ಕುದೂರಿನಲ್ಲಿ ಪ್ರಚಾರ ನಡೆಸಿದ ನಿಖಿಲ್ ಸಿಡಿ ಬಗ್ಗೆ ಹೇಳಿದ್ದೇನು?
ರಾಮನಗರ, ಮೇ 5 : ಮಾಗಡಿ ಶಾಸಕ ಬಾಲಕೃಷ್ಣ ನನ್ನ ವಿರುದ್ಧ ಸಿಡಿ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ. ಆದರೆ ಅದು ಜಾಗ್ವಾರ್ ಚಿತ್ರದ ಸಿಡಿ ಇರಬೇಕು ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಎಚ್.ಸಿ.ಬಾಲಕೃಷ್ಣಗೆ ಟಾಂಗ್ ಕೊಟ್ಟಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜು ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಅವರು ಸಿನಿಮಾ ಶೈಲಿಯಲ್ಲಿ ಬಾಲಕೃಷ್ಣ ವಿರುದ್ಧ ಗುಡುಗಿದ್ದಾರೆ. ನಾನು ಅವರಿಂದ ಸಿಡಿ ಬಿಡುಗಡೆ ಮಾಡಿಸಿಕೊಳ್ಳುವ ಕೆಲಸವೇನು ಮಾಡಿಲ್ಲ. ಇಂತಹ ದೊಡ್ಡ ಕುಟುಂಬದಲ್ಲಿ ಹುಟ್ಟಿ ಕೀಳುಮಟ್ಟದ ಕೆಲಸ ಮಾಡಲ್ಲ ಎಂದು ತಿಳಿಸಿದ್ದಾರೆ.

ಸ್ವಲ್ಪವಾದರೂ ಸತ್ಯ ಇರಲಿ
ಯಾವುದೇ ಅರೋಪ ಮಾಡಿದಾಗ ಸ್ವಲ್ಪವಾದರೂ ಸತ್ಯ ಇರಬೇಕು. ರಾಜ್ಯದಲ್ಲೇ ಜೆಡಿಎಸ್ ಪರವಾದ ಅಲೆಯಿದೆ. ಅದೇ ರೀತಿ ನಾನು ಮೂರು ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಮುಗಿಸಿದ್ದೇನೆ. ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಬಂದಿದೆ. ಮಾಗಡಿಯಲ್ಲೂ ಎ.ಮಂಜು ಅವರ ಗೆಲವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋಲೋದು ಖಚಿತ
ಪ್ರಚಾರದ ವೇಳೆ ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ಮಾತನಾಡಿ, ಬಾಲಕೃಷ್ಣ ಈ ಬಾರಿ ಸೋಲೋದು ಖಚಿತ. ಹಾಗೇ ಚುನಾವಣೆಯಲ್ಲಿ ಪ್ರಕಟಣೆಯಾಗಿರುವ ನನ್ನ ಕ್ರಮಸಂಖ್ಯೆಯನ್ನ ಬದಲಿಸಿರುವ ಕರಪತ್ರಗಳನ್ನ ಮುದ್ರಿಸಿ ಕ್ಷೇತ್ರದಲ್ಲಿ ಹಂಚಿಸುತ್ತಿದ್ದಾರೆ.

ಕೇಸ್ ದಾಖಲಿಸುತ್ತೇನೆ
ಮತದಾರರಿಗೆ ದಾರಿತಪ್ಪಿಸಲು ಈ ಕೆಲಸಕ್ಕೆ ಕೈಹಾಕಿದ್ದಾರೆ. ಅವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡುತ್ತೇನೆ ಎಂದು ಕಿಡಿಕಾರಿದರು.

ಭರ್ಜರಿ ರೋಡ್ ಶೋ
ನಿಖಿಲ್ ಪ್ರಚಾರಕ್ಕೆ ಸಾವಿರಾರು ಜನ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು. ಕುದೂರು ಜಿಪಂ ವ್ಯಾಪ್ತಿಯಲ್ಲಿ ನಿಖಿಲ್ ಭರ್ಜರಿ ರೋಡ್ ಶೋ ನಡೆಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications