ರಾಮನಗರ ರೇಷ್ಮೆ ಮಾರುಕಟ್ಟೆ ಜಮೀನು ವಿವಾದ ತಕ್ಷಣ ಬಗೆಹರಿಸಲು ಸಚಿವರಿಂದ ಖಡಕ್ ಎಚ್ಚರಿಕೆ
ರಾಮನಗರ, ಮೇ 11: ರೇಷ್ಮೆಗೆ ಹೆಸರಾಗಿರುವ ರಾಮನಗರ ಜಿಲ್ಲೆಯಲ್ಲಿ ರೇಷ್ಮೆ ಮಾರುಕಟ್ಟೆ ಮಾತ್ರ ಹೈಟೆಕ್ ಆಗಿಲ್ಲ. ಅತಿ ಶೀಘ್ರದಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಆಗಬೇಕು. ಆದರೆ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿಲ್ಲ. ಹೀಗಾಗಿ ಇದು ತಡವಾಗಿದೆ. ದಶಕಗಳಿಂದ ಇರುವ ಜಮೀನು ವಿವಾದ ಬಗೆಹರಿಯದಿರಲು ಅಧಿಕಾರಿಗಳ ನಿರಾಸಕ್ತಿಯೇ ಕಾರಣ ಎಂದು ರೇಷ್ಮೆ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ಡಿಸಿಎಂ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ರಾಮನಗರಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು, "ರಾಮನಗರದಲ್ಲಿ ಎರಡು ಎಕರೆ ವಿಸ್ತೀರ್ಣದಲ್ಲಿ ರೇಷ್ಮೆ ಮಾರುಕಟ್ಟೆ ಇದೆ. ಇದನ್ನು ಹೈಟೆಕ್ ಮಾರುಕಟ್ಟೆಯಾಗಿ ಪರಿವರ್ತಿಸಬೇಕು. ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಅತ್ಯಾಧುನಿಕವಾಗಿ ಮಾರುಕಟ್ಟೆ ನಿರ್ಮಾಣ ಆದರೆ ಎಲ್ಲರಿಗೂ ಅನುಕೂಲ ಆಗತ್ತೆ. ಆದ್ರೆ ಮಾರುಕಟ್ಟೆ ಹಿಂಭಾಗದಲ್ಲಿರುವ ಭೂಮಿ ವಿವಾದದಲ್ಲಿ ಇದೆ. ದಶಕಗಳಿಂದ ಈ ಭೂ ವಿವಾದ ಬಗೆಹರಿಸಿಲ್ಲ. ಡಿಸಿ ಕಚೇರಿ ಪಕ್ಕದಲ್ಲೂ ಮೂರು ಎಕರೆ ಜಾಗ ಇದೆ. ಅಲ್ಲಿರುವ ಆರ್ ಟಿಒ ಕಚೇರಿ ಸ್ಥಳಾಂತರಿಸಿ ರೇಷ್ಮೆ ಮಾರುಕಟ್ಟೆಗೆ ಆ ಸ್ಥಳ ಬಳಸಿಕೊಳ್ಳಬೇಕು. ಆದರೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಯಾವುದೂ ಸಾಧ್ಯವಾಗಿಲ್ಲ" ಎಂದು ಆರೋಪಿಸಿದರು.
ರೇಷ್ಮೆ ಮಾರುಕಟ್ಟೆ ಹಿಂಭಾಗದ ಜಮೀನು ವಿವಾದ ಕೋರ್ಟ್ ನಲ್ಲಿದೆ. ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿದರೆ ಕೋರ್ಟ್ ನಲ್ಲಿ ಪ್ರಕರಣ ಇಷ್ಟರೊಳಗೆ ಇತ್ಯರ್ಥ ಆಗುತ್ತಿತ್ತು. ಗಮನ ಹರಿಸದ ಕಾರಣ ನನೆಗುದಿಗೆ ಬಿದ್ದಿದೆ. ಇದನ್ನು ಶೀಘ್ರದಲ್ಲಿ ಪರಿಹರಿಸಲು ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಖಡಕ್ ಸೂಚನೆ ನೀಡಿದ್ದಾರೆ.

ಮಾರುಕಟ್ಟೆಯಲ್ಲಿ ವ್ಯವಹಾರ ಕೂಡ ಪಾರದರ್ಶಕವಾಗಿಲ್ಲ ಎಂಬ ದೂರುಗಳಿವೆ. ಈ ಕಾಲದಲ್ಲೂ ಕ್ಯಾಶ್ ವ್ಯವಹಾರ ನಡೆಸುತ್ತಾರೆ. ಆನ್ಲೈನ್ ವ್ಯವಹಾರ ಆರಂಭ ಆಗಬೇಕು. ಚೆಕ್, ಕ್ಯಾಶ್ ವ್ಯವಹಾರ ನಿಲ್ಲಬೇಕು. ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಇದಲ್ಲದೆ ರಾಮನಗರದಲ್ಲಿ ಮಾವು ಸಂಸ್ಕರಣ ಘಟಕ ಸ್ಥಾಪನೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹೆಚ್ಚು ಮಾವು ಬೆಳೆಯುವ ರಾಮನಗರದಲ್ಲಿ ಸಂಸ್ಕರಣಾ ಘಟಕವೇ ಇಲ್ಲ. ಕಣ್ವ ಡ್ಯಾಂ ಸಮೀಪದಲ್ಲಿ ಘಟಕ ಸ್ಥಾಪನೆ ಆಗಬೇಕು. ಅದಕ್ಕೆ ಆಗಬೇಕಾದ ಎಲ್ಲ ಸಿದ್ಧತೆಯನ್ನು ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications