ರಾಮನಗರ: 5 ಕೋಟಿ ರೂಪಾಯಿ ಮೌಲ್ಯದ ಕಳವು ಮಾಲುಗಳನ್ನು ಹಿಂದಿರುಗಿಸಿದ ಪೋಲಿಸರು
ರಾಮನಗರ, ಸೆಪ್ಟೆಂಬರ್, 30: ಜಿಲ್ಲೆಯಲ್ಲಿ 2022 ನೇ ಸಾಲಿನಲ್ಲಿ ನಡೆದಿದ್ದ ದರೋಡೆ, ಕಳ್ಳತನ, ಸುಲಿಗೆ ಸೇರಿದಂತೆ ಇನ್ನೂ ಹಲವು ಪ್ರಕರಣಗಳನ್ನು ಜಿಲ್ಲಾ ಪೋಲಿಸರು ಭೇದಿಸಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸುಮಾರು 5 ಕೋಟಿ ಮೌಲ್ಯದ ಚಿನ್ನಾಭರಣ ಒಳಗೊಂಡಂತೆ ವಿವಿಧ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಿದರು.
ಕೇಂದ್ರ ವಲಯ ಐಜಿ ಕೆ.ಚಂದ್ರಶೇಖರ್ ನೇತೃತ್ವದಲ್ಲಿ 2022ನೇ ಸಾಲಿನಲ್ಲಿ ನಡೆದಿದ್ದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಚಿನ್ನ ಸೇರಿದಂತೆ ಸುಮಾರು 5 ಕೋಟಿಗೂ ಹೆಚ್ಚು ಮೌಲ್ಯದ ಕಳವು ಮಾಲುಗಳನ್ನು ವಾರಸುದಾರರಿಗೆ ವಾಪಸ್ ನೀಡಲಾಗಿದೆ. ಪ್ರಾಪರ್ಟಿ ರಿಟರ್ನ್ ಕಾರ್ಯಕ್ರಮ ಇಂದು ಜಿಲ್ಲಾ ಪೊಲೀಸ್ ಭವನದಲ್ಲಿ ನಡೆದಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಉಪಸ್ಥಿತರಿದ್ದರು.
ವಾರಸುದಾರರಿಗೆ 10 ಕೆ.ಜಿ ಚಿನ್ನ ವಾಪಸ್ಸು
ಜಿಲ್ಲೆಯಲ್ಲಿ 2022ನೇ ಸಾಲಿನಲ್ಲಿ ಇಲ್ಲಿಯವರೆಗೆ ವರದಿಯಾದ ದರೋಡೆ, ಸುಲಿಗೆ ಸೇರಿದಂತೆ ಸುಮಾರು ಒಟ್ಟು 236 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಪ್ರಕರಣಗಳಲ್ಲಿನ 10 ಕೆ.ಜಿ 863 ಗ್ರಾಂ ಚಿನ್ನವನ್ನು, 13 ಗ್ರಾಂ ಬೆಳ್ಳಿ ವಸ್ತುಗಳನ್ನು, 101 ದ್ವಿಚಕ್ರ ವಾಹನ, 14 ಇತರೆ ವಾಹನ, 58 ಮೊಬೈಲ್ಗಳು ಹಾಗೂ 6 ಟಿ.ವಿ, ಲ್ಯಾಪ್ಟಾಪ್ಗಳನ್ನು ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಇನ್ನು 1 ವಾಚ್, 1006 ಕೆ.ಜಿಯುಳ್ಳ 500 ಮೀಟರ್ ಕಾಪರ್ ಮತ್ತು ಅಲ್ಯೂಮಿನಿಯಂ ವೈರ್, 3 ಕೆ.ಜಿ 500 ಗ್ರಾಂ ಒಣಗಿದ ಗಾಂಜಾ, 4 ಗ್ಯಾಸ್ ಸಿಲಿಂಡರ್ ಸೇರಿದಂತೆ ಇತರೆ ವಸ್ತುಗಳಾದ ವಟೀಪೈಡ್ ಬಾಕ್ಸ್, ಪಾರ್ಕಿಂಗ್ ಟೈಲ್ಸ್ ಬಾಕ್ಸ್, ಹಾಗೂ 1 ಟನ್ ಟೆಲಿಪೋನ್ ಕೇಬಲ್ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ
ವಸ್ತುಗಳನ್ನು ಕಳೆದು ಕೊಂಡಿದ್ದ ವಾರಸುದಾರಿಗೆ ಮತ್ತೆ ಅವುಗಳನ್ನು ಹಿಂತಿರುಗಿಸಲಾಯಿತು. ನಂತರ ಮಾತನಾಡಿದ ಕೇಂದ್ರ ವಲಯ ಐಜಿ ಕೆ.ಚಂದ್ರಶೇಖರ್, ಜಿಲ್ಲೆಯಲ್ಲಿ ನಮ್ಮ ಪೊಲೀಸರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಹೆಚ್ಚಿನ ಪ್ರಕರಣಗಳು ಕಡಿಮೆ ಸಮಯದಲ್ಲೇ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚಗೆ ವ್ಯಕ್ತಪಡಿಸಿದರು. ಅಲ್ಲದೇ ಇನ್ನು ಹಲವು ಪ್ರಕರಣಗಳು ತನಿಖೆಯ ಹಂತದಲ್ಲಿದ್ದು, ಆ ಪ್ರಕರಣಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚುತ್ತಾರೆ ಎಂಬ ವಿಶ್ವಾಸವಿದೆ. ಒಡವೆ, ವಾಹನ ಸೇರಿದಂತೆ ಹಲವು ವಸ್ತುಗಳನ್ನು ಕಳೆದುಕೊಂಡು ನೋವು ಆನುಭಿಸಿದ ಜನರು, ಕಳೆದುಕೊಂಡ ವಸ್ತುಗಳು ಮತ್ತೆ ಸಿಕ್ಕಾಗ ಅವರ ಮುಖದಲ್ಲಿ ಮೂಡುವ ಮಂದಹಾಸ ಪೊಲೀಸರ ಶ್ರಮಕ್ಕೆ ತೃಪ್ತಿ ತರುತ್ತದೆ ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications