ರಾಮನಗರ: ಲಿಂ.ಶಿವಕುಮಾರ ಸ್ವಾಮಿಗಳ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಚಾಲನೆ
ರಾಮನಗರ, ಫೆಬ್ರವರಿ 15: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮಂಗಳವಾರ ಚಾಲನೆ ಸಿಕ್ಕಿದೆ. ಶ್ರೀಗಳ 111 ಅಡಿ ಎತ್ತರದ ಪ್ರತಿಮೆಯು ಸಂಪೂರ್ಣ ಕಾಂಕ್ರೀಟ್ನಲ್ಲಿಯೇ ನಿರ್ಮಾಣಗೊಳ್ಳಲಿದ್ದು, ಶ್ರೀಗಳ ಪ್ರತಿಮೆ ನಿರ್ಮಾಣವಾದರೆ ರಾಜ್ಯದಲ್ಲೇ ಅತೀ ಎತ್ತರದ ಪ್ರತಿಮೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಸಿದ್ದಗಂಗಾ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಇಂದು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಹಲವಾರು ಮುಖಂಡರು ಸಚಿವ ಸಿ.ಸಿ. ಪಾಟೀಲ್ರಿಗೆ ಸಾಥ್ ನೀಡಿದರು.

ಶ್ರೀಗಳ ಹುಟ್ಟೂರಿನಲ್ಲಿ 111 ಅಡಿ ಎತ್ತರದ ಪ್ರತಿಮೆ ಕಾಮಗಾರಿ ಪ್ರಾರಂಭವಾಗಿರುವುದು ಬಹಳ ಸಂತೋಷದ ವಿಷಯ. ಶ್ರೀಗಳ ಮೂರ್ತಿ ಲೋಕಾರ್ಪಣೆಯಾದ ನಂತರ ಇದೊಂದು ಸುಂದರವಾದ ಧಾರ್ಮಿಕ ಹಾಗೂ ಪ್ರವಾಸಿ ಸ್ಥಳವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ, ಈಗಾಗಲೇ 100 ಕೋಟಿ ರೂ.ಗಳನ್ನು ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆಯಲ್ಲಿ ನೀಡಲಾಗಿದೆ. ನಾನು ಇಲ್ಲಿನ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ವತಿಯಿಂದ ನೀಲಿ ನಕ್ಷೆ ತಯಾರಿಸಿ ಅಭಿವೃದ್ಧಿ ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.
ಶ್ರೀಗಳ ಪುತ್ಥಳಿ ನಿರ್ಮಾಣ ಕಾಮಗಾರಿಯ ಹೊಣೆಯನ್ನು ಕೆ.ಆರ್.ಐ.ಡಿ.ಎಲ್ ಸಂಸ್ಥೆಗೆ ನೀಡಲಾಗಿದೆ. ಯೋಜನಾ ಬದ್ಧವಾಗಿ ಈ ಪುತ್ಥಳಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ರಾಜ್ಯದ ದೊಡ್ಡ ದೊಡ್ಡ ವ್ಯಕ್ತಿಗಳು ಒಳಗೊಂಡ ಸಮಿತಿ ಇದ್ದು, ಆ ಸಮಿತಿ ಎಲ್ಲವನ್ನು ನಿರ್ವಹಣೆ ಮಾಡುತ್ತಿದೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು ಮಾಹಿತಿ ನೀಡಿದರು.

ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮದ ಅಭಿವೃದ್ಧಿ ಹಾಗೂ ಶ್ರೀಗಳ ಪ್ರತಿಮೆ ನಿರ್ಮಾಣ ಕೋವಿಡ್ ಹಿನ್ನಲೆಯಲ್ಲಿ ಕೆಲ ಕಾಲ ಕುಂಠಿತವಾಗಿತ್ತು. ಇದೀಗ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಯಡಿಯೂರಪ್ಪನವರು ಈ ಕಾರ್ಯಕ್ಕೆ ಹೆಚ್ಚಿನ ಒತ್ತು ಕೊಟ್ಟು ಹಣವನ್ನು ಬಿಡುಗಡೆ ಮಾಡಿದ್ದರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಶ್ರೀಗಳ ಪ್ರತಿಮೆಯ ವಿಶೇಷತೆ
ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು 111 ವರ್ಷ ಕಾಲ ಬದುಕಿದ್ದರು. ಹೀಗಾಗಿ ಅವರ ಪ್ರತಿಮೆಯೂ ಸಹ 111 ಅಡಿ ಎತ್ತರದಲ್ಲಿರಲಿದ್ದು, ಕೋಲು ಹಿಡಿದು ಖಾವಿಧಾರಿ ರೂಪದಲ್ಲಿ ಶ್ರೀಗಳ ಮೂರ್ತಿ ಸಿಮೆಂಟ್ನಿಂದ ನಿರ್ಮಾಣವಾಗುತ್ತಿದ್ದು, ಪ್ರತಿಮೆಯ ತಳಕ್ಕೆ ಇಳಿಯಲು 111 ಮೆಟ್ಟಿಲುಗಳು ನಿರ್ಮಾಣವಾಗುತ್ತಿವೆ.
ಶ್ರೀಗಳ ಹುಟ್ಟೂರಾದ ವೀರಾಪುರದಲ್ಲಿನ ಬೆಟ್ಟದ ಮೇಲೆ ಶ್ರೀಗಳು ತಮ್ಮ ಬಾಲ್ಯದಲ್ಲಿ ಆಟವಾಡುತ್ತಿದ್ದರು. ಇಲ್ಲಿಯೇ ಕುಳಿತು ಧ್ಯಾನಾಸಕ್ತರಾಗುತ್ತಿದ್ದರು. ಶಿವಗಂಗೆ ಬೆಟ್ಟದೆಡೆಗೆ ಯಾವಾಗಲೂ ನೋಡುತ್ತಿದ್ದರು.

ಶಿವಗಂಗೆ ಬೆಟ್ಟ ನೋಡುತ್ತಲೇ, ತಮ್ಮ ಮನೆ ದೇವರನ್ನು ನೆನೆಯುತ್ತಿದ್ದರು. ಹೀಗಾಗಿ ಶಿವಗಂಗೆ ಬೆಟ್ಟಕ್ಕೆ ಅಭಿಮುಖವಾಗಿ, ನಿಂತ ಭಂಗಿಯಲ್ಲಿ ಶ್ರೀಗಳ ಪ್ರತಿಮೆ ನಿರ್ಮಾಣವಾಗುತ್ತಿರುವುದು ವಿಶೇಷವಾಗಿದೆ.
ಇನ್ನು ಬೆಟ್ಟದ ಮೇಲೆ ಶ್ರೀಗಳ ಪ್ರತಿಮೆಯೊಂದಿಗೆ ಮ್ಯೂಸಿಯಂ, ಧ್ಯಾನ ಕೇಂದ್ರ, ಶ್ರೀಗಳ ಜೀವನ ಪರಿಚಯಿಸುವ ಆಧುನಿಕ ಆಡಿಯೋ, ವಿಡಿಯೋ ಸೌಲಭ್ಯ, ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಉದ್ಯಾನ, ದಾಸೋಹ ಭವನ, ಯಾತ್ರಿಗಳಿಗಾಗಿ ಭವನಗಳನ್ನು ನಿರ್ಮಾಣ ಮಾಡಲಾಗುತ್ತದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications