ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿ: ಅಬ್ದುಲ್ ಅಜೀಮ್
ರಾಮನಗರ, ಫೆಬ್ರವರಿ 24: ರಾಮನ ಹೆಸರು ಹೊಂದಿರುವ ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ತಿಳಿಸಿದರು.
ಬುಧವಾರ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ರಾಮನಗರ ನಗರ ಪ್ರದೇಶದಲ್ಲಿ ಐಜೂರು ಭಾಗದಲ್ಲಿರುವ ಬಡಾವಣೆಗಳು ಮೂಲಭೂತ ಸೌಕರ್ಯಗಳನ್ನು ಹೊಂದಿದೆ ಹಾಗೂ ವ್ಯವಸ್ಥಿತವಾಗಿ ನಿರ್ಮಾಣವಾಗಿದೆ ಎಂದರು.
ಈ ವರ್ಷ ರಾಮನ ವರ್ಷ ಅದಕ್ಕಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದರು.

ರಾಮನಗರದ ಯಾರಬ್ ನಗರ, ಗೌಸಿಯಾ ನಗರ, ಟಿಪ್ಪು ನಗರ ಮುಂತಾದ ಬಡಾವಣೆಗಳಲ್ಲಿ ಸರಿಯಾದ ಸೌಕರ್ಯಗಳಿಲ್ಲ. ಜನರಿಗೆ ಮೊದಲು ಕುಡಿಯುವ ನೀರು ಹಾಗೂ ಶುದ್ದ ಗಾಳಿ ಒದಗಿಸಿಕೊಡಬೇಕು. ಈ ಬಡಾವಣೆಗಳ ಮನೆಯ ಮುಂಭಾಗ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಗಿಡ ನೆಡುವ ಅಭಿಯಾನ ನಡೆಸಿ, ಮನೆಯವರಿಗೆ ಗಿಡಗಳನ್ನು ಪೋಷಿಸುವಂತೆ ತಿಳಿಸಿ ಎಂದರು.
ಬಡಾವಣೆಗಳಿಗೆ ನೀರು ಸರಬರಾಜು ಮಾಡುವ ಪೈಪ್ ಹಾಗೂ ಒಳಚರಂಡಿ ಪೈಪ್ ಗಳನ್ನು ಪರಿಶೀಲಿಸಿ, ತುಂಬಾ ಹಳೆಯದಾಗಿ ರಂಧ್ರ ಉಂಟಾದರೆ ಕುಡಿಯುವ ನೀರು ಒಳಚರಂಡಿ ನೀರಿನೊಂದಿಗೆ ಮಿಶ್ರಣವಾಗಿ ರೋಗಗಳು ಉಂಟಾಗುತ್ತದೆ ಎಂದು ತಿಳಿಸಿದರು.
ರಾಮನಗರ ತುಂಬ ಕಡೆ ರಸ್ತೆ ಕಿರಿದಾಗಿದೆ, ಇಲ್ಲಿ ವಾಹನ ನಿಲುಗಡೆ ಹಾಗೂ ಸಂಚಾರದ ಬಗ್ಗೆ ವ್ಯವಸ್ಥೆ ಮಾಡಿ. ಜಿಲ್ಲೆಯಲ್ಲಿ ಯಾವುದೇ ಮತೀಯ ಕಲಹಗಳು ಇಲ್ಲ. ಆಗಾಗ ಶಾಂತಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಅವರು ಮಾಹಿತಿ ನೀಡಿದ್ದಾರೆ.
ಮತೀಯವಾಗಿ ಸೂಕ್ಷ್ಮವಾಗಿರುವ ಪ್ರದೇಶದಲ್ಲಿ ಶಾಂತಿ ಸಮಿತಿ ರಚಿಸಿ ಸಮಿತಿಗೆ ಮತೀಯ ಕಲಹಗಳನ್ನು ತಡೆಯುವ ಶಕ್ತಿ ಇರುವ ಪ್ರಭಾವಿ ವ್ಯಕ್ತಿಗಳನ್ನು ನೇಮಕ ಮಾಡಿ ಎಂದು ಸಲಹೆ ನೀಡಿದರು.
ರಾಮನಗರ ಜಿಲ್ಲೆಯಲ್ಲಿ ಶಿಕ್ಷಕರ ಹುದ್ದೆ ಖಾಲಿ ಇದೆ. ಇದನ್ನು ಭರ್ತಿ ಮಾಡುವ ಬಗ್ಗೆ ಚರ್ಚಿಸಲಾಗುವುದು, ಅಧಿಕಾರಿಗಳು ಜನಸ್ನೇಹಿ ಆಡಳಿತ ನೀಡಿ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಅಪರ ಜಿಲ್ಲಾಧಿಕಾರಿ ಜವರೇಗೌಡ.ಟಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications