ಶಿರಾ ಫಲಿತಾಂಶದಿಂದ ಮನಸ್ಸಿಗೆ ನೋವಾಗಿದೆ ಎಂದ ನಿಖಿಲ್ ಕುಮಾರಸ್ವಾಮಿ
ರಾಮನಗರ, ನವೆಂಬರ್ 14: ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ, ಆದರೆ ಸೋಲು ಕಂಡಿರುವುದು ನೋವು ತಂದಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ರಾಮನಗರದ ನಗರ ಜಾನಪದ ಲೋಕದ ಬಳಿಯ ಕಾಮತ್ ಲೋಕ ರುಚಿ ಹೋಟೆಲ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿರಾ ಮತ್ತು ಆರ್.ಆರ್ ನಗರ ಕ್ಷೇತ್ರಗಳ ಮತದಾರರ ತೀರ್ಪನ್ನು ಗೌರವಿಸುತ್ತೆವೆ. ಹಿಂದಿನ ಉಪ ಚುನಾವಣೆಗಳನ್ನು ಗಮನಿಸಿದರೆ ಮತದಾರರು ಅಡಳಿತ ಪಕ್ಷಗಳ ಪರವಾಗಿ ನಿಂತಿದ್ದಾರೆ ಎಂದರು.
""ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ, ರೈತರ ಸಾಲಮನ್ನಾ ಮತ್ತು ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೊಟ್ಟ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಆದರೂ ಜನ ನಮ್ಮನ್ನು ತಿರಸ್ಕಾರ ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ನಮ್ಮ ತಾತ ಹಾಗೂ ನಮ್ಮ ತಂದೆ ಸೇರಿದಂತೆ ನಮ್ಮ ಕುಟುಂಬಕ್ಕೆ ರಾಮನಗರ ಜಿಲ್ಲೆಯ ಜನತೆ ರಾಜಕೀಯ ಜನ್ಮ ನೀಡಿದ್ದಾರೆ. ಹಾಗಾಗಿ ನಮ್ಮ ಕುಟುಂಬದ ಕರ್ಮಭೂಮಿ ರಾಮನಗರದಿಂದ ನನ್ನ ರಾಜ್ಯ ಪ್ರವಾಸವನ್ನು ಪ್ರಾರಂಭಿಸುತ್ತಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಜ್ಯಾದ್ಯಂತ ಪ್ರವಾಸ ಮಾಡಿ, ಯುವ ಕಾರ್ಯಕರ್ತರ ಸಂಘಟನೆ ಮಾಡುವುದು ನನ್ನ ಪ್ರವಾಸದ ಮುಖ್ಯ ಉದ್ದೇಶ. ನಾನು ಯುವ ಘಟಕದ ರಾಜ್ಯಾಧ್ಯಕ್ಷನಾಗಿ ಮುಂಬರುವ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ಕೊಡುವುದಾಗಿ ಎಂದರು.

2023ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ . 2023ರ ಸಾರ್ವತ್ರಿಕ ಚುನಾವಣೆ ವೇಳೆ ತಾವು ರಾಮನಗರದಿಂದ ಸ್ಪರ್ಧಿಸುವ ಉದ್ದೇಶವಿಲ್ಲ. ಆದರೆ ಈ ಬಗ್ಗೆ ಈಗಲೇ ಏನೂ ಹೇಳಲಾಗದು, ನಾನು ಚುನಾವಾಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಅಥವಾ ಇಲ್ಲ ಎಂಬುದನ್ನು ಕಾದು ನೋಡಿ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications