ರಾಮನಗರದ ಪ್ರವಾಸಿ ತಾಣಗಳಿಗೆ ಭೇಟಿ ನಿಷೇಧ
ರಾಮನಗರ, ಡಿಸೆಂಬರ್ 29: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕೋವಿಡ್ ಹರಡುವಿಕೆ ತಡೆಯಲು ರಾಮನಗರ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜನವರಿ 2ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಡಿಸೆಂಬರ್ 30ರಿಂದ ಜನವರಿ 2ರ ತನಕ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ರಾಮನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಹೆಚ್ಚು ಜನರು ಸೇರುವ ಸಾಧ್ಯತೆ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕೋವಿಡ್-19 ಮಾರ್ಗಸೂಚಿ ಜನವರಿ 31ರವರೆಗೂ ವಿಸ್ತರಣೆ
ಜಿಲ್ಲೆಯ ಪ್ರಸಿದ್ಧ ಆರು ಪ್ರವಾಸಿತಾಣಗಳಾದ ಚನ್ನಪಟ್ಟಣ ತಾಲ್ಲೂಕಿನ ಕಣ್ವ ಜಲಾಶಯ, ಮಾಗಡಿ ತಾಲ್ಲೂಕಿನ ಸಾವನದುರ್ಗ, ಮಂಚನಬೆಲೆ ಜಲಾಶಯ ಮತ್ತು ಕನಕಪುರ ತಾಲ್ಲೂಕಿನ ಸಂಗಮ, ಮೇಕೆದಾಟು ಹಾಗೂ ಚುಂಚಿಪಾಲ್ಸ್ ಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ
ಡಿಸೆಂಬರ್ 30 ರಿಂದ ಜನವರಿ 2ರ ತನ ಈ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್ ಸಂಕಷ್ಟದಲ್ಲೂ ಶ್ರೀಕಂಠೇಶ್ವರ ದೇಗುಲಕ್ಕೆ 1.98 ಕೋಟಿ ಆದಾಯ
ಬೆಂಗಳೂರಿನ ಸಮೀಪದಲ್ಲಿರುವ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳು ಅಂದರೆ ಬೆಂಗಳೂರು ನಿವಾಸಿಗಳಿಗೆ ಅಚ್ಚುಮೆಚ್ಚು. ರಜಾ ದಿನಗಳು, ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ.
ಕೋವಿಡ್-19 ಬಳಿಕ ಪ್ರವಾಸಿತಾಣಗಳಲ್ಲಿ ಜನಜಂಗುಳಿ ಕಡಿಮೆಯಾಗಿತ್ತು. ಈಗ ಪುನಃ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೆಚ್ಚು ಜನರು ಭೇಟಿ ನೀಡುತ್ತಿದ್ದಾರೆ. ಆದ್ದರಿಂದ, ಕೋವಿಡ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ಕೋವಿಡ್ ತಡೆಗಟ್ಟುವ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿವೆ. ಮಾರ್ಗಸೂಚಿಗಳ ಅನ್ವಯ ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದ್ದಾರೆ.
Recommended Video
ಈ ಕ್ರಮಗಳನ್ನು ಜಾರಿಗೆ ತರುವುವಲ್ಲಿ ಲೋಪವಾದರೆ ತಾಲೂಕು ದಂಡಾಧಿಕಾರಿಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರನ್ನು ನೇರ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಯಾವ-ಯಾವ ಪ್ರವಾಸಿ ತಾಣಗಳು
ಹೊಸ ವರ್ಷದ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರವಾಸಿ ತಾಣಗಳ ವಿವರಗಳು ಇಲ್ಲಿವೆ... #Ramanagara #NewYear2021 #TouristPlaces #Kannadanews pic.twitter.com/8M07iXsLft
— oneindiakannada (@OneindiaKannada) December 29, 2020