73064 ಕೊಠಡಿಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ: ಸುರೇಶ್ ಕುಮಾರ್
ರಾಮನಗರ, ಜುಲೈ 18: ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷತೆ ನೀಡಿ ಪರೀಕ್ಷೆ ನಡೆಸಲಾಗುವುದು.ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಪರೀಕ್ಷೆಯ ನಂತರ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಬಾರಿ 3310 ಇದ್ದ ಪರೀಕ್ಷಾ ಕೇಂದ್ರಗಳನ್ನು 4885 ಹಾಗೂ 48000 ಪರೀಕ್ಷಾ ಕೊಠಡಿಗಳನ್ನು 73064 ಕ್ಕೆ ಹೆಚ್ಚಳ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆದಷ್ಟು ಅವರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಳೆದ ಬಾರಿ 6 ದಿನಗಳು 10 ನೇ ತರಗತಿ ಪರೀಕ್ಷೆ ಮಾಡಿದ ಅನುಭವವಿದೆ. ಈ ಬಾರಿ ಕೋವಿಡ್ ಕಾರಣದಿಂದ 2 ದಿನಗಳ ಕಾಲ ಪರೀಕ್ಷೆ ಮಾಡುತ್ತಿರುವುದರಿಂದ ಕಳೆದ ಬಾರಿಗಿಂತ ಉತ್ತಮವಾಗಿ ಈ ಬಾರಿ ಇಲಾಖೆಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ
ಕೋವಿಡ್ ಪಾಸಿಟೀವ್ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜ್ವರ ಕೆಮ್ಮು ನೆಗಡಿ ಅಂತಹ ಲಕ್ಷಣ ಕಂಡುಬಂದ ವಿದ್ಯಾಥಿ೯ಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾಥಿ೯ ಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಬಿಡದಿಯಲ್ಲಿ ಸುರೇಶ್ ಕುಮಾರ್
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಇಂದು ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರ ಪರಿಶೀಲನೆ
ಪರಿಶೀಲನೆಯ ಸಂದಭ೯ದಲ್ಲಿ ಸಾವ೯ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾಥಿ೯ಗಳಿಗೆ ಗೋಚರವಾಗುವ ರೀತಿ ಪ್ರದಶ೯ನ ವಾಗಬೇಕು. ಈ ಬಾರಿ ಪರೀಕ್ಷೆ ಒ.ಎಮ್.ಆರ್ ಶೀಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾಥಿ೯ ಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ತಾಕೀತು ಮಾಡಿದರು.
ಮಳೆ ಇರುವ ಹಿನ್ನೆಲೆಯಲ್ಲಿ ವಿದ್ಯಾಥಿ೯ಗಳು ಪರೀಕ್ಷಾ ಕೇಂದ್ರ ಗಳಿಗೆ ಬೇಗ ಆಗಮಿಸಿದರೆ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು.
Recommended Video

ಪರೀಕ್ಷೆ ಬರೆಯಲು ಡೆಸ್ಕ್
ಪರೀಕ್ಷೆ ಬರೆಯಲು ಡೆಸ್ಕ್ ಉತ್ತಮ ವಾಗಿರಬೇಕು ಈ ಬಗ್ಗೆ ಪರೀಕ್ಷಾ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ತಿಳಿಸಿದರು.
ಮುಂದಿನ ವರ್ಷದ ಶೈಕ್ಷಣಿಕ ಸಾಲು ಆರಂಭಿಸುವ ಬಗ್ಗೆ ಸಾವ೯ಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾಯ೯ಪಡೆ ರಚಿಸಲಾಗಿದ್ದು , ಕಾಯ೯ಪಡೆಯಲ್ಲಿ ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾಯ೯ ನಿವ೯ಹಸುತ್ತಿರುವ ಸಂಘ ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಸಭೆ ನಡೆಸಿದ್ದು, ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಪ್ರಾರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications