ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದಲ್ಲಿ ಇನ್ನೂ ಕೆಲ ದಿನ ಕಾರ್ಖಾನೆಗಳು ತೆರೆಯುವಂತಿಲ್ಲ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಏಪ್ರಿಲ್ 29: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪ್ರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸ್ಪಷ್ಟಪಡಿಸಿದ್ದಾರೆ.

Recommended Video

ನಾವ್ಯಾಕೆ ಬಲಿಪಶುಗಳಾಗ್ಬೇಕು ಎಂದ ರಾಮನಗರ ಜೈಲು ಸಿಬ್ಬಂದಿ,HDK ಕೊಟ್ಟ ಭರವಸೆ ಏನು? | HDK | Ramnagar Jail

ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಪಾದರಾಯನಪುರದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಣೆ ಮಾಡಿದ್ದು, ಈ ವ್ಯಾಪ್ತಿಯಲ್ಲಿ ಹಾಲಿ ದೈನಂದಿನ ಅಗತ್ಯ ವಸ್ತುಗಳ ಪೂರೈಸುವ ಅಂಗಡಿಗಳನ್ನು ಹೊರತುಪಡಿಸಿ ಇತರೆ ಯಾವುದೇ ರೀತಿಯ ಅಂಗಡಿ ಮುಂಗ್ಗಟ್ಟುಗಳನ್ನು ತೆರೆಯಲು ಅವಕಾಶವಿರುವುದಿಲ್ಲ.

No Industries Should Start In District Clarified Ramanagar DC

ಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ 1 ಲಕ್ಷ ಕೋಟಿ ರು: ನಿತಿನ್ ಗಡ್ಕರಿಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ 1 ಲಕ್ಷ ಕೋಟಿ ರು: ನಿತಿನ್ ಗಡ್ಕರಿ

ರಾಮನಗರ ನಗರ ವ್ಯಾಪ್ತಿ ಹೊರತುಪಡಿಸಿ ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರಗಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಲ್ ‌ಗಳು ಮತ್ತು ಬೃಹತ್ ಅಂಗಡಿ ಮಳಿಗೆಗಳನ್ನು ಹೊರತುಪಡಿಸಿ, ಸ್ಥಳೀಯ ಅಂಗಡಿಗಳು, ಒಂಟಿ ಅಂಗಡಿಗಳನ್ನು ಮತ್ತು ವಸತಿ ಸಮುಚ್ಛಯದಲ್ಲಿರುವ ಅಂಗಡಿಗಳನ್ನು ತೆರೆಯಬಹುದಾಗಿದೆ. ಈ ಅಂಗಡಿಗಳಲ್ಲಿ ಶೇ 50% ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುವುದು ಮತ್ತು ಸಿಬ್ಬಂದಿ, ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಪ್ರಕಟಣೆ ಹೊರಡಿಸಿದ್ದಾರೆ.

English summary
No industries should start in the district as per the order of central and state government, said dc Archana, Ramanagara dc clarified that as per central and state government order, no industries will open in district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X