ಕೈ ಕಟ್ಟಿ ನಿಂತ ಫೋಟೋ ವೈರಲ್; ಎಚ್ಡಿಕೆ ಹೇಳಿದ್ದೇನು?
ರಾಮನಗರ, ಜುಲೈ 08; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮಂಡ್ಯ ಸಂಸದೆ ಸುಮಲತಾ ನಡುವಿನ ಮಾತಿನ ಯುದ್ಧ ಮುಂದುವರೆದಿದೆ. ಕುಮಾರಸ್ವಾಮಿ ದಿ. ಅಂಬರೀಶ್ ಜೊತೆಗಿರುವ ಹಿಂದಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Recommended Video
ಎಚ್. ಡಿ. ಕುಮಾರಸ್ವಾಮಿ ಅಂಬರೀಶ್ ಮುಂದೆ ಕೈಕಟ್ಟಿ ನಿಂತ ಫೋಟೋ ಇದಾಗಿದೆ. ಈ ಕುರಿತು ಗುರುವಾರ ರಾಮನಗರದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
"ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲುತ್ತೇನೆ. ಅಂಬರೀಶ್ಗೆ ನಾನೇನು ಗುಲಾಮನಾಗಿದ್ದೆನಾ?. ಈ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿಗೆ ಅದರ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು" ಎಂದು ಕುಮಾರಸ್ವಾಮಿ ಹೇಳಿದರು.

"ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್ ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡುತ್ತಿದ್ದೇವೆ. ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ದ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ" ಎಂದು ಪ್ರತಿಕ್ರಿಯಿಸಿದರು.
ಸುಮಲತಾ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, "ಆ ಹೆಣ್ಣು ಮಗಳ ಬಗ್ಗೆ ಇದೀಗ ಚರ್ಚೆ ಬೇಡ. ಮುಂದಿನ ಚುನಾವಣೆ ಸಂದರ್ಭದಲ್ಲಿ ನಾನು ಮಾತಾಡುತ್ತೇನೆ" ಎಂದು ತಿಳಿಸಿದರು.
ನಿಖಿಲ್ ಕುಮಾರಸ್ವಾಮಿ ಹೇಳಿಕೆ; ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, "ಕೆಆರ್ಎಸ್ ಡ್ಯಾಂಗೆ ಆದರದ್ದೇ ಆದ ಇತಿಹಾಸ ಇದೆ. ರಾಜರು ತಮ್ಮ ಒಡವೆಗಳನ್ನು ಅಡವಿಟ್ಟು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಅಂತಹ ಡ್ಯಾಂ ಬಿರುಕು ಬಿಟ್ಟಿದೆ ಎಂದು ಹೇಳಿದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತೆ. ಜನರಲ್ಲಿ ಗೊಂದಲ ಸೃಷ್ಟಿಸುವ ರೀತಿಯಲ್ಲಿ ಸಂಸದರು ಮಾತನಾಡುವುದು ಸರಿಯಲ್ಲ" ಎಂದರು.
"ಚುನಾವಣೆ ಅಂದ ಮೇಲೆ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು. ನನ್ನ ಸೋಲನ್ನ ನಾನು ಒಪ್ಪಿಕೊಂಡಿದ್ದೇನೆ. ಮಂಡ್ಯದಲ್ಲಿ ಐದು ಮುಕ್ಕಾಲು ಲಕ್ಷ ಜನರು ನನಗೆ ಮತ ಹಾಕಿದ್ದಾರೆ. ಅದು ಸಣ್ಣ ಸಂಖ್ಯೆ ಅಲ್ಲ, ಬೇಜಾರು ಮಾಡಿಕೊಳ್ಳುವಂತಹದ್ದು ಏನು ಇಲ್ಲ" ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
"ಸಂಸದರಾಗಿ ಮಂಡ್ಯ ಜನ ನಿಮಗೆ ಅವಕಾಶ ನೀಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡಿ. ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೀತಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲಿ. ಜೆಡಿಎಸ್ ಪಕ್ಷದವರಾಗಲಿ, ಬೇರೆ ಪಕ್ಷದವರಾಗಿರಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದರೆ ಕ್ರಮವಾಗಲಿ. ನಾನು ಒಬ್ಬ ನಾಗರಿಕನಾಗಿ ಸರ್ಕಾರವನ್ನು ಒತ್ತಾಯಿಸುತ್ತೇನೆ. ಸುಮ್ಮನೆ ಆರೋಪ ಮಾಡುವುದು, ಮಾಧ್ಯಮಗಳ ಗಮನ ತಮ್ಮತ್ತ ಸೆಳೆಯುವುದು ಸರಿಯಲ್ಲ" ಎಂದು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications