ರಾಮನಗರ ಜಿಲ್ಲಾ ಕಾರಾಗೃಹದ ಕೈದಿಗಳಿಂದ ನಿಷೇಧಿತ ಮಾದಕ ವಸ್ತು, ಮೊಬೈಲ್ ವಶ
ರಾಮನಗರ, ಮಾರ್ಚ್ 30: ಮಂಗಳವಾರ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ನಿರ್ಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ರಾಮನಗರ ಎಸ್ಪಿ ಎಸ್.ಗಿರೀಶ್ ನೇತೃತ್ವದಲ್ಲಿ ಡಿವೈಎಸ್ಪಿ, ಸಿಪಿವೈ, ಪಿಎಸ್ಐಗಳು ಸೇರಿದಂತೆ 30ಕ್ಕೂ ಹೆಚ್ಚು ಪೊಲೀಸರ ತಂಡ ಜಿಲ್ಲಾ ಕಾರಾಗೃಹದ ಮೂಲೆ ಮೂಲೆಗಳನ್ನು ತಪಾಸಣೆ ನಡೆಸಿ, ವಿಚಾರಣಾಧೀನ ಕೈದಿಗಳಿಂದ ಹಣ, ಬೀಡಿ, ಸಿಗರೇಟ್, ಗುಟ್ಕಾ, ಬ್ಲೇಡ್, ಚಾಕು ಸೇರಿದಂತೆ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿ ಅಕ್ರಮಗಳು ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು, ಕಾರಾಗೃಹದಲ್ಲಿ 54 ಸಾವಿರ ಹಣ, 5 ಮೊಬೈಲ್ ಫೋನ್, 6 ಸಿಮ್ ಕಾರ್ಡುಗಳು, 70ಕ್ಕೂ ಹೆಚ್ಚು ಸಿಗರೇಟ್ ಮತ್ತು ಬೀಡಿ ಪ್ಯಾಕೇಟ್ ಗಳು, ಗುಟ್ಕಾ ಪ್ಯಾಕೇಟ್, ಬ್ಲೇಡ್, ಚಾಕು, ಸೀಜರ್ ಹಾಗೂ ಇತರೆ ವಸ್ತುಗಳು ಸಹ ಪರಿಶೀಲನೆ ವೇಳೆ ಸಿಕ್ಕಿದೆ.

ಜೈಲಿನಲ್ಲಿ ಇವುಗಳನ್ನು ಉಪಯೋಗಿಸಲು ಅವಕಾಶವಿಲ್ಲ. ನಿರ್ಬಂಧಿತ ವಸ್ತುಗಳು ಜೈಲಿನ ಒಳಗೆ ಯಾರು ತೆಗೆದುಕೊಂಡು ಹೋಗಿದ್ದಾರೆ? ಈ ಪ್ರಕರಣದಲ್ಲಿ ಯಾರ ಯಾರ ಕೈವಾಡವಿದೆ ಎಂಬುದನ್ನು ತನಿಖೆಯಿಂದ ತಿಳಿದುಕೊಳ್ಳಬೇಕಾಗಿದೆ. ಅದಕ್ಕಾಗಿ ಜೈಲಿನಲ್ಲಿ ಸಿಕ್ಕ ಮಾದಕ ವಸ್ತುಗಳನ್ನೆಲ್ಲಾ ವಶಕ್ಕೆ ಪಡೆದು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ.

ಕೊಲೆ ಆರೋಪಿ ಬಳಿ ಮೋಬೈಲ್ ಪತ್ತೆ
ಕಾರಾಗೃಹದಲ್ಲಿರುವ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ಕೇಬಲ್ ಕಿಟ್ಟಿ ಎಂಬುವನ ಬಳಿ 2 ಮೊಬೈಲ್ ಗಳು ಹಾಗೂ 2 ಸಿಮ್ ಗಳು ಸಹ ಪತ್ತೆಯಾಗಿದೆ. ಈತ ಬ್ಯಾಡರಹಳ್ಳಿ ಮೂಲದ ನಿವಾಸಿಯಾಗಿದ್ದು, 8ಕ್ಕೂ ಹೆಚ್ಚು ಅಪರಾಧ ಪ್ರಕರಣ ಹಾಗೂ 3-4 ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಜೈಲಿನಲ್ಲಿದ್ದುಕೊಂಡೇ ಮೊಬೈಲ್ ಬಳಸಿಕೊಂಡು, ತನ್ನ ರೌಡಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಎಂಬ ಮಾಹಿತಿಗಳು ಪೊಲೀಸರಿಗೆ ಸಿಕ್ಕಿವೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಎಸ್.ಗಿರೀಶ್ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications