ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಕರಾಳ ದಿನ ಆಚರಿಸಿದ ವಾಟಾಳ್ ನಾಗರಾಜ್
ರಾಮನಗರ, ಜುಲೈ 27: ಕೋವಿಡ್-19 ನಿಭಾಯಿಸುವಲ್ಲಿ ವಿಫಲವಾಗಿದ್ದರೂ, ರಾಜ್ಯ ಸರ್ಕಾರ ತನ್ನ ಒಂದು ವರ್ಷದ ಸಂಭ್ರಮದಲ್ಲಿ ಮುಳುಗಿರುವುದನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರಾಳ ದಿನ ಆಚರಣೆ ಮಾಡಿದ್ದಾರೆ.
Recommended Video
ರಾಮನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಐಜೂರು ವೃತ್ತದಲ್ಲಿ ಕರಾಳ ಭೂತ ದಹಿಸಿ ಸರ್ಕಾರದ ವಿರುದ್ಧ ವಾಟಾಳ್ ಪಕ್ಷದ ಅಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಜನರು ಬಲಿಯಾಗುತ್ತಿದ್ದಾರೆ, ಬಿಜೆಪಿ ಸರಕಾರ ಒಂದು ವರ್ಷದ ಸಂಭ್ರಮದಲ್ಲಿದೆ. ಇವತ್ತು ಸಂಭ್ರಮದ ದಿನ ಅಲ್ಲ, ಕರಾಳ ದಿನ ಎಂದು ಸರ್ಕಾರದ ವಿರುದ್ಧ ವಾಟಾಳ್ ನಾಗರಾಳ್ ಹರಿಹಾಯ್ದರು.

ರಾಜ್ಯ ಬಿಜೆಪಿ ಸರ್ಕಾರ ಶೂನ್ಯ ಸಾಧನೆ ಮಾಡಿದ್ದರೂ, ಪ್ರತಿ ದಿನ ಪತ್ರಿಕೆಗಳಲ್ಲಿ ಸರ್ಕಾರವನ್ನು ಹೊಗಳುವ ಜಾಹೀರಾತುಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವಲ್ಲಿ ತಲ್ಲೀನವಾಗಿದೆ. ರಾಜ್ಯದಲ್ಲಿ ಪ್ರತಿ ದಿನ 5 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ತುತ್ತಾಗುತಿದ್ದಾರೆ. ಕೋವಿಡ್-19 ತಡೆಗಟ್ಟುವಲ್ಲಿ ಸಿಎಂ ಯಡಿಯೂರಪ್ಪ ಸಂಪೂರ್ಣ ವಿಫಲರಾಗಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ಹೆಚ್ಚಾಗಿದೆ. ಕೋವಿಡ್-19 ಗೆ ಬಲಿಯಾದವರ ಅಂತ್ಯ ಸಂಸ್ಕಾರ ಯೋಗ್ಯ ರೀತಿಯಲ್ಲಿ ನಡೆಯುತ್ತಿಲ್ಲ, ಸರ್ಕಾರದಲ್ಲಿ ಮುಖ್ಯಮಂತ್ರಿಗಳಿಗೆ ಮತ್ತು ಮಂತ್ರಿಗಳ ನಡುವೆ ಸಾಮರಸ್ಯ ಇಲ್ಲ, ಹಾಗಾಗಿ ಕೊರೊನಾವನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದೆ ಎಂದು ವಾಟಾಳ್ ಆರೋಪ ಮಾಡಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications