ಹಣ ಹಾಗೂ ಮೊಬೈಲ್​ ಫೋನ್​ಗಳನ್ನು ಕಳೆದುಕೊಂಡ ರೈತ ರಾಮಚಂದ್ರ ಕೂಡಲೇ ಸಿ‌.ಎಸ್. ಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+