ಚಿರು ಸರ್ಜಾ ನೆಚ್ಚಿನ "ಬೃಂದಾವನ"ದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ
ಬೆಂಗಳೂರು, ಜೂನ್ 08: ಹೃದಯಾಘಾತದಿಂದ ನಿನ್ನೆ ಸಾವನ್ನಪ್ಪಿದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆಯನ್ನು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಸಮೀಪದ ಫಾರ್ಮ್ ಹೌಸ್ ನಲ್ಲಿ ಇಂದು ನಡೆಸಲು ತೀರ್ಮಾನಿಸಲಾಗಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ನಡೆಸಲಾಗುತ್ತಿದೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫಾರ್ಮ್ ಹೌಸ್ ಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. 4 ಎಕರೆಯಲ್ಲಿರುವ ಈ ಫಾರ್ಮ್ ಹೌಸ್ ಗೆ ಬೃಂದಾವನ ಎಂದು ಹೆಸರಿಡಲಾಗಿದೆ. ಈ ಬೃಂದಾವನದಲ್ಲೇ ಚಿರು ಸರ್ಜಾ ಅಂತಿಮ ಸಂಸ್ಕಾರ ನೆರವೇರಿಸಲು ಕುಟುಂಬವು ತೀರ್ಮಾನಿಸಿದೆ. ಈ ಮೊದಲು ಚಿರು ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು, ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನೆರವೇರಿಸುವುದಾಗಿ ತಿಳಿದುಬಂದಿತ್ತು. ಇದೀಗ ಕನಕಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.

ಬೃಂದಾವನಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ಚಿರು
ಚಿರು ಸರ್ಜಾ ಅವರ ಅಂತ್ಯಕ್ರಿಯೆಯನ್ನು ಬೃಂದಾವನದಲ್ಲಿ ನೆರವೇರಿಸಲಾಗುತ್ತಿದ್ದು, ಈ ಸ್ಥಳದಲ್ಲಿ ಸಿಬ್ಬಂದಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಮೂರು ವರ್ಷಗಳ ಹಿಂದೆ ನಟ, ಚಿರು ಸರ್ಜಾ ಸಹೋದರ ಧ್ರುವ ಸರ್ಜಾ ಈ ಫಾರ್ಮ್ ಹೌಸ್ ಅನ್ನು ಖರೀದಿಸಿದ್ದರು. ಚಿರು ಸರ್ಜಾ ಆಗಾಗ್ಗೆ ಈ ಫಾರ್ಮ್ ಹೌಸ್ ಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು.

ಚಿರು ನೆಚ್ಚಿನ ಜಾಗದಲ್ಲೇ ಅಂತ್ಯಸಂಸ್ಕಾರ
ಈ ಬೃಂದಾವನ ಫಾರ್ಮ್ ಹೌಸ್ ಚಿರಂಜೀವ ಸರ್ಜಾಗೆ ನೆಚ್ಚಿನ ಸ್ಥಳವಾಗಿತ್ತು. ಆಗಾಗ್ಗೆ ಅಲ್ಲಿಗೆ ಭೇಟಿ ನೀಡುತ್ತಿದ್ದರು ಚಿರು, ಧ್ರುವ ಸರ್ಜಾ ಸಹೋದರರು. ಇಂದು ಅವರ ನೆಚ್ಚಿನ ಈ ಸ್ಥಳದಲ್ಲೇ ಅವರ ಅಂತ್ಯಕ್ರಿಯೆನಡೆಯುತ್ತಿದೆ.

ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ
ಇಂದು ಮಧ್ಯಾಹ್ನ 1 ಗಂಟೆಗೆ ಚಿರು ಸರ್ಜಾ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಾಗುವುದು. ಸಂಜೆ 4 ಗಂಟೆ ಸುಮಾರಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ಗೌಡ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಲಿದ್ದಾರೆ. ಈಗಾಗಲೇ ಫಾರ್ಮ್ ಹೌಸ್ ಮುಂಭಾಗ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಹೃದಯಾಘಾತದಿಂದ ಸಾವನ್ನಪ್ಪಿದ್ದ ಚಿರು
ನಿನ್ನೆ ಮಧ್ಯಾಹ್ನದ ವೇಳೆಗೆ ನಟ ಚಿರಂಜೀವಿ ಸರ್ಜಾ ಅವರು ತೀವ್ರ ಹೃದಯಾಘಾತದಿಂದ ಜಯನಗರದ ಅಪೊಲೊ ಸಾಗರ್ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದರು. ಚಿತ್ರರಂಗದ ಎಲ್ಲಾ ಹಿರಿಯ, ಕಿರಿಯ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದ್ದರು. ಬಸವನಗುಡಿಯ ಅವರ ನಿವಾಸದಲ್ಲಿ ಚಿರು ಸರ್ಜಾ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications