ಮುಂಬರಲಿರುವ ಚುನಾವಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲ್ಲ: ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ರಾಮನಗರ, ಮೇ 18: ರಾಜ್ಯದಲ್ಲಿ ಮುಂಬರುವ 2024ರ ಲೋಕಸಭಾ ಇಲ್ಲವೇ 2028ರ ವಿಧಾನಸಭಾ ಚುನಾವಣೆ ಬಗ್ಗೆ ನಾನು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ರಾಮನಗರದ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟಣದಲ್ಲಿ ಗುರುವಾರ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ನಿಖಿಲ್ ಪ್ರಸಕ್ತ ವಿಧಾನಸಭೆಯಲ್ಲೂ ಸೋತರು. ಆದರೆ ತಾನು ಕ್ಷೇತ್ರ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದಿರುವ ಅವರು, ಮುಂಬರಲಿರುವ ಲೋಕಸಭೆ ಮತ್ತು 2028ರ ವಿಧಾನಸಭೆ ಚುನಾವಣೆ ಬಗ್ಗೆ ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.

ಅಧಿಕಾರ ಇಲ್ಲದಿದ್ದರೂ ಇಲ್ಲಿನ ಜನರಿಗೆ ಸೇವೆ ಮಾಡುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸರ್ಧೆ ಮಾಡುವ ವಿಚಾರ ಚಿಂತನೆ, ಪ್ರಶ್ನೆ ನನ್ನಲ್ಲಿ ಇಲ್ಲ. ಸದ್ಯ ತಂದೆ ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆ ಬಗ್ಗೆ ರಾಜ್ಯದ ಜನತೆಗೆ ತಿಳಿಸುವ ಒತ್ತಡದಲ್ಲಿದ್ದರು. ಹೀಗಿದ್ದರೂ ಸಹ ಚನ್ನಪಟ್ಟಣ ಜನ ನಮ್ಮನ್ನು ಕೈ ಬಿಡಲಿಲ್ಲ ಎಂದು ಮತದಾರರಿಗೆ ಅವರು ಅಭಿನಂದನೆ ತಿಳಿಸಿದರು.
ರಾಮನಗರದಲ್ಲಿ ಸೋತರು ಜನ ಅಪಾರ ಪ್ರೀತಿ ಕೊಟ್ಟಿದ್ದಾರೆ
ಚುನಾವಣೆ ಅಂದಮೇಲೆ ಅಲ್ಲಿ ಯಾರದರೂ ಒಬ್ಬರು ಗೆಲ್ಲಲೇಬೇಕು. ಸೋತ ಮಾತ್ರಕ್ಕೆ ನಾನು ಮನೆ ಸೇರುವ ವ್ಯಕ್ತಿಯಲ್ಲ.
ಯಾವ ಕಾರಣಕ್ಕೂ ರಾಮನಗರ ಬಿಡುವ ಪ್ರಶ್ನೆಯೇ ಇಲ್ಲ, ಕಾರ್ಯಕರ್ತರು ಎದೆಗುಂದಲೂ ನಾನು ಬಿಡುವುದಿಲ್ಲ. ನನಗೆ ರಾಮನಗರದಲ್ಲಿ 76 ಸಾವಿರಕ್ಕೂ ಹೆಚ್ಚು ಮತಗಳನ್ನು ಜನ ನೀಡಿದ್ದಾರೆ. ತಾಂತ್ರಿಕವಾಗಿ ನಾನು ಚುನಾವಣೆಯಲ್ಲಿ ಸೋತಿರಬಹುದು ಆದರೆ, ಕ್ಷೇತ್ರದ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ನನಗೆ ನೋವುಂಟಾದ ವಿಚಾರವೆಂದರೆ, 2004 ರಿಂದಲೂ ಕುಮಾರಸ್ವಾಮಿ ಅವರು ರಾಮನಗರ ದಿಂದ ಸ್ಪರ್ಧೆ ಮಾಡಿದ್ದಾರೆ. ಅಲ್ಲಿಂದ ಈವರೆಗೂ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಆದರೆ ಜನರು ಚುನಾವಣೆಯಲ್ಲಿ ಮಾತ್ರ ಬೇರೆಯದ್ದೇ ನಿರ್ಧಾರ ಕೈಗೊಂಡಿದ್ದಾರೆ. ಕಳೆದ ಬಾರಿ ಮಂಡ್ಯದಲ್ಲಾದಂತೆ ರಾಮನಗರದಲ್ಲಿಯೂ ಆಗಿದೆ ಎಂದು ಚುನಾವಣಾ ಅನುಭವ ಹಂಚಿಕೊಂಡರು.
ಜನರ ದಾರಿ ತಪ್ಪಿಸಿದ್ದಾರೆಂದು ಆರೋಪ
ಕಾಂಗ್ರೆಸ್ನಲ್ಲಿ ಯಾರು (ಒಕ್ಕಲಿಗ) ಸಿಎಂ ಆಗಬೇಕು ಎಂಬುದು ಅದು ಕಾಂಗ್ರೆಸ್ ಪಕ್ಷದೊಳಗಿನ ವಿಚಾರ, ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಮನಗರದಲ್ಲಿ ಆರ್ಥಿಕವಾಗಿ ಹಿಂದೂಳಿದವರ ಮತ ಪಡೆಯಲು ಮಧ್ಯರಾತ್ರಿ ಕೂಪನ್ ಓಚರ್ ಕೊಟ್ಟು ಅವರನ್ನು ದಾರಿ ತಪ್ಪಿಸಿದ್ದಾರೆ. ಜನರಿಗೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಅರಿವಾಗಲಿದೆ ಎಂದು ಆರೋಪಿಸಿದರು.
ಎಚ್.ಡಿ.ದೇವೇಗೌಡರು ಕಟ್ಟಿರುವ ಪಕ್ಷವನ್ನ ಬಲಿಷ್ಠಗೊಳಿಸುವ ಚಿಂತನೆ ನಡೆಸುತ್ತಿದ್ದೇನೆ. 2028ಕ್ಕೆ ರಾಮನಗರದಲ್ಲಿ ನನಗಿಂತ ಪ್ರಬಲ ಅಭ್ಯರ್ಥಿ ಕಣಕ್ಕಿಳಿಯಲು ಸಿದ್ಧವಿದ್ದರೆ ಆ ಬಗ್ಗೆ ಆಗ ಕಾರ್ಯಕರ್ತರಲ್ಲಿ ಚರ್ಚಿಸುತ್ತೇನೆ. ನಿಷ್ಠಾವಂತ ಕಾರ್ಯಕರ್ತರು ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲೇ ಹೆಚ್ಚಿದ್ದಾರೆ. ರಾಮನಗರದ ಸೋಲಿನ ವಿಚಾರದ ಬಗ್ಗೆ ಪಕ್ಷಾತೀತವಾಗಿ ಜನ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications