ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿತ್ಯಾನಂದ ಸ್ವಾಮಿ ಮಾಜಿ ಕಾರ್‌ ಚಾಲಕ ಲೆನಿನ್‌ ಕೋರ್ಟ್‌ಗೆ ಹಾಜರು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಆಗಸ್ಟ್ 9: ಬಿಡದಿ ನಿತ್ಯಾನಂದ ಸ್ವಾಮಿ ವಿರುದ್ಧದ ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣದ ವಿಚಾರಣೆ ಕೈಗೆತ್ತಿಗೊಂಡ ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ದೂರುದಾರ ಲೆನಿನ್ ಕುರುಪ್ಪನ್ ಸುದೀರ್ಘ ವಿಚಾರಣೆ ನಡೆಸಿತು.

ಬುಧವಾರ ನಿತ್ಯಾನಂದನ ಮಾಜಿ ಕಾರು ಚಾಲಕ ಲೆನಿನ್ ಕುರುಪ್ಪನ್ ಸಿಒಡಿ ಅಧಿಕಾರಿಗಳೊಂದಿಗೆ ರಾಮನಗರ ನ್ಯಾಯಾಲಯಕ್ಕೆ ಹಾಜರಾಗಿದ್ದರು. 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ ಇನ್ ಕ್ಯಾಮರಾ ಪ್ರೊಸಿಡಿಂಗ್ ನಡೆಸಿ ಲೆನಿನ್ ಹೇಳಿಕೆ ದಾಖಲಿಸಿಕೊಂಡರು.

ನಿತ್ಯಾನಂದನ ಸುತ್ತಿದ ಪ್ರಕರಣದ ಸಿಂಹಾವಲೋಕನ ನಿತ್ಯಾನಂದನ ಸುತ್ತಿದ ಪ್ರಕರಣದ ಸಿಂಹಾವಲೋಕನ

ಇನ್ನು ಆರತಿರಾವ್ ಅತ್ಯಾಚಾರದ ಅಪ್ರಕರಣದ ಪ್ರಮುಖ ಆರೋಪಿ ನಿತ್ಯಾನಂದ 3ನೇ ಆರೋಪಿ ಗೋಪಾಲಶೀಲಂ ರೆಡ್ಡಿ ಹಾಗೂ 5ನೇ ಆರೋಪಿ ರಾಗಿಣಿ ವಿಚಾರಣೆಗೆ ಗೈರಾಗಿದ್ದರು, ಧನಶೇಖರನ್ ಮತ್ತು ಜಮುನಾ ರಾಣಿ ಮಾತ್ರ ವಿಚಾರಣೆ ವೇಳೆ ಹಾಜರಾಗಿದ್ದರು.

Nityanand swami farmer driver Lenin attends to court

ಪ್ರಕರಣವನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ಕೂಡ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದೆ ವಿಚಾರಣೆಗೆ ಹಿನ್ನಡೆ ಉಂಟುಮಾಡುತ್ತಿದ್ದಾರೆಂದು ಸರ್ಕಾರಿ ಪರ ವಕೀಲ ವಡವಡಗಿ ಆಕ್ಷೇಪಣೆ ಸಲ್ಲಿಸಿದ್ದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಮುಂದಿನ ವಿಚಾರಣೆಗೆ ಆರೋಪಿಗಳು ತಪ್ಪಿಸಿಕೊಳ್ಳದಂತೆ ಹಾಜರಾಗಲು ತಾಕೀತು ಮಾಡಿದ್ದಾರೆ.

ಬೆಳಗ್ಗೆ ಹಾಗೂ ಮಧ್ಯಾಹ್ನ ಎರಡು ಸೆಷನ್‌ನಲ್ಲೂ ಲೆನಿನ್ ಕುರುಪ್ಪನ್ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯ ಇದೇ ತಿಂಗಳ 16ಕ್ಕೆ ವಿಚಾರಣೆ ಮುಂದೂಡಿತು.

English summary
Following rape case against Nityananda swami of Bidadi Ashram, car driver Lenin attended the hearing before Ramnagar court and recorded his statement on the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X