ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದ ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ರಾಮನಗರದಲ್ಲಿ ಪ್ರತಿಭಟನೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಆಗಸ್ಟ್ 16: ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಘೋಷಣೆ ಮಾಡಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.

 ಪ್ರವಾಹ ಪೀಡಿತ ಗ್ರಾಮಗಳ ಹೆಸರು ಬದಲಾಯಿಸಲ್ಲ : ಯಡಿಯೂರಪ್ಪ ಪ್ರವಾಹ ಪೀಡಿತ ಗ್ರಾಮಗಳ ಹೆಸರು ಬದಲಾಯಿಸಲ್ಲ : ಯಡಿಯೂರಪ್ಪ

ರಾಮನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಗರದ ಐಜೂರು ವೃತ್ತದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರವನ್ನು ಒತ್ರಾಯಿಸಿದರು. ರಾಜ್ಯದಲ್ಲಿ ನೆರೆ ಹಾವಳಿ ಹೆಚ್ಚಾಗಿದೆ, ಎಷ್ಟೋ ಮಂದಿ ಪ್ರಾಣ ಕಳೆದುಕೊಂಡ್ಡಿದ್ದಾರೆ. ಸಾವಿರಾರು ಜನರು ಮನೆ ಮಠ, ಜಮೀನು ಕಳೆದುಕೊಂಡಿದ್ದಾರೆ. ಇಷ್ಟಾದರೂ ಕೇಂದ್ರ ಸರಕಾರ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು.

Protest In Ramanagar To Demand Flood As National Disaster

ರಾಜ್ಯದ ಹಲವು ಪ್ರದೇಶಗಳಲ್ಲಿ ಒಂದಲ್ಲ ಒಂದು ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇರುತ್ತದೆ. ಹಾಗಾಗಿ ಕೇಂದ್ರ ಸರಕಾರ ಆ ಪ್ರದೇಶಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಸಮರೋಪದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿದರು.

English summary
Kasturi karnataka janapara organisation activists demanded central government to declare states flood as national disaster.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X