ರಾಮನಗರ: ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರ ದಾಳಿ
ರಾಮನಗರ, ಜನವರಿ 1: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕಣ್ವ ಜಲಾಶಯ ಬಳಿಯ ರೆಸಾರ್ಟ್, ಪ್ರಕೃತಿಯ ಸೊಬಗನ್ನು ಸವಿಯುವಂತಹರಿಗೆ ಹೇಳಿ ಮಾಡಿಸಿದ ಜಾಗ. ಆದರೆ ಇಂತಹ ಜಾಗದಲ್ಲಿ ಕೋವಿಡ್ ಮತ್ತು ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ, ಹೊಸ ವರ್ಷದ ಸಂಭ್ರಮಾಚರಣೆ ತೊಡಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ನ್ಯೂ ಇಯರ್ ಸೆಲೆಬ್ರೇಷನ್ಗೆ ಬ್ರೇಕ್ ಬಿದ್ದ ಹಿನ್ನಲೆಯಲ್ಲಿ ಬೆಂಗಳೂರು ಮತ್ತಿತರ ಕಡೆಯಿಂದ ನೂರಾರು ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬಂದು ಮೋಜು ಮಸ್ತಿಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಸಂಭ್ರಮಾಚರಣೆಗೆ ಬ್ರೇಕ್ ಹಾಕಿದಲ್ಲದೇ ರೆಸಾರ್ಟ್ ಮಾಲೀಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಓಮಿಕ್ರಾನ್ ವೈರಸ್, ಕೋವಿಡ್ 3ನೇ ಅಲೆ ಭೀತಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ್ಯೂ ಇಯರ್ ಸೆಲೆಬ್ರೇಷನ್ಗೆ ಬ್ರೇಕ್ ಹಾಕಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮನಗರ ಜಿಲ್ಲೆಯ ಕಣ್ವ ಜಲಾಶಯದ ಸಮೀಪದ ಟ್ರೀಕ್ಯೂಟ್ರಾ ರೆಸಾರ್ಟ್ನಲ್ಲಿ ಈ ಟಫ್ ರೂಲ್ಸ್ಗಳನ್ನು ಗಾಳಿಗೆ ತೂರಿ ಪಾರ್ಟಿ ಅಯೋಜಿಸಲಾಗಿತ್ತು.

ಇನ್ನು ಆನ್ಲೈನ್ ಬುಕ್ಕಿಂಗ್ ಮೂಲಕ ನ್ಯೂ ಇಯರ್ ಸೆಲೆಬ್ರೇಷನ್ ಪಾರ್ಟಿಗೆ ರೆಸಾರ್ಟ್ ಸರ್ವ ರೀತಿಯಲ್ಲೂ ತಯಾರಾಗಿತ್ತು. ಅಲ್ಲದೇ ಬೆಟ್ಟಗುಡ್ಡಗಳ ತಪ್ಪಲು, ಹಸಿರಿನಿಂದ ಕಂಗೊಳಿಸುತ್ತಿರುವ ಕಣ್ವ ಜಲಾಶಯದ ಬ್ಯಾಕ್ ವಾಟರ್ ಬಳಿಯ ರೆಸಾರ್ಟ್ನಲ್ಲಿ ಪಾರ್ಟಿ ಎಂದಾಗ ಜನ ತಾ ಮುಂದು, ನಾ ಮುಂದು ಎಂಬಂತೆ ಇಲ್ಲಿಗೆ ಆಗಮಿಸಿ ಮದ್ಯದ ನಶೆಯಲ್ಲಿ ಮೈಮರೆತು ಸೆಲೆಬ್ರೇಷನ್ಗೆ ಮುಂದಾಗಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್ ನೇತೃತ್ವದಲ್ಲಿ ರಾಮನಗರ ಪೊಲೀಸರು ತಡರಾತ್ರಿ ದಿಢೀರ್ ದಾಳಿ ನಡೆಸಿ ಮೋಜು ಮಸ್ತಿಗೆ ಬ್ರೇಕ್ ಹಾಕಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮ್ಯೂಸಿಕ್ ಸೌಂಡ್ ಇರುವಂತಿಲ್ಲ, ಐದಕ್ಕಿಂತ ಹೆಚ್ಚು ಜನ ಗುಂಪು ಸೇರಬಾರದು, 10 ಗಂಟೆಯ ಬಳಿಕ ಪಬ್, ಬಾರ್ಗಳಲ್ಲಿ ಕೂತು ಕುಡಿಯುವಂತಿಲ್ಲ, ರಸ್ತೆಯಲ್ಲಿ ಕುಣಿದು ಕುಪ್ಪಳಿಸುವಂತಿಲ್ಲ ಎಂದು ರಾಮನಗರ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿತ್ತು.
ಜಿಲ್ಲೆಯ ರೆಸಾರ್ಟ್ನಲ್ಲಿ ಶೇಕಡ 50ರಷ್ಟು ಮಂದಿಗೆ ಅವಕಾಶ ಹಾಗೂ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ ಎಂದು ಕಟ್ಟುನಿಟ್ಟಿನ ರೂಲ್ಸ್ ಜಾರಿಗೆ ತಂದಿದೆ. ಇಷ್ಟೆಲ್ಲ ಟಫ್ ರೂಲ್ಸ್ ಇದ್ದರೂ, ಟ್ರೀಕ್ಯೂಟ್ರಾ ರೆಸಾರ್ಟ್ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು.
ಅಲ್ಲದೇ ನೂರಾರು ಟೆಂಟ್ಗಳನ್ನು ಹಾಕಿ ಇಲ್ಲಿ ಜನ ತಂಗಲು ಸಹ ವ್ಯವಸ್ಥೆ ಮಾಡಲಾಗಿತ್ತು. ಇನ್ನು ರೆಸಾರ್ಟ್ನಲ್ಲಿ ಯುವಕ, ಯುವತಿಯರು ಸೇರಿದಂತೆ ಹಲವರು ಮದ್ಯದ ನಶೆಯಲ್ಲೇ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಇವರಿಗೆ ಪೊಲೀಸರು ಬೈದು, ಬುದ್ದಿವಾದ ಹೇಳಿ ವಾಪಸ್ ಕಳಿಸಿದರು.

ಬೆಂಗಳೂರು ಮತ್ತಿತರ ಕಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ಮದ್ಯಪಾನ ಮಾಡುತ್ತಾ ಮೋಜಿನಲ್ಲಿ ಮುಳುಗಿದ್ದರು. ನಿಯಮ ಉಲ್ಲಂಘಿಸಿ ಕನ್ನಮಂಗಲ ಗ್ರಾಮದ ಸನಿಹಕ್ಕೆ ಬಂದು ಪಾರ್ಟಿ ನಡೆಸುತ್ತಿದ್ದಾರೆಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ.
ರೆಸಾರ್ಟ್ನಲ್ಲಿ ಹಾಕಲಾಗಿದ್ದ ಶಾಮಿಯಾನ, ಟೆಂಟ್, ಮ್ಯೂಸಿಕ್ ಸಿಸ್ಟಮ್, ಮದ್ಯದ ಬಾಟಲ್ಗಳು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದು, ಟ್ರೀಕ್ಯೂಟ್ರಾ ರೆಸಾರ್ಟ್ ಮಾಲೀಕ ಸ್ವಾಮಿ ಮೇಲೆ ಎಪಿಡೆಮಿಕ್ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಒಟ್ಟಾರೆ ಓಮಿಕ್ರಾನ್ ವೈರಸ್ ಸೇರಿದಂತೆ ಕೊರೊನಾ 3ನೇ ಅಲೆ ಹರಡುವ ಭೀತಿಯಿಂದ ರಾಜ್ಯ ಸರ್ಕಾರ ಏನೇ ಕಠಿಣ ನಿಯಮ ಜಾರಿಗೆ ತಂದರೂ, ಜನ ಮಾತ್ರ ಇದು ತಮಗೆ ಅನ್ವಯವಾಗುವುದಿಲ್ಲ ಎಂಬಂತೆ ಮೋಜು-ಮಸ್ತಿಗೆ ಮುಂದಾಗಿದ್ದಾರೆ. ಇನ್ನು ಕೋವಿಡ್ ನಿಯಮ ಉಲ್ಲಂಘಿಸಿ ಪಾರ್ಟಿ ಸಂಘಟಿಸಿದ ರೆಸಾರ್ಟ್ ಮಾಲೀಕ ಸ್ವಾಮಿ ಎಂ.ಕೆ. ದೊಡ್ಡಿ ಪೊಲೀಸರ ವಶದಲ್ಲಿದ್ದಾನೆ.
Recommended Video
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications