ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣವಿಲ್ಲ: ದೇವೇಗೌಡ ಸ್ಪಷ್ಟನೆ
Recommended Video

ರಾಮನಗರ, ಡಿಸೆಂಬರ್.02: 'ನನ್ನ ರಾಜಕೀಯಕ್ಕೆ ಅಡ್ಡಿಮಾಡಲು ಯಾರಿಂದಲೂ ಆಗುವುದಿಲ್ಲ, ಹಾಗೇಯೇ ಜೆಡಿಎಸ್ ಬೆಳವಣಿಗೆಯನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರವರು ರಾಮನಗರದಲ್ಲಿ ಅಬ್ಬರಿಸಿದ್ದಾರೆ.
ರಾಮನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಭಾಗವಹಿಸಿದ್ದರು. ನಂತರ ಪರಿವೀಕ್ಷಣ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೊಂದಾಣಿಕೆ ರಾಜಕಾರಣ ಹಿಂದೆಯೂ ಮಾಡಿಲ್ಲ ಮುಂದೆಯೂ ಮಾಡಲ್ಲ, ಅದರ ಪ್ರಶ್ನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯುದ್ದಕ್ಕೆ ನಿಂತಮೇಲೆ ಇಂಟ್ರನಲ್ ಮತ್ತು ಎಕ್ಸಟ್ರನಲ್ ಅಂಡರ್ ಸ್ಟಾಂಡಿಂಗ್ ಇಲ್ಲ ರಾಜಕೀಯಕ್ಕೆ ಬಂದು 57 ವರ್ಷಗಳಾಗಿವೆ ನನ್ನ ರಾಜಕೀಯವನ್ನು ನಿಲ್ಲಿಸಲು ಆಗುವುದಿಲ್ಲ ಹಾಗೇಯೇ ಜೆಡಿಎಸ್ ಬೆಳವಣಿಗೆಯನ್ನು ಸಹ ತಪ್ಪಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನ ಎಚ್ ಡಿ ಕುಮಾರಸ್ವಾಮಿಯವರು ತಯಾರು ಮಾಡುತ್ತಿದ್ದಾರೆ. ಇಂದು ಸಹ ಅದೇ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದೆ. ಈಗಲೇ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ್ರೆ ಹಲವಾರು ಗೊಂದಲಗಳು ಉಂಟಾಗಿ ಕುತ್ತಿಗೆಗೆ ಬರುತ್ತೆ. ಹಾಗಾಗಿ ಎಲ್ಲವನ್ನು ಸಿದ್ದಪಡಿಸಿದ ಬಳಿಕ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಚನ್ನಪಟ್ಟಣ ಶಾಸಕ ಯೋಗೇಶ್ವರ್ಗೆ ಟಾಂಗ್ ನೀಡಿದ ಎಚ್.ಡಿ ದೇವೇಗೌಡರು 'ಅವರನ್ನು ಆಧುನಿಕ ಭಗೀರಥ ಅಂತಾರೆ. ಅವರು ನೀರನ್ನು ಎಲ್ಲಿಂದ ತಂದ್ದಿದಾರೆ, ಅದರ ಮೂಲ ಯಾರು, ಅದರ ಹಿಂದೆ ಯಾರಿದ್ದಾರೆ ಅಂತಾ ಹೇಳುತ್ತಾರ. ಅದು ಅವರಿಂದ ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications