ಜೆಡಿಎಸ್ ಭದ್ರಕೋಟೆ ಛಿದ್ರ... ರಾಮನಗರದಲ್ಲಿ ಸೋಲುಂಡ ನಿಖಿಲ್ ಕುಮಾರಸ್ವಾಮಿ
ರಾಮನಗರ: ಜೆಡಿಎಸ್ ಪ್ರತಿಷ್ಠೆಯ ಕಣವಾಗಿದ್ದ ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಮತ ಎಣಿಕೆ ಆರಂಭವಾಗಿದ್ದಾಗಿನಿಂದಲೂ ಜೆಡಿಎಸ್ ಹಿನ್ನಡೆ ಕಾಯ್ದುಕೊಂಡಿತ್ತು. ಕೊನೆಗೂ ನಿಖಿಲ್ ಕುಮಾರಸ್ವಾಮಿ ಸೋಲು ಈಗ ಜೆಡಿಎಸ್ ಭದ್ರಕೋಟೆಯನ್ನು ಕೆಡವಿದಂತಾಗಿದೆ.
ಎಚ್.ಡಿ. ಕುಮಾರ ಸ್ವಾಮಿಯವರಿಗೆ ಈ ಕ್ಷೇತ್ರವು ಮೊದಲಿನಿಂದಲೂ ಜೆಡಿಎಸ್ಗೆ ವರದಾನವಾಗಿತ್ತು. ಅವರು ಹಲವು ಬಾರಿ ಇದೇ ಕ್ಷೇತ್ರದಿಂದ ಗೆದ್ದಿದ್ದರು. ಕಳೆದ ಬಾರಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಿ ಗೆಲ್ಲಿಸಿದ್ದರು. ಆದರೆ ಈ ಬಾರಿ ರಾಮನಗರದಿಂದ ಪುತ್ರನನ್ನು ಗೆಲ್ಲಿಸುವಲ್ಲಿ ವಿಫಲವಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆದ್ದು ಬೀಗಿದ್ದಾರೆ.

ಈ ಬಾರಿಯ ಚುನಾವಣಾ ಪ್ರಚಾರಕ್ಕಾಗಿ ಎಚ್.ಡಿ ದೇವೇಗೌಡರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರಚಾರಕ್ಕಿಳಿದು ಮತಯಾಚಿಸಿದ್ದರು. ಜೊತೆಗೆ ಹಲವು ಲೆಕ್ಕಾಚಾರಗಳಂತೆ ನಿಖಿಲ್ ಕುಮಾರಸ್ವಾಮಿಯವರ ಜಯವನ್ನು ಮುಂದೇ ಊಹಿಸಿದ್ದರಾದರೂ, ಜೆಡಿಎಸ್ ಸೋಲು ಈಗ ದೊಡ್ಡ ಆಘಾತ ನೀಡಿದೆ.
ಹಾಗೆಯೇ ಈ ಬಾರಿ ಕುಮಾರಸ್ವಾಮಿಯವರ ಭದ್ರ ಕೋಟೆಯನ್ನು ಭೇದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಪ್ಲಾನ್ಗಳು ಯಶಸ್ಸನ್ನು ತಂದುಕೊಟ್ಟಿವೆ. ಕ್ಷೇತ್ರದಲ್ಲಿ ಈಗ ಗೆದ್ದಿರುವ ಇಕ್ಬಾಲ್ ಹುಸೇನ್ ಮೇಲೆ ನಂಬಿಕೆಯಿಟ್ಟು ತುಂಬಾ ಸಪೋರ್ಟ್ ಮಾಡಿದ್ದರು. ಅದರಂತೆ ಅವರ ಲೆಕ್ಕಾಚಾರಗಳು ಈಗ ತಪ್ಪಾಗಿಲ್ಲ.
ರಾಮನಗರದಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಮತಗಳೇ ನಿರ್ಣಾಯಕವಾಗಿದ್ದ ಕಾರಣ ಹಾಗೂ ರಾಮನಗರದಲ್ಲಿ ಕಳೆದ ಬಾರಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂಬ ಆರೋಪಗಳು ಈ ಬಾರಿಯ ಸೋಲಿಗೆ ಕಾರಣ ಎನ್ನಲಾಗುತ್ತದೆ. ಜೊತೆಗೆ ಇಕ್ಬಾಲ್ ಹುಸೇನ್ ಅಲ್ಪಸಂಖ್ಯಾತ ಅಭ್ಯರ್ಥಿಯಾಗಿರುವುದು ಕೂಡ ಗೆಲುವಿಗೆ ಮುಖ್ಯ ಕಾರಣವಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications