ಚನ್ನಪಟ್ಟಣದಲ್ಲಿ ಪ್ರತ್ಯಕ್ಷರಾದರು ಬರಿಗೈಯಲ್ಲಿ ವಿಭೂತಿ ಕೊಡುವ ಬಾಬಾ
ಚನ್ನಪಟ್ಟಣ, ನವೆಂಬರ್ 28: ಪಟ್ಟಣದ ಚಿಕ್ಕಮಳೂರಿನಲ್ಲಿ ಕಳೆದ ಒಂದು ವಾರದಿಂದ ಸನ್ಯಾಸಿಯೊಬ್ಬರು ಕಾಣಿಸಿಕೊಂಡಿದ್ದು, ಬರಿಗೈನಲ್ಲಿ ಭಕ್ತರಿಗೆ ವಿಭೂತಿ, ತಾಯತ, ಸಿಹಿ ತಿನಿಸು ನೀಡುವ ಈ ಬಾಬಾ ನೋಡಲು ಭಕ್ತರ ದಂಡೇ ಹರಿದುಬರುತ್ತಿದೆ.
ಕಳೆದ ಕೆಲ ದಿನಗಳಿಂದ ಕಾಣಿಸಿಕೊಂಡಿರುವ ಸನ್ಯಾಸಿಯ ಈ ಚಮತ್ಕಾರವನ್ನು ಕಾಣಲು ಜನ ಮರಳೋ ಜಾತ್ರೆ ಮರಳೋ ಎಂಬಂತೆ ಜನ ಮುಗಿಬೀಳುತ್ತಿದ್ದಾರೆ. ಅಷ್ಟೇ ಅಲ್ಲ, ಬಾಬಾನಿಂದ ಆರ್ಶೀವಾದ ಪಡೆದು ಇವರು ಶಿರಡಿ ಬಾಬಾ, ಸತ್ಯಸಾಯಿ ಬಾಬಾ ಅವತಾರ ಎಂದೂ ಹೊಗಳುತ್ತಿದ್ದಾರೆ.
ಪ್ರೇಮ್ ಸಾಯಿ ಬಾಬಾ ಎಂಬ ಹೆಸರಿರುವ ಈ ಸನ್ಯಾಸಿ ವಾರದ ಹಿಂದೆ ಚಿಕ್ಕಮಳೂರಿನ ಸ್ಮಶಾನದಲ್ಲಿ ಪುಟ್ಟಸ್ವಾಮಿಗೌಡ ಎಂಬುವವರ ಸಮಾಧಿ ಬಳಿ ಕಾಣಿಸಿಕೊಂಡಿದ್ದರು. ಇದೀಗ ಮೂರು ದಿನಗಳಿಂದ ಮಂಗಳವಾರಪೇಟೆಯ ಪ್ರಕಾಶ್ ಎಂಬುವವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರಿಗೈನಲ್ಲಿ ಭಕ್ತರಿಗೆ ವಿಭೂತಿ, ತಾಯತ, ಸಿಹಿ ತಿನಿಸು ನೀಡುತ್ತಾ ಪವಾಡ ಮಾಡುತ್ತಿದ್ದಾರೆ, ಅವರಿಂದ ಆಶೀರ್ವಾದ ತೆಗೆದುಕೊಳ್ಳಬೇಕು ಎಂಬ ಸುದ್ದಿ ಜನರ ಬಾಯಿಯಿಂದ ಬಾಯಿಗೆ ಹರಡಿ ಬಾಬಾ ಬಳಿ ಬಂದು ಆರ್ಶಿವಾದ ಪಡೆದು ಸಮಸ್ಯೆಗಳನ್ನು ಹೇಳಿಕೊಂಡು ಕಷ್ಟ ಪರಿಹಾರಕ್ಕೆ ಭಜನೆ ಮಾಡುತ್ತಿದ್ದಾರೆ. ಬರುವ ಭಕ್ತರಿಗೆ ಪ್ರಸಾದ ರೂಪದಲ್ಲಿ ವಿಭೂತಿ, ಕೆಲವರಿಗೆ ಸಾಯಿಬಾಬಾ ಫೋಟೋ, ತಾಯತ, ಸಿಹಿ ತಿನಿಸು ನೀಡುತ್ತಿದ್ದಾರಂತೆ.
ಆರ್ಶಿವಾದ ಬೇಡಿ ಬರುವ ಭಕ್ತರಿಂದ ಯಾವುದೇ ಕಾಣಿಕೆ ಪಡೆಯದೇ ದರ್ಶನ ನೀಡಿ, ಸಮಸ್ಯೆಗಳಿಗೆ ಪರಿಹಾರವನ್ನೂ ಹೇಳುತ್ತಿದ್ದಾರೆ ಎಂಬ ಮಾತು ಚನ್ನಪಟ್ಟಣದಾದ್ಯಂತ ಹರಿದಾಡುತ್ತಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications