ರಾಮನಗರ; ಸೇತುವೆ ಬಿದ್ದು 5 ತಿಂಗಳಾದರೂ ದುರಸ್ತಿಯೇ ಆಗಿಲ್ಲ
ರಾಮನಗರ, ಏಪ್ರಿಲ್ 04; ಕಳೆದ ಐದು ತಿಂಗಳ ಹಿಂದೆ ಬಿದ್ದ ಬಾರಿ ಮಳೆಗೆ ಕೊಚ್ಚಿಹೋದ ಸೇತುವೆಯನ್ನು ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಮುರಿದ ಸೇತುವೆಯಲ್ಲೇ ಜನರು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡುತ್ತಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಜೋಗಿದೊಡ್ಡಿ ಗ್ರಾಮದ ಬಳಿ ಹಳ್ಳಕ್ಕೆ ನಿರ್ಮಾಣ ಮಾಡಲಾಗಿದ್ದ ಸೇತುವೆ ಮುರಿದು ಬಿದ್ದು 5 ತಿಂಗಳು ಕಳೆದಿದೆ. ಸೇತುವೆ ದುರಸ್ತಿ ಮಾಡದ ಕಾರಣ ಮುರಿದು ಬಿದ್ದಿರುವ ಸೇತುವೆ ಮೇಲೆಯೇ ವಾಹನ ಸವಾರರು ಸಂಚಾರ ನಡೆಸುತ್ತಿದ್ದಾರೆ.
2021ರ ನವೆಂಬರ್ನಲ್ಲಿ ಸುರಿದ ಬಾರಿ ಮಳೆಗೆ ಈ ಸೇತುವೆ ಮುರಿದು ಬಿದ್ದಿತ್ತು. ಮುರಿದು ಬಿದ್ದ ಸೇತುವೆಯನ್ನು ಮತ್ತೆ ನಿರ್ಮಾಣ ಮಾಡಬೇಕಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಸೇತುವೆ ಪಕ್ಕದಲ್ಲೇ ಇದ್ದ ಜಮೀನಿನ ಮಾಲೀಕನ ಜೊತೆಗೆ ಒಪ್ಪಂದ ಮಾಡಿಕೊಂಡು ತಾತ್ಕಾಲಿಕವಾಗಿ ಓಡಾಟ ನಡೆಸುವ ರಸ್ತೆ ನಿರ್ಮಾಣ ಮಾಡಿ ಮುರಿದು ಬಿದ್ದ ಸೇತುವೆಯ ನಿರ್ಮಾಣದ ಕೆಲಸ ಮರೆತಿದ್ದಾರೆ.

"ಖಾಸಗಿ ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯನ್ನು ಮುಚ್ಚಿರುವ ಕಾರಣ ಜನರು ಓಡಾಡಲು ರಸ್ತೆಯೇ ಇಲ್ಲದಂತಾಗಿ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೂ ತಂದರು ಯಾರು ಸ್ಪಂದನೆ ಮಾಡುತ್ತಿಲ್ಲ" ಎಂದು ಗ್ರಾಮದ ಜಗದೀಶ್ ಆರೋಪ ಮಾಡಿದ್ದಾರೆ.
ಜೋಗಿದೊಡ್ಡಿ ಸೇರಿದಂತೆ ಮಾಗಡಿ ಭಾಗದ ಸುಮಾರು 7 ರಿಂದ 8 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದು ಐದಾರು ತಿಂಗಳು ಕಳೆದಿದೆ. ಅಲ್ಲದೇ ಜೋಗಿದೊಡ್ಡಿ ಗ್ರಾಮದ ಜನರು ತಮ್ಮ ಜಮೀನುಗಳ ಬಳಿಗೆ ಹೋಗಲು ಹಾಗೂ ಜಾನುವಾರುಗಳಿಗೆ ಮೇವು ತರಲು 5-6 ಕಿಲೋಮೀಟರ್ ಸುತ್ತಿ ಬಳಸಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇತುವೆ ಮುರಿದು ಬಿದ್ದಾಗ, ಮುರಿದ ಸೇತುವೆ ಪಕ್ಕದ ರೈತನ ಜಮೀನಿನಲ್ಲಿ ತಿಂಗಳ ಬಾಡಿಗೆ ರೂಪದಲ್ಲಿ ಹಣ ನೀಡುವುದಾಗಿ ಹೇಳಿ 12 ಲಕ್ಷ ಖರ್ಚು ಮಾಡಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿದರು. ಆದರೆ ಒಪ್ಪಂದದಂತೆ ಜಮೀನಿನ ಮಾಲೀಕನಿಗೆ ಅಧಿಕಾರಿಗಳು ಹಣ ಕೊಡದ ಹಿನ್ನೆಲೆಯಲ್ಲಿ ಜಮೀನು ಮಾಲೀಕ ತಾತ್ಕಾಲಿಕ ರಸ್ತೆಯನ್ನ ಕಿತ್ತು ಹಾಕಿದ್ದಾರೆ.
ಜಮೀನು ಮಾಲೀಕನೊಂದಿಗೆ ಚರ್ಚೆ ಮಾಡಿ ಮುಚ್ಚಿರುವ ತಾತ್ಕಾಲಿಕ ರಸ್ತೆಯನ್ನು ತೆರವು ಮಾಡಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಬೇಕು ಹಾಗೂ ಮುರಿದು ಬಿದ್ದಿರುವ ಸೇತುವೆಯನ್ನು ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಸರ್ಕಾರ ಹಾಗೂ ಸಂಬಂದಿಸಿದ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಒಟ್ಟಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಸಡ್ಡೆಯಿಂದ ಇಂದು 7-8 ಗ್ರಾಮದ ಜನರು ರಸ್ತೆಗಾಗಿ ಪರಿತಪಿಸುವಂತಾಗಿದೆ. ಇನ್ನಾದರೂ ಅಧಿಕಾರಿಗಳು ಹೊಸ ಸೇತುವೆ ನಿರ್ಮಾಣಮಾಡಿ ಜೋಗಿದೊಡ್ಡಿ ಸೇರಿದಂತೆ ಹತ್ತಾರು ಹಳ್ಳಿಯ ಗ್ರಾಮಸ್ಥರ ಬವಣೆ ತಪ್ಪಿಸಬೇಕಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications