ಯೋಗೇಶ್ವರ ಆರೋಪಕ್ಕೆ ಅನಿತಾ ಕುಮಾರಸ್ವಾಮಿ ತಿರುಗೇಟು

ರಾಮನಗರ, ನವೆಂಬರ್ 4 : 'ನಮ್ಮ ಪಕ್ಷಕ್ಕೆ ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿಲ್ಲ. ನಮ್ಮ ಪಕ್ಷ ಶಕ್ತಿಯುತವಾಗಿದೆ' ಎಂದು ಶಾಸಕ ಸಿ.ಪಿ.ಯೋಗೇಶ್ವರ ಅವರ ಆರೋಪಕ್ಕೆ ಅನಿತಾ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು, 'ಸಿ.ಪಿ.ಯೋಗೇಶ್ವರ ಅವರು ಬಿಜೆಪಿ ಸೇರಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಹೇಳಿದರು.

No JDS alliance with Congress : Anitha Kumaraswamy

'ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ನಾನು ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆಗಳಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ' ಎಂದರು.

ಚನ್ನಪಟ್ಟಣದ ಭೂಹಳ್ಳಿ, ಹುಣಸನಹಳ್ಳಿ, ಕೋಡಂಬಹಳ್ಳಿ, ನಾಗವಾರ, ಮಳೂರುಪಟ್ಣ ಸೇರಿದಂತೆ ಹಲವು ಹಳ್ಳಿಗಳಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯ ಜೆಡಿಎಸ್ ಪಕ್ಷಕ್ಕೆ ಇಲ್ಲ' ಎಂದು ಹೇಳಿದರು.

'2018ರ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಜೆಡಿಎಸ್ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ. ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ' ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+