ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

RR ಆಸ್ಪತ್ರೆಗೆ ಆಕ್ಸಿಜನ್ ಪೂರೈಸುವಂತೆ ಕೈ ಮುಗಿದು ಕೇಳಿಕೊಂಡ ಸಂಸದ ಡಿ.ಕೆ ಸುರೇಶ್

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ 3: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಬಲಿಯಾದ ಬೆನ್ನಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ಆಕ್ಸಿಜನ್ ಖಾಲಿಯಾಗಲಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಸಂಸದ ಡಿ.ಕೆ ಸುರೇಶ್ ಬಹಿರಂಗಪಡಿಸಿದ್ದಾರೆ.

ರಾಮನಗರ ಜಿಲ್ಲೆಯ ಸುಮಾರು 200 ಮಂದಿ‌ ಕೋವಿಡ್ ಸೋಂಕಿತರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಸ್ಪತ್ರೆಯ ಆಕ್ಸಿಜನ್ ದಾಸ್ತಾನು ಇಂದು ಸಂಜೆಗೆ ಖಾಲಿಯಾಗುತ್ತಿದೆ. ಹಾಗಾಗಿ, ಮಾನ್ಯ ಮುಖ್ಯಮಂತ್ರಿಗಳು ತಕ್ಷಣವೇ ರಾಜರಾಜೇಶ್ವರಿ ಆಸ್ಪತ್ರೆಗೆ ಆಕ್ಸಿಜನ್ ಪುರೈಸುವಂತೆ ಮುಖ್ಯಮಂತ್ರಿಗಳಿಗೆ ಸಂಸದ ಡಿ.ಕೆ ಸುರೇಶ್ ಕೈ‌ಮುಗಿದು ಮನವಿ ಮಾಡಿದ್ದಾರೆ.

ಕೋವಿಶೀಲ್ಡ್ ಲಸಿಕೆ ಪೂರೈಕೆಗೆ ಕೇಂದ್ರದಿಂದ 1732 ಕೋಟಿ ರೂ ಬಿಡುಗಡೆಕೋವಿಶೀಲ್ಡ್ ಲಸಿಕೆ ಪೂರೈಕೆಗೆ ಕೇಂದ್ರದಿಂದ 1732 ಕೋಟಿ ರೂ ಬಿಡುಗಡೆ

RR ಆಸ್ಪತ್ರೆಯ ಆಡಳಿತ ಮಂಡಳಿ ಆಕ್ಸಿಜನ್ ಕೊರತೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಹಿತಿ ತಿಳಿಸಿದ್ದಾರೆ. ನಾನು ಕೂಡ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ, ಅರೋಗ್ಯ ಇಲಾಖೆಯ ಕಾರ್ಯದರ್ಶಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ್ದೇನೆ.

 Ramanagaraa: MP DK Suresh Asked CM Yediyurappa To Supply Oxygen To RR Hospital

ತಕ್ಷಣವೇ ರಾಜರಾಜೇಶ್ವರಿ ಅಸ್ಪತ್ರೆಗೆ ಆಕ್ಸಿಜನ್ ಒದಗಿಸಿ. ಚಾಮರಾಜನಗರದಲ್ಲಿ ನಡೆದ ಘಟನೆ ನಮ್ಮ ಜಿಲ್ಲೆಯಲ್ಲಿ ನಡೆಯುವುದು ಬೇಡ ಎಂದು ಮುಖ್ಯಮಂತ್ರಿಗಳಲ್ಲಿ ಸಂದದ ಡಿ.ಕೆ ಸುರೇಶ್ ಮನವಿ ಮಾಡಿದ್ದಾರೆ.

English summary
MP DK Suresh has appealed to the CM Yediyurappa to immediately supply oxygen to Rajarajeshwari Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X