ಚನ್ನಪಟ್ಟಣಕ್ಕೆ ಸಚಿವ ಯೋಗೇಶ್ವರ್ ಆಗಮನ; ಅದ್ದೂರಿ ಸ್ವಾಗತ
ರಾಮನಗರ, ಜನವರಿ 18: ನೂರಾರು ಬೈಕ್ಗಳ ಜಾಥಾ, ಜೆಸಿಬಿಗಳ ಮೇಲಿನಿಂದ ಪುಷ್ಪಾರ್ಚನೆ, ಸಂಚಾರ ದಟ್ಟಣೆ, ಸಂಚಾರ ದಟ್ಟಣೆಯಲ್ಲಿ ಸಿಲುಕಿದ ಅಂಬ್ಯುಲೆನ್ಸ್, ಪರದಾಡಿದ ವಾಹನ ಸವಾರರು. ಇವೆಲ್ಲವೂ ಚನ್ನಪಟ್ಟಣದಲ್ಲಿ ಸೋಮವಾರ ಕಂಡು ಬಂದ ದೃಶ್ಯಗಳು.
ಚನ್ನಪಟ್ಟಣದ ಮಾಜಿ ಶಾಸಕ, ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿ. ಪಿ. ಯೋಗೇಶ್ವರ್ ಸೋಮವಾರ ಚನ್ನಪಟ್ಟಣಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದ ಬಳಿಕ ಮೊದಲ ಬಾರಿ ಅವರು ಆಗಮಿಸಿದ್ದರು.
ಕುಮಾರಸ್ವಾಮಿ V/S ಯೋಗೇಶ್ವರ ಮಾತಿನ ಮಲ್ಲಯುದ್ಧ!
ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಿ. ಪಿ. ಯೋಗೇಶ್ವರ್ ಕುಟುಂಬ ಸಮೇತ ಪೂಜೆ ಸಲ್ಲಿಸಿದರು. ದೇವಾಲಯದಿಂದ ಅಭಿಮಾನಿಗಳು ನೂರಾರು ಬೈಕ್ಗಳ ಜಾಥಾ ಮೂಲಕ ಅವರನ್ನು ಮೆರಣವಣಿಗೆ ಮೂಲಕ ಕರೆದುಕೊಂಡು ಹೋದರು.
2ನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಲಿರುವ ಸಿಪಿ ಯೋಗೇಶ್ವರ್ ವ್ಯಕ್ತಿಚಿತ್ರಣ
ಮಾಧ್ಯಮಗಳ ಜೊತೆ ಮಾತನಾಡಿದ ಸಿ. ಪಿ. ಯೋಗೇಶ್ವರ್, "ನಾನು ಇದೀಗ ಖಾತೆ ರಹಿತವಾಗಿ ಬಂದಿದ್ದೇನೆ. ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ" ಎಂದರು.
ಕೈ ತಪ್ಪಿದ ಸಚಿವ ಸ್ಥಾನ; ಅಪಚ್ಚು ರಂಜನ್ ಆಕ್ರೋಶ
"ಮುಂದಿನ ದಿನಗಳಲ್ಲಿ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇನೆ. ಅಭಿಮಾನಿಗಳು ನನಗೆ ಅದ್ದೂರಿ ಸ್ವಾಗತ ಕೋರುವ ಮೂಲಕ ನನ್ನ ಜವಾಬ್ದಾರಿ ಹೆಚ್ಚಿಸಿದ್ದಾರೆ" ಎಂದು ಸಿ. ಪಿ. ಯೋಗೇಶ್ವರ್ ಹೇಳಿದರು.
ಸಂಚಾರ ದಟ್ಟಣೆ; ಸಿ. ಪಿ. ಯೋಗೇಶ್ವರ್ ಮೆರವಣಿಗೆ ಹಿನ್ನಲೆಯಲ್ಲಿ ಕೆಂಗಲ್ ದೇವಾಲಯದಿಂದ ಚನ್ನಪಟ್ಟಣದ ತನಕ ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿತ್ತು.
(1/2)ರಾಮನಗರದ ರಸ್ತೆಯಲ್ಲಿ ಅಂಬ್ಯುಲೆನ್ಸ್ ಸಿಲುಕಿಕೊಂಡು ಚಾಲಕ ಹರಸಾಹಸಪಡಬೇಕಾಯಿತು.
— oneindiakannada (@OneindiaKannada) January 18, 2021
ಬೆಂಗಳೂರು-ಮೈಸೂರು ಹೆದ್ದಾರಿಯ ಶೆರ್ವಾ ಹೋಟೆಲ್ ಬಳಿ ಸಂಚಾರ ದಟ್ಟಣೆ ಉಂಟಾಗಿತ್ತು.#Ramanagara #Amubalance #Trafficjam pic.twitter.com/F0ucxvnPAl
ರಾಮನಗರದ ರಸ್ತೆಯಲ್ಲಿ ಅಂಬ್ಯುಲೆನ್ಸ್ ಸಿಲುಕಿಕೊಂಡು ಚಾಲಕ ಹರಸಾಹಸ ಪಡಬೇಕಾಯಿತು. ಬೆಂಗಳೂರು-ಮೈಸೂರು ಹೆದ್ದಾರಿಯ ಶೆರ್ವಾ ಹೋಟೆಲ್ ಬಳಿ ಸಂಚಾರ ದಟ್ಟಣೆ ಉಂಟಾಗಿತ್ತು.
ಹೆದ್ದಾರಿಯಲ್ಲಿ ಸಚಿವ ಸಿ. ಪಿ. ಯೋಗೀಶ್ವರ್ ಮೆರವಣಿಗೆ ಹಿನ್ನಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಕೆಂಗಲ್ ದೇವಾಲಯದಿಂದ ಚನ್ನಪಟ್ಟಣದ ತನಕ ಏಕಮುಖ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
Recommended Video