ರಾಮನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ 6 ತಿಂಗಳ ಗಡುವು ನೀಡಿದ ಸಚಿವ
ರಾಮನಗರ, ಜನವರಿ 19: ರಾಮನಗರದಲ್ಲಿ 73 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಬಾಕಿ ಕಾಮಗಾರಿಯನ್ನು ಜೂನ್ ವೇಳೆಗೆ ಸಂಪೂರ್ಣ ಮುಗಿಸಬೇಕು ಎಂದು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಬುಧವಾರದಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, ಇಂಜಿನಿಯರಿಂಗ್ ಕಾಲೇಜಿನ ಕಾಮಗಾರಿಯನ್ನು 6 ತಿಂಗಳ ಒಳಗೆ ಸಂಪೂರ್ಣವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು- ಮೈಸೂರು ಹೆದ್ದಾರಿಯ ಪಕ್ಕದಲ್ಲೇ ಇರುವ ಜಾನಪದ ಲೋಕದ ಬಳಿ ನಿರ್ಮಾಣವಾಗುತ್ತಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ಅನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ, ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಸುಸಜ್ಜಿತ ಹಾಸ್ಟೆಲ್, ಪ್ರಯೋಗಾಲಯ, ತರಗತಿಗಳು, ಗ್ರಂಥಾಲಯ, ನೀರು ಮತ್ತು ಒಳಚರಂಡಿ ಸೌಲಭ್ಯಗಳು, ವಾಕ್ ಪಥಗಳು ಇತ್ಯಾದಿಗಳೆಲ್ಲ ಕಡ್ಡಾಯವಾಗಿ ಇರಬೇಕು ಎಂದು ತಿಳಿಸಿದರು.

ಕ್ಯಾಂಪಸ್ ಆಕರ್ಷಕವಾಗಿದ್ದು, ಅತ್ಯಂತ ಸುಸಜ್ಜಿತವಾಗಿ ಹೈಟೆಕ್ ದರ್ಜೆಯ ಕ್ಯಾಂಪಸ್ ಆಗಿ ತಲೆ ಎತ್ತಬೇಕು. 2022-23ನೇ ಶೈಕ್ಷಣಿಕ ಸಾಲಿನ ತರಗತಿಗಳು ಹೊಸ ಕ್ಯಾಂಪಸ್ನಲ್ಲೇ ನಡೆಯುವಂತಾಗಬೇಕು ಎಂದು ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ನಿರ್ದೇಶನ ಮಾಡಿದರು.
ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಮನಗರ ಮತ್ತು ಸುತ್ತಮುತ್ತಲಿನ ಗ್ರಾಮೀಣ ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ವೃತ್ತಿ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಇದ್ದು, ಸ್ಥಳೀಯ ಸಮುದಾಯಕ್ಕೆ ಇದರ ಲಾಭ ದೊರಕುವಂತಾಗಬೇಕು ಎಂದು ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ರಾಮನಗರ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ ಗೋಪಾಲ್ ಮತ್ತಿತರ ಅಧಿಕಾರಿಗಳು ಇದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications