ಕನಕಪುರದಿಂದ ಬಾಂಗ್ಲಾದೇಶಕ್ಕೆ ನಂದಿನಿ ಉತ್ಪನ್ನಗಳು ರಫ್ತು
ರಾಮನಗರ, ಜೂನ್ 15; ಕೊರೊನಾ ಭೀತಿಯಲ್ಲೂ ರಾಮನಗರ ಜಿಲ್ಲೆ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ನಂಬರ್ 1 ಜಿಲ್ಲೆಯಾಗಿದೆ. ಪ್ರತಿದಿನ ಸುಮಾರು 8.77 ಲಕ್ಷ ಲೀಟರ್ ಹಾಲನ್ನು ಜಿಲ್ಲೆ ಉತ್ಪಾದನೆ ಮಾಡುತ್ತಿದೆ.
ರಾಮನಗರ ಜಿಲ್ಲೆಯ ಕನಕಪುರ ಬೆಂಗಳೂರು ಡೈರಿ ವ್ಯಾಪ್ತಿಗೆ ಒಳಪಡುತ್ತದೆ. ಈಗ ಹಾಲಿನಿಂದ ತಯಾರಾಗುವ ಉತ್ಪನ್ನಗಳನ್ನು ವಿದೇಶಗಳಿಗೂ ರಫ್ತು ಮಾಡಲು ಬೆಂಗಳೂರು ಡೈರಿ ಮುಂದಾಗಿದೆ.
ಬೆಂಗಳೂರು ಸಹಕಾರ ಹಾಲು ಒಕ್ಕೂಟದಿಂದ ನೂತನವಾಗಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ನಿರ್ಮಿಸಿರುವ ನಂದಿನಿ ಹಾಲು ಉತ್ಪನ್ನ ಸಂಕೀರ್ಣದಲ್ಲಿ ಉತ್ಪಾದಿಸುವ ಕೆನೆ ರಹಿತ ಹಾಲಿನ ಪುಡಿ ವಿದೇಶಗಳಿಗೆ ರಫ್ತು ಆಗಲಿದೆ.

ಈಗಾಗಲೇ ವಿದೇಶಗಳಿಂದ ಬೇಡಿಕೆ ಬಂದಿದೆ. ಬಾಂಗ್ಲಾದೇಶದಿಂದ 500 ಟನ್ ಹಾಲಿನ ಪುಡಿಗೆ ಬೇಡಿಕೆ ಬಂದಿದ್ದು ಇಂದು ಸುಮಾರು 75 ಟನ್ ಹಾಲಿನ ಪೌಡರ್ ಹೊತ್ತ ಮೂರು ಕಂಟೈನರ್ಗಳಿಗೆ ನಿಗಮದ ಅಧಿಕಾರಿಗಳು ಮತ್ತು ಚುನಾಯಿತ ನಿರ್ದೇಶಕರು ಚಾಲನೆ ನೀಡಿದರು.
ನಂದಿನಿ ಹಾಲು ಉತ್ಪನ್ನ ಸಂಕೀರ್ಣವನ್ನು ಕನಕಪುರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ. ಸಂಪೂರ್ಣವಾಗಿ ಸ್ವಯಂಚಾಲಿತ ವಿದೇಶಿ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ.
ಘಟಕದಲ್ಲಿ ದಿನನಿತ್ಯ ಸರಾಸರಿ 35 ಮೆಟ್ರಿಕ್ ಟನ್ ಹಾಲಿನ ಪುಡಿ, 35 ಮೆಟ್ರಿಕ್ ಟನ್ ಚೀಸ್ ಮತ್ತು 1 ಲಕ್ಷ ಲೀಟರ್ ದೀರ್ಘಾ ಜೀವಿತಾವಧಿಯ ಹಾಲು, 1.5 ಲಕ್ಷ ಲೀಟರ್ ಪೌಚ್ ಹಾಲು, 50 ಕೆಜಿ ಸಾಮರ್ಥ್ಯದ ಮೊಸರು, 2 ಮೆಟ್ರಿಕ್ ಟನ್ ತುಪ್ಪ ಮತ್ತು 20 ಟನ್ ಸಾಮರ್ಥ್ಯದ ಬೆಣ್ಣೆ ಉತ್ಪಾದಿಸುವ ಯಂತ್ರೋಪಕರಣಗಳಿವೆ.
ಈ ಬಗ್ಗೆ ಮಾತನಾಡಿದ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಹರೀಶ್, "ಮುಂದಿನ ಒಂದು ವರ್ಷದಲ್ಲಿ 60 ಮೆಟ್ರಿಕ್ ಟನ್ ಸಾಮರ್ಥ್ಯದ ಮತ್ತೊಂದು ಕೆನೆ ರಹಿತ ಹಾಲಿನ ಪುಡಿ ತಯಾರು ಮಾಡುವ ನೂತನ ಘಟಕವನ್ನು ಸ್ಥಾಪನೆ ಮಾಡಲಾಗುತ್ತದೆ" ಎಂದರು.
ಈಗಾಗಲೇ ಕನಕಪುರದ ಮೆಗಾ ಡೇರಿಯಿಂದ ಸಿಂಗಾಪುರ, ಭೂತಾನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ಹಾಲಿನ ಉತ್ಪನ್ನಗಳನ್ನ ರಫ್ತು ಮಾಡಲಾಗಿದೆ. ಈಗ ಬಾಂಗ್ಲಾದೇಶದಿಂದ ಕೆನೆ ರಹಿತ ಹಾಲಿನ ಪುಡಿಗೆ ಬೇಡಿಕೆ ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications