ಕೈ ಕಟ್ಟಿ ನಿಂತ ಫೋಟೋ ವೈರಲ್; ಎಚ್ಡಿಕೆ ಹೇಳಿದ್ದೇನು?
ರಾಮನಗರ, ಜುಲೈ 08; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮಂಡ್ಯ ಸಂಸದೆ ಸುಮಲತಾ ನಡುವಿನ ಮಾತಿನ ಯುದ್ಧ ಮುಂದುವರೆದಿದೆ. ಕುಮಾರಸ್ವಾಮಿ ದಿ. ಅಂಬರೀಶ್ ಜೊತೆಗಿರುವ ಹಿಂದಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Recommended Video
ಎಚ್. ಡಿ. ಕುಮಾರಸ್ವಾಮಿ ಅಂಬರೀಶ್ ಮುಂದೆ ಕೈಕಟ್ಟಿ ನಿಂತ ಫೋಟೋ ಇದಾಗಿದೆ. ಈ ಕುರಿತು ಗುರುವಾರ ರಾಮನಗರದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
"ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲುತ್ತೇನೆ. ಅಂಬರೀಶ್ಗೆ ನಾನೇನು ಗುಲಾಮನಾಗಿದ್ದೆನಾ?. ಈ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿಗೆ ಅದರ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು" ಎಂದು ಕುಮಾರಸ್ವಾಮಿ ಹೇಳಿದರು.

"ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್ ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡುತ್ತಿದ್ದೇವೆ. ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ದ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ" ಎಂದು ಪ್ರತಿಕ್ರಿಯಿಸಿದರು.
ಸುಮಲತಾ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, "ಆ ಹೆಣ್ಣು ಮಗಳ ಬಗ್ಗೆ ಇದೀಗ ಚರ್ಚೆ ಬೇಡ. ಮುಂದಿನ ಚುನಾವಣೆ ಸಂದರ್ಭದಲ್ಲಿ ನಾನು ಮಾತಾಡುತ್ತೇನೆ" ಎಂದು ತಿಳಿಸಿದರು.
ನಿಖಿಲ್ ಕುಮಾರಸ್ವಾಮಿ ಹೇಳಿಕೆ; ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, "ಕೆಆರ್ಎಸ್ ಡ್ಯಾಂಗೆ ಆದರದ್ದೇ ಆದ ಇತಿಹಾಸ ಇದೆ. ರಾಜರು ತಮ್ಮ ಒಡವೆಗಳನ್ನು ಅಡವಿಟ್ಟು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಅಂತಹ ಡ್ಯಾಂ ಬಿರುಕು ಬಿಟ್ಟಿದೆ ಎಂದು ಹೇಳಿದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತೆ. ಜನರಲ್ಲಿ ಗೊಂದಲ ಸೃಷ್ಟಿಸುವ ರೀತಿಯಲ್ಲಿ ಸಂಸದರು ಮಾತನಾಡುವುದು ಸರಿಯಲ್ಲ" ಎಂದರು.
"ಚುನಾವಣೆ ಅಂದ ಮೇಲೆ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು. ನನ್ನ ಸೋಲನ್ನ ನಾನು ಒಪ್ಪಿಕೊಂಡಿದ್ದೇನೆ. ಮಂಡ್ಯದಲ್ಲಿ ಐದು ಮುಕ್ಕಾಲು ಲಕ್ಷ ಜನರು ನನಗೆ ಮತ ಹಾಕಿದ್ದಾರೆ. ಅದು ಸಣ್ಣ ಸಂಖ್ಯೆ ಅಲ್ಲ, ಬೇಜಾರು ಮಾಡಿಕೊಳ್ಳುವಂತಹದ್ದು ಏನು ಇಲ್ಲ" ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
"ಸಂಸದರಾಗಿ ಮಂಡ್ಯ ಜನ ನಿಮಗೆ ಅವಕಾಶ ನೀಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡಿ. ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೀತಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲಿ. ಜೆಡಿಎಸ್ ಪಕ್ಷದವರಾಗಲಿ, ಬೇರೆ ಪಕ್ಷದವರಾಗಿರಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದರೆ ಕ್ರಮವಾಗಲಿ. ನಾನು ಒಬ್ಬ ನಾಗರಿಕನಾಗಿ ಸರ್ಕಾರವನ್ನು ಒತ್ತಾಯಿಸುತ್ತೇನೆ. ಸುಮ್ಮನೆ ಆರೋಪ ಮಾಡುವುದು, ಮಾಧ್ಯಮಗಳ ಗಮನ ತಮ್ಮತ್ತ ಸೆಳೆಯುವುದು ಸರಿಯಲ್ಲ" ಎಂದು ತಿಳಿಸಿದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications