ಚನ್ನಪಟ್ಟಣ ಬೊಂಬೆಯ ಬೇಡಿಕೆ ಕಸಿದ ಸರಳ ದಸರಾ
ರಾಮನಗರ, ಅಕ್ಟೋಬರ್ 23: ವಿಶ್ವವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ, ಚನ್ನಪಟ್ಟಣ ಬೊಂಬೆ ತಯಾರಕರಿಗೆ ಮತ್ತು ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ಸರಳ ದಸರಾ ಆಚರಣೆಯ ನಿರ್ಧಾರ ಭಾರಿ ನಿರಾಸೆ ಮೂಡಿಸಿದೆ.
ಪ್ರತಿವರ್ಷ ಮೈಸೂರು ದಸರಾ ಪ್ರಾರಂಭವಾದರೆ ಬೊಂಬೆನಾಡಿನ ಕರಕುಶಲಕರ್ಮಿಗಳಲ್ಲಿ ಸಂತಸ ಮನೆ ಮಾಡುತ್ತಿತ್ತು, ದಸರಾ ಪ್ರಾರಂಭದ ದಿನದಿಂದ ಕೊನೆಯ ದಿನದವರೆಗೆ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರು ಚನ್ನಪಟ್ಟಣಕ್ಕೂ ಭೇಟಿ ನೀಡಿ ಬೊಂಬೆಗಳನ್ನು ಖರೀದಿಸುತ್ತಿದ್ದರು.
ಆದರೆ ಈ ಬಾರಿ ಕೊರೊನಾ ಭೀತಿಯಿಂದಾಗಿ ಪ್ರವಾಸಿಗರಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ವಿಶ್ವದಾದ್ಯಂತ ಕೊರೊನಾ ವೈರಸ್ ಅಬ್ಬರಕ್ಕೆ ಎಲ್ಲಾ ಉದ್ಯಮಗಳು ನಲುಗಿಹೋಗಿದೆ. ಅದೇ ರೀತಿ ವಿಶ್ವದಲ್ಲೇ ಪ್ರಸಿದ್ಧಿಯಾದ ಚನ್ನಪಟ್ಟಣದ ಗೊಂಬೆಗಳ ಉದ್ಯಮವೂ ಕೂಡ ಪಾತಾಳಕ್ಕೆ ಬಿದ್ದಿದೆ.

ವಿಶ್ವದ ಮೂಲೆ ಮೂಲೆಗೂ ರಫ್ತಾಗುತ್ತಿದ್ದ ಇಲ್ಲಿನ ಗೊಂಬೆಗಳು ಈಗ ಟಾಯ್ಸ್ ಶೋ ರೂಮ್ ಗಳಲ್ಲೇ ಧೂಳಿಡಿದಿವೆ. ದಸರಾ ಆರಂಭಕ್ಕೆ ಎರಡು ತಿಂಗಳು ಇದ್ದಂತೆ ಇಲ್ಲಿನ ಗೊಂಬೆಗಳಿಗೆ ಸಾಕಷ್ಟು ಬೇಡಿಕೆ ಇರುತ್ತಿತ್ತು, ಆದರೆ ಈ ಬಾರಿಯ ಸರಳ ದಸರಾದಿಂದಾಗಿ ಇಲ್ಲಿನ ಮಾರಾಟಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಧೂಳು ಹಿಡಿದಿದ್ದ ಎಲ್ಲಾ ಗೊಂಬೆಗಳನ್ನು ಇಟ್ಟುಕೊಂಡೇ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಬೊಂಬೆ ತಯಾರಕ ಈಶ್ವರ್ ರಾಜ್ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು-ಮೈಸೂರು ನಡುವಿನ ಚನ್ನಪಟ್ಟಣದಲ್ಲಿ ಹತ್ತಾರು ಟಾಯ್ಸ್ ಶೋ ರೂಮ್ಸ್ ಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ್ರವಾಸಿಗರು ಬೊಂಬೆ ಖರೀದಿ ಮಾಡುತ್ತಿದ್ದರು.
ಲಾಕ್ ಡೌನ್ ತೆರವಿನ ನಂತರ ಚೇತರಿಕೆ ಕಂಡಿದ್ದ ಬೊಂಬೆ ಮಾರಾಟ, ಸರ್ಕಾರದ ಸರಳ ದಸರಾ ನಿರ್ಧಾರದಿಂದ ಇದೀಗ ದಸರಾ ಗೊಂಬೆಗಳಿಗೆ ಬೇಡಿಕೆ ಇಲ್ಲದೇ ಕಂಗಲಾಗಿ ಹೋಗಿದ್ದಾರೆ. ಇನ್ನು ಪ್ರವಾಸಿಗರಿಲ್ಲದೇ ಶೋ ರೂಮ್ಗಳಲ್ಲಿ ವ್ಯಾಪಾರ-ವಹಿವಾಟು ಆಗುತ್ತಿಲ್ಲ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications