ರಾಷ್ಟ್ರಪತಿ ಸ್ವಾಗತಕ್ಕೆ ಅಮೃತಾ ಕಾಲೇಜ್ ಕ್ಯಾಂಪಸ್ ಸಜ್ಜು!
ರಾಮನಗರ, ಡಿಸೆಂಬರ್ 29 : ಅಮೃತಾ ವಿದ್ಯಾಸಂಸ್ಥೆ ಪ್ರಾರಂಭವಾಗಿ 111 ವರ್ಷ ಕಳೆಯುತ್ತಿರುವ ಹಿನ್ನೆಲೆ ವಾರ್ಷಿಕೋತ್ಸವ ಸಮಾರಂಭಕ್ಕೆ ಭಾರತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿ ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾಂಪಸ್ ನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಮನಗರ ಜಿಲ್ಲೆ ಬಿಡದಿಯ ತಿಮ್ಮೇಗೌಡನದೊಡ್ಡಿ ಗ್ರಾಮದ ಬಳಿಯಿರುವ ಅಮೃತಾ ಇಂಜಿನಿಯರಿಂಗ್ ಕಾಲೇಜಿನ ನೂತನ ಕ್ಯಾಂಪಸ್ ಲೋಕಾರ್ಪಣೆ ಮಾಡುವುದಕ್ಕೆ ಭಾರತದ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ಡಿ. 30 ರಂದು ಆಗಮಿಸಲಿದ್ದಾರೆ.

ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಸ್ಥೆ 1906 ರಲ್ಲಿ ಪ್ರಾರಂಭವಾಗಿದ್ದು ಇಂದಿಗೆ 111 ವರ್ಷ ಪೂರೈಸುತ್ತಿರುವ ಹಿನ್ನೆಲೆ ಅದ್ದೂರಿ ವಾರ್ಷಿಕೋತ್ಸವ ಸಮಾರಂಭವನ್ನು ಸಹ ರಾಷ್ಟ್ರಪತಿಗಳು ಉದ್ಘಾಟನೆ ಮಾಡಲಿದ್ದಾರೆ. ಡಿಸೆಂಬರ್ 30 ರಂದು ಮಧ್ಯಹ್ನ 3 ಗಂಟೆಗೆ ರಾಮನಾಥ್ ಕೋವಿಂದ್ ಆಗಮಿಸಿ ಎರಡು ಕಾರ್ಯಕ್ರಮ ಉದ್ಘಾಟಿಸಿ ಒಂದು ಗಂಟೆಗಳ ಕಾಲ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇನ್ನು ರಾಷ್ಟ್ರಪತಿಗಳ ಆಗಮನಕ್ಕೆ ಕಾಲೇಜು ಆವರಣ ಸಕಲರೀತಿಯಲ್ಲೂ ಸಿದ್ಧವಾಗುತ್ತಿದ್ದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರಪತಿಗಳ ಆಗಮನಕ್ಕೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ರಾಷ್ಟ್ರಪತಿಗಳ ಜೊತೆ ರಾಜ್ಯಪಾಲರಾದ ವಜುಭಾಯಿ ವಾಲಾ, ಕೇಂದ್ರ ಸಚಿವರಾದ ಅನಂತಕುಮಾರ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಶಾಸಕ ಹೆಚ್.ಸಿ.ಬಾಲಕೃಷ್ಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ರಾಷ್ಟ್ರಪತಿಗಳ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದ್ದು ಸುಮಾರು 2,500ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೇ ರಾಷ್ಟ್ರಪತಿಗಳ ಆಗಮನದಿಂದಾಗಿ ಕಾಲೇಜು ಆವರಣದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವೀರಣ್ಣ ಚರಂತಿ ಮಠ್ ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications